Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಂಧ್ರದಲ್ಲಿ ‘ONGC ಪೈಪ್ಲೈನ್’ನಿಂದ ಅನಿಲ ಸೋರಿಕೆ ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ |VIDEO

05/01/2026 5:04 PM

BREAKING : ಕೋಲ್ಕತ್ತಾದಲ್ಲಿ SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ‘ಮೊಹಮ್ಮದ್ ಶಮಿ, ಸಹೋದರ’ನಿಗೆ ಸಮನ್ಸ್

05/01/2026 4:45 PM

ಶಿವಮೊಗ್ಗ: ಜ.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

05/01/2026 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ: ನ್ಯಾ.ಶಿವರಾಜ್‌ ಪಾಟೀಲ್‌
KARNATAKA

ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ: ನ್ಯಾ.ಶಿವರಾಜ್‌ ಪಾಟೀಲ್‌

By kannadanewsnow0916/03/2025 9:39 PM

ಬೆಂಗಳೂರು: ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ, ಹೀಗಾಗಿ ಪ್ರತಿಯೊಬ್ಬರೂ ಅಂಗಾಂಗದಾನ ಮಾಡಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಕಿಡ್ನಿ ದಿನಾಚರಣೆ ಪ್ರಯುಕ್ತ ದೀರ್ಘಾವಧಿ ಮೂತ್ರಪಿಂಡ ಕಾಯಿಲೆಯಿಂದಾಗುವ ಆರೋಗ್ಯ ಸಮಸ್ಯೆಯ ಕುರಿತು ಜಾಗೃತಿ ಮೂಡಿಸಲು ಎಸ್‌ಎಸ್‌ ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂಗಾಂಗ ದಾನ ಮಾನವೀಯತೆಯ ಪರಮೋಚ್ಛ ಕಾರ್ಯಗಳಲ್ಲಿ ಒಂದು. ನಾವೆಲ್ಲರೂ ಈ ಶ್ರೇಷ್ಟ ಕಾರ್ಯವನ್ನು ಬೆಂಬಲಿಸಬೇಕು” ಎಂದ ಅವರು ಜೀವ ರಕ್ಷಕ ಅಂಗಾಂಗ ಕಸಿಗೆ ಅನುವು ಮಾಡಿಕೊಡುವ ಕರ್ನಾಟಕ ಅಂಗ ಮತ್ತು ಅಂಗಾಂಶಗಳ ಕಸಿ ಸಂಸ್ಥೆ (SOTTO Karnataka)ಯ ಪಾತ್ರ ಹಾಗೂ ವೈದ್ಯರು, ದಾನಿಗಳ ತ್ಯಾಗವನ್ನು ಶ್ಲಾಘಿಸಿದರು. ಕಿಡ್ನಿ ಸಂಬಂಧಿ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವುದು, ಅಂಗಾಂಗ ದಾನ ಹಾಗೂ ವಿಶ್ವ ದರ್ಜೆಯ ಕಸಿ ಸೌಕರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಗಾಂಗದಾನ ಮಾಡುವುದರಿಂದ ಮತ್ತೊಬ್ಬರಿಗೆ ಜೀವದಾನ ಮಾಡಿದಂತೆ. ವರದಿಗಳ ಪ್ರಕಾರ ಮಹಿಳೆಯರೇ ಹೆಚ್ಚು ಅಂಗಾಂಗದಾನ ಮಾಡಲು ಮುಂದಾಗುತ್ತಾರೆ. ಪುರುಷರೂ ಸಹ ಅಂಗಾಂಗದಾನ ಮಾಡಲು ಮುಂದಾಗಬೇಕು. ನಮ್ಮ ದೇಹದಲ್ಲಿ ಬದುಕಿರುವಾಗಲೇ ಅಂಗಾಂಗದಾನ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಬಗ್ಗೆ ಜಾಗೃತಿಯ ಅವಶ್ಯಕತೆ ಇದೆ ಎಂದು ಹೇಳಿದರು.

