Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹಕ್ಕೆ 10 ನಾಗರಿಕರು ಬಲಿ : ಭಯಾನಕ ವಿಡಿಯೋ ವೈರಲ್ | WATCH VIDEO

02/07/2025 10:42 AM

BREAKING : ಸಚಿವ MB ಪಾಟೀಲ್ ಗೆ ‘ಮುಖ್ಯಮಂತ್ರಿ’ ಆಗೋ ಯೋಗ ಇದೆ : ಕೋಡಿಶ್ರೀ ಸ್ಪೋಟಕ ಭವಿಷ್ಯ!

02/07/2025 10:36 AM

BREAKING : ಪೊಲೀಸರಿಂದ ಮೋಸ್ಟ್ ವಾಂಟೆಡ್ ಕ್ರಿಮಿನಲ್ `ಅನುಭವ್ ಶುಕ್ಲಾ’ ಕಾಲಿಗೆ ಗುಂಡೇಟು | Anubhav Shukla

02/07/2025 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ: ಸಚಿವ ಎಂ.ಬಿ ಪಾಟೀಲ್
KARNATAKA

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ: ಸಚಿವ ಎಂ.ಬಿ ಪಾಟೀಲ್

By kannadanewsnow0903/02/2025 4:40 PM

ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ.

ಸಮಾವೇಶದ ಸಿದ್ಧತೆ ಮತ್ತು ನಾನಾ ಇಲಾಖೆಗಳ ನಡುವಿನ ಸಮನ್ವಯಕ್ಕೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಉಪಸ್ಥಿತರಿದ್ದರು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು.

ಈಗಾಗಲೇ 2,000ಕ್ಕೂ ಹೆಚ್ಚು ಹೂಡಿಕೆದಾರರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿ, ನೋಂದಾಯಿಸಿಕೊಂಡಿದ್ದಾರೆ. ಸಮಾವೇಶದಲ್ಲಿ 18 ದೇಶಗಳು ಪಾಲ್ಗೊಳ್ಳುತ್ತಿದ್ದು, ಈ ಪೈಕಿ 9 ದೇಶಗಳು ಪ್ರತ್ಯೇಕ ಪೆವಿಲಿಯನ್ ಹೊಂದಿರಲಿವೆ. ಈ ಸಂದರ್ಭದಲ್ಲಿ 60ಕ್ಕೂ ಹೆಚ್ಚು ಉದ್ಯಮ ಪರಿಣತರು ಗೋಷ್ಠಿಗಳಲ್ಲಿ ಮಾತನಾಡಲಿದ್ದಾರೆ. ಜೊತೆಗೆ ಸರಕಾರವು ರಾಜ್ಯದಲ್ಲಿ ಹೂಡಿಕೆಗೆ ಇರುವ ಪ್ರಶಸ್ತ ಅವಕಾಶಗಳನ್ನು ಮತ್ತು ನಮ್ಮಲ್ಲಿರುವ ಉದ್ಯಮಸ್ನೇಹಿ ನೀತಿ ಹಾಗೂ ಪ್ರೋತ್ಸಾಹಕ ಕ್ರಮಗಳನ್ನು ಹೂಡಿಕೆದಾರರಿಗೆ ಮನವರಿಕೆ ಮಾಡಿಕೊಡಲಿದೆ ಎಂದು ಅವರು ಹೇಳಿದ್ದಾರೆ.

ಈ ಸಮಾವೇಶಕ್ಕೆ ಎಂ ಬಿ ಪಾಟೀಲರು ಕಳೆದ ಕೆಲವು ತಿಂಗಳುಗಳಿಂದಲೇ ಶ್ರಮಿಸುತ್ತಿದ್ದಾರೆ. ಇದರ ಭಾಗವಾಗಿ ಅಮೆರಿಕ, ಯೂರೋಪ್, ದಕ್ಷಿಣ ಕೊರಿಯಾ, ಜಪಾನ್ ದೇಶಗಳಲ್ಲಿ ಅವರು ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿ ರೋಡ್-ಶೋ ಮತ್ತು ಹೂಡಿಕೆದಾರರ ಜೊತೆ ಮಾತುಕತೆಗಳನ್ನು ನಡೆಸಿದ್ದಾರೆ. ಸಮಾವೇಶದಲ್ಲಿ ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಇನ್ನೂ ಹಲವು ನೀತಿಗಳನ್ನು ಅನಾವರಣಗೊಳಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

