ನವದೆಹಲಿ: ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆ ಪ್ರಶ್ನಿಸಿ ಅಜಂ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಮೂಲಕ ಅಜಂ ಖಾನ್ ಅವರ ಅನರ್ಹತೆಯ ನಂತರ ತೆರವಾದ ರಾಂಪುರ್ ಸದರ್ ಕ್ಷೇತ್ರದಲ್ಲಿ ಉಪಚುನಾವಣೆ ನಡೆಸಲು ಈ ತೀರ್ಪು ದಾರಿ ಮಾಡಿಕೊಡಲಿದೆ ಎನ್ನಲಾಗಿದೆ.
ಉತ್ತರ ಪ್ರದೇಶ ಅಸೆಂಬ್ಲಿಯಿಂದ ಅನರ್ಹತೆಗೆ ಕಾರಣವಾದ ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆಯನ್ನು ಪ್ರಶ್ನಿಸಿ ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಅಜಂ ಖಾನ್ ಮಾಡಿದ ಮೇಲ್ಮನವಿಯನ್ನು ರಾಂಪುರ ಸೆಷನ್ಸ್ ನ್ಯಾಯಾಲಯವು ಗುರುವಾರ ತಿರಸ್ಕರಿಸಿದೆ. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯವು ಖಾನ್ ಅವರ ಮನವಿಯನ್ನು ತಿರಸ್ಕರಿಸಿತು. ಈ ತೀರ್ಪು ಖಾನ್ ಅವರ ಅನರ್ಹತೆಯ ನಂತರ ತೆರವಾದ ರಾಂಪುರ ಸದರ್ ಸ್ಥಾನಕ್ಕೆ ಉಪಚುನಾವಣೆ ನಡೆಸಲು ದಾರಿ ಮಾಡಿಕೊಡಲಿದೆ.