ಮೈಸೂರು: ನೈರುತ್ಯ ರೈಲ್ವೆ, ಮೈಸೂರು ವಿಭಾಗದಲ್ಲಿ ಇಂದು ಸಂವಿಧಾನ ದಿನವನ್ನು ಗೌರವಪೂರ್ಣ ಹಾಗೂ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು.
ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ನಿರ್ವಾಹಕರಾದ ಶಮ್ಮಾಸ್ ಹಮೀದ್ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಇಂಗ್ಲಿಷ್ ನಲ್ಲಿ ಪಠಿಸಿದರು, ಕನ್ನಡದಲ್ಲಿ ಲೋಹಿತೇಶ್ವರ, ಹಿರಿಯ ವಾಣಿಜ್ಯ ವ್ಯವಸ್ಥಾಪಕರು ಇವರು ಪಠಿಸಿದರು. ರಾಷ್ಟ್ರದ ಸಂವಿಧಾನದಲ್ಲಿ ಅಳವಡಿಸಿರುವ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಆದರ್ಶಗಳಿಗೆ ಮರುನಿಷ್ಠೆಯನ್ನು ವ್ಯಕ್ತಪಡಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶಮ್ಮಾಸ್ ಹಮೀದ್ ಅವರು, ರಾಷ್ಟ್ರದ ಪ್ರಗತಿಗೆ ಮಾರ್ಗದರ್ಶಕವಾಗಿರುವ ಪ್ರಸ್ತಾವನೆಯ ಮಹತ್ವವನ್ನು ಒತ್ತಿ ಹೇಳಿದರು.
ಸಂವಿಧಾನಾತ್ಮಕ ತತ್ವಗಳನ್ನು ನಿತ್ಯಕೃತ್ಯಗಳಲ್ಲಿ ಕಾಪಾಡುವ ಜವಾಬ್ದಾರಿ ಎಲ್ಲ ನೌಕರರ ಮೇಲಿದೆ ಎಂದು ಅವರು ನೆನಪಿಸಿದರು. ದೇಶ ನಿರ್ಮಾಣದಲ್ಲಿ ನಿಷ್ಠೆ, ಪಾರದರ್ಶಕತೆ ಮತ್ತು ಏಕತೆಯೊಂದಿಗೆ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಶೀಘ್ರವೇ ರಾಜ್ಯದಲ್ಲಿ 7 ಜಿಟಿಟಿಸಿ ಸ್ಥಾಪನೆ ಕಾಮಗಾರಿ ಆರಂಭ: ಸಿಎಂ ಸಿದ್ಧರಾಮಯ್ಯ
BIG NEWS : ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ‘CM’ ಮಾಡುತ್ತೇವೆ : ಸಚಿವ ಕೆಜೆ ಜಾರ್ಜ್ ಹೇಳಿಕೆ








