Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕರ್ನಾಟಕ `SC-ST’ ಸಮುದಾಯಗಳ `ಜಮೀನು ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

22/01/2026 6:43 AM

BIG NEWS: ರಾಜ್ಯದ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿಗಳ ‘ಜಾತಿ ತಿದ್ದುಪಡಿ’ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

22/01/2026 6:35 AM

ALERT : ಸಾರ್ವಜನಿಕರೇ ಎಚ್ಚರ : 170 ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್ : `CDSCO’ ವರದಿ

22/01/2026 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆಂಗಲ್ ಚಂಡಮಾರುತ ಹಿನ್ನಲೆ: ಬೆಂಗಳೂರಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ
KARNATAKA

ಫೆಂಗಲ್ ಚಂಡಮಾರುತ ಹಿನ್ನಲೆ: ಬೆಂಗಳೂರಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ

By kannadanewsnow0930/11/2024 4:26 PM

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಫೆಂಗಲ್ ಚಂಡಮಾರುತ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಇಂದು ವರ್ಚ್ಯುವಲ್ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ 3/4 ದಿನಗಳ ಕಾಲ ಮಳೆ ಬರುವ ಮುನ್ಸೂಚನೆಯಿದ್ದು, ಗಾಳಿ ಕೂಡಾ ಹೆಚ್ಚಾಗಿ ಬರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮರ ಕಟಾವು ಮಾಡುವ ಎಲ್ಲಾ 28 ತಂಡಗಳನ್ನು ಸನ್ನದ್ಧರಾಗಿರಬೇಕು. ಮರಗಳು, ಮರದ ರೆಂಬೆ-ಕೊಂಬೆಗಳು ಬಿದ್ದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ತೆರಳಿ ತೆರವುಗೊಳಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.

ಆಯಾ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್‌ಗಳನ್ನು ಸಿದ್ದವಾಗಿಟ್ಟುಕೊಂಡಿರಬೇಕು. ಈ ಹಿಂದೆ ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮರಳು ಚೀಲಗಳನ್ನು ಇಟ್ಟಿಕೊಂಡು, ಮಳೆಯಿಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಪರಿಹಾರ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕೆಂದು ಸೂಚಿಸಿದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು:

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರಜಾ ದಿನವೂ ಎಲ್ಲಾ ವಲಯ ಅಧಿಕಾರಿಗಳು/ಅಭಿಯಂತರರುಗಳು ತಮ್ಮ ವಲಯ ವ್ಯಾಪ್ತಿಯಲ್ಲಿ ಹಾಜರಿದ್ದು, ಮಳೆಯಾಗುವ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯದ ಹಿರಿಯ ಅಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ಮಾಡಲು ಸೂಚಿಸಿದರು.

ಜೆಸಿಬಿಗಳ ಮೂಲಕ ಸ್ವಚ್ಛತೆ:

ಬೃಹತ್ ನೀರುಗಾಲುವೆ(ರಾಜಕಾಲುವೆ)ಗಳಲ್ಲಿ ಜೆಸಿಬಿಗಳ ಮೂಲಕ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಎಲ್ಲಾ ಕಡೆ ಜೆಸಿಬಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳಿಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಲು ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಡಾ. ಕೆ. ಹರೀಶ್ ಕುಮಾರ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ಗಿರೀಶ್, ಕರೀಗೌಡ, ರಮೇಶ್, ರಮ್ಯಾ, ಸ್ನೇಹಲ್, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಡ್ರಗ್ಸ್ ವಿರುದ್ಧ ಕ್ರಮಕೈಗೊಳ್ಳಲು ನಿರ್ಲಕ್ಷಿಸಿದರೆ ಅಧಿಕಾರಿಗಳ ತಲೆದಂಡ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

BREAKING: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೇ ಕೇಸ್: ನ್ಯಾಯಾಲಯಕ್ಕೆ ಎಸ್ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

Share. Facebook Twitter LinkedIn WhatsApp Email

Related Posts

BIG NEWS : ಕರ್ನಾಟಕ `SC-ST’ ಸಮುದಾಯಗಳ `ಜಮೀನು ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

22/01/2026 6:43 AM2 Mins Read

BIG NEWS: ರಾಜ್ಯದ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿಗಳ ‘ಜಾತಿ ತಿದ್ದುಪಡಿ’ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

22/01/2026 6:35 AM2 Mins Read

ರೈತರಿಗೆ ಗುಡ್ ನ್ಯೂಸ್ : `ಕಿಸಾನ್ ಮಾಲ್’ ನಲ್ಲಿ ರಿಯಾಯಿತಿ ದರದಲ್ಲಿ ಯಂತ್ರೋಪಕರಣ ಸೇರಿ ಅವಶ್ಯಕ ವಸ್ತುಗಳು ಲಭ್ಯ

22/01/2026 6:27 AM1 Min Read
Recent News

BIG NEWS : ಕರ್ನಾಟಕ `SC-ST’ ಸಮುದಾಯಗಳ `ಜಮೀನು ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

22/01/2026 6:43 AM

BIG NEWS: ರಾಜ್ಯದ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿಗಳ ‘ಜಾತಿ ತಿದ್ದುಪಡಿ’ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

22/01/2026 6:35 AM

ALERT : ಸಾರ್ವಜನಿಕರೇ ಎಚ್ಚರ : 170 ಔಷಧಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್ : `CDSCO’ ವರದಿ

22/01/2026 6:33 AM

18 ಲಕ್ಷ ಕೋಟಿ ರೂ.ಗಳ ಒಪ್ಪಂದ.! ‘ಪ್ರಧಾನಿ ಮೋದಿ’ ಮಾಸ್ಟರ್ ಪ್ಲಾನ್, ‘ಚೀನಾ, ಪಾಕಿಸ್ತಾನ’ಕ್ಕೆ ನಡುಕ

22/01/2026 6:28 AM
State News
KARNATAKA

BIG NEWS : ಕರ್ನಾಟಕ `SC-ST’ ಸಮುದಾಯಗಳ `ಜಮೀನು ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5722/01/2026 6:43 AM KARNATAKA 2 Mins Read

ಬೆಂಗಳೂರು : ರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಮಂಜೂರು ಮಾಡಿದ ಜಮೀನುಗಳು ಪರಭಾರೆ ಆಗಬಾರದು. ಸದರಿ ಜನರಿಗೆ ಮಂಜೂರು…

BIG NEWS: ರಾಜ್ಯದ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿಗಳ ‘ಜಾತಿ ತಿದ್ದುಪಡಿ’ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ

22/01/2026 6:35 AM

ರೈತರಿಗೆ ಗುಡ್ ನ್ಯೂಸ್ : `ಕಿಸಾನ್ ಮಾಲ್’ ನಲ್ಲಿ ರಿಯಾಯಿತಿ ದರದಲ್ಲಿ ಯಂತ್ರೋಪಕರಣ ಸೇರಿ ಅವಶ್ಯಕ ವಸ್ತುಗಳು ಲಭ್ಯ

22/01/2026 6:27 AM

ವಾಹನ ಸವಾರರೇ ಗಮನಿಸಿ : ‘ಪೆಟ್ರೋಲ್ ಬಂಕ್’ ನಲ್ಲಿ ಸಿಗಲಿದೆ ಈ 9 ಉಚಿತ ಸೌಲಭ್ಯಗಳು.!

22/01/2026 6:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.