ಗದಗ : ಗದಗ ತಹಸೀಲ್ದಾರ್ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಬೆಟಿಗೇರಿಯ ನಾಡಕಚೇರಿ ಉಪ ತಹಸೀಲ್ದಾರ್ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ತಹಸಿಲ್ದಾರ್ ಕಚೇರಿಗೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಏಕಾಏಕಿ ಭೇಟಿ ನೀಡಿದ್ದರು.
ಕಾನೂನು ಸಚಿವ ಹೆಚ್ ಕೆ ಪಾಟೀಲ್ ದಿಢೀರ್ ಭೇಟಿ ನೀಡಿದ್ದ ವೇಳೆ, ಪತಿ ಬದುಕಿದ್ದರು ಸಹ ವಿಧವಾ ವೇತನ ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ಪರಿಶೀಲನೆ ವೇಳೆ ದಾಖಲೆ ಸಮೇತ ಅಧಿಕಾರಿ ಸಿಕ್ಕಾಕಿಕೊಂಡಿದ್ದಾರೆ. ಕೂಡಲೇ ಅಧಿಕಾರಿ ಅಮಾನತು ಗೊಳಿಸುವಂತೆ ಸಚಿವ HK ಪಾಟೀಲ್ ಸೂಚನೆ ನೀಡಿದ್ದಾರೆ. ಸಚಿವರ ಸೂಚನೆಯ ಮೇರೆಗೆ ಇದೀಗ ತಹಶೀಲ್ದಾರ್ ಸಸ್ಪೆಂಡ್ಡ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.