ಬೆಂಗಳೂರು : ಬೆಂಗಳೂರಲ್ಲಿ ಕ್ಷುಲಕ ಕಾರಣಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದು, ಕೇವಲ 2 ಸಾವಿರ ವಿಚಾರವಾಗಿ ಮನನೊಂದು ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸುಮಾ (30) ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ವಸಹಾಯ ಸಂಘದ ಕಂತು ಕಟ್ಟಲು ಎಂದು ಸುಮಾ ಹಣ ಇಟ್ಟಿದ್ದರು. ಆದರೆ ಪತಿ ಚಂದ್ರಶೇಖರ ಸ್ವಂತ ಖರ್ಚಿಗೆ ಆ ಹಣ ಬಳಸಿದ್ದಾರೆ. ಈ ಸಂಬಂಧ ನಿನ್ನೆ ಬೆಳಿಗ್ಗೆ ಚಂದ್ರಶೇಖರ ಹಾಗೂ ಸುಮಾ ಮದ್ಯೆ ಗಲಾಟೆ ಆಗಿದೆ.
ಪತಿ ಮತ್ತು ಅತ್ತೆ ಕೆಲಸಕ್ಕೆ ಹೋಗಿದ್ದ ವೇಳೆ ಸುಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂಟು ವರ್ಷಗಳ ಹಿಂದೆ ಪತಿ ಚಂದ್ರಶೇಖರ್ ನೊಂದಿಗೆ ಸುಮಾ ಮದುವೆಯಾಗಿತ್ತು. ಪತಿ ಊಟಕ್ಕೆಂದು ಮನೆಗೆ ಬಂದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