’ಪ್ರಗತಿಯ ಮರುಕಲ್ಪನೆ’ಯ ಥೀಮ್

ಜಾಗತಿಕ ಹೂಡಿಕೆದಾರರ ಸಮಾವೇಶವು `ಪ್ರಗತಿಯ ಮರುಕಲ್ಪನೆ’ ಎನ್ನುವ ಪ್ರಧಾನ ಥೀಮ್ ಒಳಗೊಂಡಿದ್ದು, ತಂತ್ರಜ್ಞಾನ-ಚಾಲಿತ, ಪರಿಸರಸ್ನೇಹಿ, ಒಳಗೊಳ್ಳುವಿಕೆ ಮತ್ತು ಕ್ಷಮತೆ (Tech-driven, Green, Inclusive & Resilient) ಎನ್ನುವ ನಾಲ್ಕು ಉಪಆಶಯಗಳನ್ನು ಹೊಂದಿದೆ. ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿನ ಕೆಲವು ಅತ್ಯುತ್ತಮ ಅಂಶಗಳನ್ನೂ ಇಲ್ಲಿ ಅಳವಡಿಸಿಕೊಂಡಿದ್ದೇವೆ. ಅಂಕಿತ ಹಾಕುವ ಒಡಂಬಡಿಕೆಗಳ ಪೈಕಿ ಶೇಕಡ 70-80ರಷ್ಟಾದರೂ ನಿಜವಾದ ಹೂಡಿಕೆಯಾಗಿ ಪರಿವರ್ತನೆಯಾಗಬೇಕು ಎನ್ನುವುದು ಸರಕಾರದ ಗುರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸಮಾವೇಶದಲ್ಲಿ ರಫ್ತಿಗೆ ಉತ್ತೇಜನ ನೀಡುವಂತಹ, 2025-30ರವರೆಗಿನ ಐದು ವರ್ಷಗಳ ನೂತನ ಕೈಗಾರಿಕಾ ನೀತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದರಲ್ಲಿ ಡಾ.ಡಿ ಎಂ ನಂಜುಂಡಪ್ಪ ವರದಿಯಲ್ಲಿ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಸುಲಲಿತ ವಹಿವಾಟು ಸಂಸ್ಕೃತಿ ಮತ್ತು ಏಕಗವಾಕ್ಷಿ ವ್ಯವಸ್ಥೆಗೆ ಕೂಡ ಚಾಲನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಬಹುತೇಕ ಜಾಗತಿಕ ಮಟ್ಟದ ಕಂಪನಿಗಳೆಲ್ಲವೂ ಬೆಂಗಳೂರಿನಲ್ಲಿ ಆರ್ & ಡಿ ಕೇಂದ್ರಗಳನ್ನು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಹೊಂದಿವೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲೇ ಉತ್ಪಾದನೆಯೂ ಆಗುವಂತೆ ನೋಡಿಕೊಳ್ಳಲು ಸರಕಾರ ಉಪಕ್ರಮಗಳನ್ನು ತೆಗೆದುಕೊಳ್ಳಲಿದೆ. ಪರಿಸರಸ್ನೇಹಿ ಇಂಧನ ಮತ್ತು ವಿದ್ಯುತ್ ಚಾಲಿತ ವಾಹನಗಳ ತಯಾರಿಕೆಗೂ ಗಮನಹರಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಮೊದಲು ಕರ್ನಾಟಕ, ಮಹಾರಾಷ್ಟ್ರ, ಗುಜರಾತಿನಂತಹ ಕೆಲವೇ ರಾಜ್ಯಗಳು ಮಾತ್ರ ಹೂಡಿಕೆದಾರರ ಸಮಾವೇಶ ನಡೆಸುತ್ತಿದ್ದವು. ಈಗ ಹೆಚ್ಚಿನ ರಾಜ್ಯಗಳು ಇಂಥ ಸಮಾವೇಶ ಹಮ್ಮಿಕೊಳ್ಳುತ್ತಿವೆ. ಈ ಸಲದ ಸಮಾವೇಶದಲ್ಲಿ ಕುಮಾರ್ ಬಿರ್ಲಾ, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಸೇರಿದಂತೆ ಖ್ಯಾತ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ಫೆ.12 ಮತ್ತು 13ರಂದು ಇಡೀ ಎರಡು ದಿನ ಸಮಾವೇಶದಲ್ಲಿ ಅತ್ಯಂತ ಗಂಭೀರ ಚಟುವಟಿಕೆಗಳು ನಡೆಯಲಿವೆ. ಹೀಗಾಗಿ 11ರಂದು ಸಂಜೆ 4 ಗಂಟೆಗೇ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ ಮತ್ತು ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇತರ ಎಲ್ಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಈ ವರ್ಷ SSLC ವಿದ್ಯಾರ್ಥಿಗಳಿಗೆ ಶೇ.10% ಗ್ರೇಸ್ ಅಂಕ ಇಲ್ಲ: ಸಚಿವ ಮಧು ಬಂಗಾರಪ್ಪ | Karnataka SSLC Exam 2025

