ಅರಬ್ ರಾಷ್ಟ್ರಗಳ ಕನ್ನಡಿಗರ ರಕ್ಷಣೆಗೆ CS ಶಾಲಿನಿ ರಜನೀಶ್‌ ಭರವಸೆ: ಶಾಸಕ ದಿನೇಶ್ ಗೂಳಿಗೌಡ ಮನವಿಗೆ ಸ್ಪಂದನೆ

ಬೆಂಗಳೂರು: ಇಸ್ರೇಲ್‌-ಇರಾನ್ ಯುದ್ಧದ ಭೀತಿಯಿಂದಾಗಿ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಶಾಸಕ ದಿನೇಶ್‌ ಗೂಳಿಗೌಡ ಅವರು ಈ ಕುರಿತು ಬರೆದಿದ್ದ ಪತ್ರಕ್ಕೆ ತಕ್ಷಣವೇ ಸ್ಪಂದಿಸಿದ ಶಾಲಿನಿ ರಜನೀಶ್‌ ಅವರು, ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆಗಾಗಿ ಸರ್ಕಾರವು ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದ್ದಾರೆ. “ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ … Continue reading ಅರಬ್ ರಾಷ್ಟ್ರಗಳ ಕನ್ನಡಿಗರ ರಕ್ಷಣೆಗೆ CS ಶಾಲಿನಿ ರಜನೀಶ್‌ ಭರವಸೆ: ಶಾಸಕ ದಿನೇಶ್ ಗೂಳಿಗೌಡ ಮನವಿಗೆ ಸ್ಪಂದನೆ