Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಡರ್ 19 ಏಷ್ಯಾ ಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 90 ರನ್ ಗಳ ಭರ್ಜರಿ ಗೆಲುವು | U19 Asia Cup

14/12/2025 7:05 PM

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಸಂಸದ ಬಸವರಾಜ ಬೊಮ್ಮಾಯಿ

14/12/2025 5:58 PM

ಯುವಜನತೆಯ ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ಏಮ್ಸ್ | Covid Vaccine

14/12/2025 5:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆಂಗಲ್ ಚಂಡಮಾರುತ ಹಿನ್ನಲೆ: ಬೆಂಗಳೂರಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ
KARNATAKA

ಫೆಂಗಲ್ ಚಂಡಮಾರುತ ಹಿನ್ನಲೆ: ಬೆಂಗಳೂರಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ

By kannadanewsnow0930/11/2024 4:26 PM

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಫೆಂಗಲ್ ಚಂಡಮಾರುತ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಇಂದು ವರ್ಚ್ಯುವಲ್ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ 3/4 ದಿನಗಳ ಕಾಲ ಮಳೆ ಬರುವ ಮುನ್ಸೂಚನೆಯಿದ್ದು, ಗಾಳಿ ಕೂಡಾ ಹೆಚ್ಚಾಗಿ ಬರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮರ ಕಟಾವು ಮಾಡುವ ಎಲ್ಲಾ 28 ತಂಡಗಳನ್ನು ಸನ್ನದ್ಧರಾಗಿರಬೇಕು. ಮರಗಳು, ಮರದ ರೆಂಬೆ-ಕೊಂಬೆಗಳು ಬಿದ್ದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ತೆರಳಿ ತೆರವುಗೊಳಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.

ಆಯಾ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್‌ಗಳನ್ನು ಸಿದ್ದವಾಗಿಟ್ಟುಕೊಂಡಿರಬೇಕು. ಈ ಹಿಂದೆ ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮರಳು ಚೀಲಗಳನ್ನು ಇಟ್ಟಿಕೊಂಡು, ಮಳೆಯಿಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಪರಿಹಾರ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕೆಂದು ಸೂಚಿಸಿದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು:

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರಜಾ ದಿನವೂ ಎಲ್ಲಾ ವಲಯ ಅಧಿಕಾರಿಗಳು/ಅಭಿಯಂತರರುಗಳು ತಮ್ಮ ವಲಯ ವ್ಯಾಪ್ತಿಯಲ್ಲಿ ಹಾಜರಿದ್ದು, ಮಳೆಯಾಗುವ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯದ ಹಿರಿಯ ಅಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ಮಾಡಲು ಸೂಚಿಸಿದರು.

ಜೆಸಿಬಿಗಳ ಮೂಲಕ ಸ್ವಚ್ಛತೆ:

ಬೃಹತ್ ನೀರುಗಾಲುವೆ(ರಾಜಕಾಲುವೆ)ಗಳಲ್ಲಿ ಜೆಸಿಬಿಗಳ ಮೂಲಕ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಎಲ್ಲಾ ಕಡೆ ಜೆಸಿಬಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳಿಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಲು ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಡಾ. ಕೆ. ಹರೀಶ್ ಕುಮಾರ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ಗಿರೀಶ್, ಕರೀಗೌಡ, ರಮೇಶ್, ರಮ್ಯಾ, ಸ್ನೇಹಲ್, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಡ್ರಗ್ಸ್ ವಿರುದ್ಧ ಕ್ರಮಕೈಗೊಳ್ಳಲು ನಿರ್ಲಕ್ಷಿಸಿದರೆ ಅಧಿಕಾರಿಗಳ ತಲೆದಂಡ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

BREAKING: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೇ ಕೇಸ್: ನ್ಯಾಯಾಲಯಕ್ಕೆ ಎಸ್ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

Share. Facebook Twitter LinkedIn WhatsApp Email

Related Posts

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಸಂಸದ ಬಸವರಾಜ ಬೊಮ್ಮಾಯಿ

14/12/2025 5:58 PM2 Mins Read

ಶಿವಾಜಿ ಮಹಾರಾಜ ಒಬ್ಬ ವೀರ ಯೋಧನಲ್ಲ, ಸಮಾನತೆ, ಮಾನವೀಯ ಮೌಲ್ಯ ಪ್ರತಿಪಾದಿಸಿದ ಮಹಾನ್ ನಾಯಕ: ಸತೀಶ್ ಜಾರಕಿಹೊಳಿ

14/12/2025 4:49 PM1 Min Read

ಡಿ.25 ರಿಂದ 30ರವರೆಗೆ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ: ಸಂಸದ ಬಸವರಾಜ ಬೊಮ್ಮಾಯಿ

14/12/2025 4:42 PM2 Mins Read
Recent News

ಅಂಡರ್ 19 ಏಷ್ಯಾ ಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 90 ರನ್ ಗಳ ಭರ್ಜರಿ ಗೆಲುವು | U19 Asia Cup

14/12/2025 7:05 PM

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಸಂಸದ ಬಸವರಾಜ ಬೊಮ್ಮಾಯಿ

14/12/2025 5:58 PM

ಯುವಜನತೆಯ ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಸಂಬಂಧವಿಲ್ಲ: ಏಮ್ಸ್ | Covid Vaccine

14/12/2025 5:49 PM

ಸಿಡ್ನಿ ಬೋಂಡಿ ಬೀಚ್ ಗುಂಡಿನ ದಾಳಿಯಲ್ಲಿ 12 ಮಂದಿ ಸಾವು: ಇದು ಭಯೋತ್ಪಾದಕರ ಕೃತ್ಯವೆಂದ NSW ಪೊಲೀಸ್ ಮುಖ್ಯಸ್ಥ

14/12/2025 5:20 PM
State News
KARNATAKA

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0914/12/2025 5:58 PM KARNATAKA 2 Mins Read

ಹಾವೇರಿ: ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ…

ಶಿವಾಜಿ ಮಹಾರಾಜ ಒಬ್ಬ ವೀರ ಯೋಧನಲ್ಲ, ಸಮಾನತೆ, ಮಾನವೀಯ ಮೌಲ್ಯ ಪ್ರತಿಪಾದಿಸಿದ ಮಹಾನ್ ನಾಯಕ: ಸತೀಶ್ ಜಾರಕಿಹೊಳಿ

14/12/2025 4:49 PM

ಡಿ.25 ರಿಂದ 30ರವರೆಗೆ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ: ಸಂಸದ ಬಸವರಾಜ ಬೊಮ್ಮಾಯಿ

14/12/2025 4:42 PM

ಬಾಗಲಕೋಟೆ : ಕಲ್ಲು ಗಣಿಗಾರಿಕೆಯ ವೇಳೆ ಕಲ್ಲು ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು!

14/12/2025 4:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.