ಸ್ಪರ್ಶ್‌ ಆಸ್ಪತ್ರೆ ಸಮೂಹದ ಅಧ್ಯಕ್ಷರಾದ ಡಾ.ಶರಣ್‌ ಶಿವರಾಜ್‌ ಪಾಟೀಲ್‌ ಮಾತನಾಡಿ “ಕಿಡ್ನಿ ಸಮಸ್ಯೆಯು ಕೇವಲ ವೈದ್ಯಕೀಯವಾಗಿ ಮಾತ್ರವಲ್ಲ ಇದು ಕುಟುಂಬಗಳ ಮೇಲೆ ಅಪಾರವಾದ ಆರ್ಥಿಕ ಮತ್ತು ಭಾವನಾತ್ಮಕ ಹೊರೆ ಬೀಳುವಂತೆ ಮಾಡುತ್ತದೆ. ಆರಂಭಿಕ ಹಂತದಲ್ಲೇ ರೋಗ ನಿರ್ಣಯ, ಆರೋಗ್ಯಕರವಾದ ಜೀವನ ಶೈಲಿ ರೂಢಿಸಿಕೊಳ್ಳುವುದು ಹಾಗೂ ಮಧುಮೇಹದಂತಹ ಸಮಸ್ಯೆಗಳನ್ನು ಸೂಕ್ತವಾಗಿ ನಿಭಾಯಿಸುವುದು ದೀರ್ಘಾವಧಿ ಕಿಡ್ನಿ ಸಮಸ್ಯೆಯ ಅಪಾಯವನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಬಲ್ಲದು. ಅತ್ಯಾಧುನಿಕ ಸೌಲಭ್ಯಗಳು, ಸುಧಾರಿತ ಪರಿಣತಿಯೊಂದಿಗೆ ಸ್ಪರ್ಶ್‌ನ ವೈದ್ಯಕೀಯ ತಂಡವು ಕಿಡ್ನಿ ಕಸಿ ಮೂಲಕ ಜೀವ ಉಳಿಸಬಲ್ಲ ಚಿಕಿತ್ಸೆ ಮತ್ತು ಆರೈಕೆಗೆ ಸರ್ವ ಸನ್ನದ್ಧವಾಗಿದ್ದು ಕಿಡ್ನಿ ಕಸಿ ಅಗತ್ಯವಿರುವ ರೋಗಿಗಳ ಪಾಲಿಗೆ ಹೊಸ ಭರವಸೆ ಮೂಡಿಸಿದೆ ಎಂದು ತಿಳಿಸಿದರು.

ನೆಫ್ರೋಲಜಿ ವಿಭಾಗದ ಹಿರಿಯ ತಜ್ಞ ಡಾ.ಹರ್ಷ ಕುಮಾರ್‌, ಎಸ್‌ಎಸ್‌ ಸ್ಪರ್ಶ್‌ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಹಿರಿಯ ಸಮಾಲೋಚಕ ಮತ್ತು ಅಂಗಾಂಗ ಕಸಿ ವೈದ್ಯ ಡಾ.ಸುನಿಲ್‌ ಆರ್‌ ಮತ್ತಿತರರು ಉಪಸ್ಥಿತರಿದ್ದರು.

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!

ಹೋಳಿ ಪಾರ್ಟಿಯಲ್ಲಿ ಕುಡಿದ ಮತ್ತಿನಲ್ಲಿ ಸಹನಟನಿಂದ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ದೂರು ದಾಖಲು

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಜ.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

05/01/2026 4:18 PM1 Min Read

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ

05/01/2026 4:09 PM1 Min Read

BIG NEWS: ಕರ್ನಾಟಕದ ಸುದೀರ್ಘ ಅವಧಿಯ `CM’ ಆಗಲು ಜನರ ಆಶೀರ್ವಾದವೇ ಕಾರಣ : ಸಿಎಂ ಸಿದ್ದರಾಮಯ್ಯ

05/01/2026 3:49 PM2 Mins Read
Recent News

BREAKING : ಆಂಧ್ರದಲ್ಲಿ ‘ONGC ಪೈಪ್ಲೈನ್’ನಿಂದ ಅನಿಲ ಸೋರಿಕೆ ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ |VIDEO

05/01/2026 5:04 PM

BREAKING : ಕೋಲ್ಕತ್ತಾದಲ್ಲಿ SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ‘ಮೊಹಮ್ಮದ್ ಶಮಿ, ಸಹೋದರ’ನಿಗೆ ಸಮನ್ಸ್

05/01/2026 4:45 PM

ಶಿವಮೊಗ್ಗ: ಜ.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

05/01/2026 4:18 PM

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ

05/01/2026 4:09 PM
State News
KARNATAKA

ಶಿವಮೊಗ್ಗ: ಜ.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0905/01/2026 4:18 PM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ…

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ

05/01/2026 4:09 PM

BIG NEWS: ಕರ್ನಾಟಕದ ಸುದೀರ್ಘ ಅವಧಿಯ `CM’ ಆಗಲು ಜನರ ಆಶೀರ್ವಾದವೇ ಕಾರಣ : ಸಿಎಂ ಸಿದ್ದರಾಮಯ್ಯ

05/01/2026 3:49 PM

ಇಂದಿನಿಂದ ರಾಜ್ಯಾಧ್ಯಂತ ಹುಲಿ ಗಣತಿ ಆರಂಭ: ಸಚಿವ ಈಶ್ವರ ಖಂಡ್ರೆ

05/01/2026 3:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.