ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮಳೆಯಿಂದಾಗಿ ಮತ್ತೊಂದು ಬಲಿಯಾಗಿದೆ. ಕಂಬವನ್ನು ಮುಟ್ಟಿದ ಪರಿಣಾಮ, ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ಮಳೆಗೆ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಸಾವನ್ನಪ್ಪಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಯಿಂದಾಗಿ ಇದು ಎರಡನೇ ಬಲಿಯಾಗಿದೆ.
ಮನೆಯಿಂದ ಪಾರ್ಸಲ್ ತೆಗೆದುಕೊಂಡು ಬರೋದಕ್ಕೆ ಹೊರ ಬಂದಿದ್ದಂತ ಪ್ರತೀಕ್ಷಾ ಶೆಟ್ಟಿ, ಮನೆ ಬಳಿಯ ಕಂಬವನ್ನು ಟಚ್ ಮಾಡಿದ್ದರಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
‘ಆರ್.ಅಶೋಕ್’ ವಿರುದ್ಧದ ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ‘ರಮೇಶ್ ಬಾಬು’ ಒತ್ತಾಯ
ತುರ್ತು ಪರಿಸ್ಥಿತಿ ಪ್ರಸ್ತಾಪ ತಪ್ಪಿಸಬಹುದಿತ್ತು: ಲೋಕಸಭಾ ಸ್ಪೀಕರ್ ಭೇಟಿ ಮಾಡಿದ ರಾಹುಲ್ ಗಾಂಧಿ