BIG NEWS : ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು `HMT’ಗೆ ಬಿಡಬೇಕೆ : ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

Share. Facebook Twitter LinkedIn WhatsApp Email

Related Posts

BREAKING : ಸಚಿವ MB ಪಾಟೀಲ್ ಗೆ ‘ಮುಖ್ಯಮಂತ್ರಿ’ ಆಗೋ ಯೋಗ ಇದೆ : ಕೋಡಿಶ್ರೀ ಸ್ಪೋಟಕ ಭವಿಷ್ಯ!

02/07/2025 10:36 AM1 Min Read

100 ವರ್ಷದ ನಂತರ ಶನಿಯು ತನ್ನ ಸ್ವಂತ ಮನೆಗೆ ಬರುತ್ತಿರುವುದರಿಂದ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನ!

02/07/2025 10:23 AM2 Mins Read

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗಲೇ ಹಾರ್ಟ್ ಅಟ್ಯಾಕ್ ನಿಂದ ವ್ಯಕ್ತಿ ಸಾವು!

02/07/2025 10:23 AM1 Min Read
Recent News

BREAKING : ಹಿಮಾಚಲ ಪ್ರದೇಶದಲ್ಲಿ ಭೀಕರ ಪ್ರವಾಹಕ್ಕೆ 10 ನಾಗರಿಕರು ಬಲಿ : ಭಯಾನಕ ವಿಡಿಯೋ ವೈರಲ್ | WATCH VIDEO

02/07/2025 10:42 AM

BREAKING : ಸಚಿವ MB ಪಾಟೀಲ್ ಗೆ ‘ಮುಖ್ಯಮಂತ್ರಿ’ ಆಗೋ ಯೋಗ ಇದೆ : ಕೋಡಿಶ್ರೀ ಸ್ಪೋಟಕ ಭವಿಷ್ಯ!

02/07/2025 10:36 AM

BREAKING : ಪೊಲೀಸರಿಂದ ಮೋಸ್ಟ್ ವಾಂಟೆಡ್ ಕ್ರಿಮಿನಲ್ `ಅನುಭವ್ ಶುಕ್ಲಾ’ ಕಾಲಿಗೆ ಗುಂಡೇಟು | Anubhav Shukla

02/07/2025 10:30 AM

100 ವರ್ಷದ ನಂತರ ಶನಿಯು ತನ್ನ ಸ್ವಂತ ಮನೆಗೆ ಬರುತ್ತಿರುವುದರಿಂದ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನ!

02/07/2025 10:23 AM
State News
KARNATAKA

BREAKING : ಸಚಿವ MB ಪಾಟೀಲ್ ಗೆ ‘ಮುಖ್ಯಮಂತ್ರಿ’ ಆಗೋ ಯೋಗ ಇದೆ : ಕೋಡಿಶ್ರೀ ಸ್ಪೋಟಕ ಭವಿಷ್ಯ!

By kannadanewsnow0502/07/2025 10:36 AM KARNATAKA 1 Min Read

ಬೆಂಗಳೂರು : ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಮುಖ್ಯಮಂತ್ರಿ…

100 ವರ್ಷದ ನಂತರ ಶನಿಯು ತನ್ನ ಸ್ವಂತ ಮನೆಗೆ ಬರುತ್ತಿರುವುದರಿಂದ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನ!

02/07/2025 10:23 AM

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗಲೇ ಹಾರ್ಟ್ ಅಟ್ಯಾಕ್ ನಿಂದ ವ್ಯಕ್ತಿ ಸಾವು!

02/07/2025 10:23 AM

BREAKING : ಶಂಕರ್ ಬಿದರಿ ಪುತ್ರಿ, `KAS’ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ `FIR’ ಗೆ ಆದೇಶ

02/07/2025 10:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.