ಬೆಂಗಳೂರು : ದಲಿತ ಸಿಎಂ ಕುರಿತಂತೆ ಇದೀಗ ಮತ್ತೆ ವಿಚಾರ ಮುನ್ನೆಲೆಗೆ ಬಂದಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್ ಸಿ ಮಹದೇವಪ್ಪ ಸ್ಫೋಟಗ ವಾದಂತಹ ಹೇಳಿಕೆ ನೀಡಿದ್ದು, ಮತ ನಾವು ಹಾಕುತ್ತಿದ್ದು ನಾಯಕತ್ವ ಇನ್ಯಾರದ್ದು ಆಗಿದೆ ಎಂದು ಸಿಎಂ ಸ್ಥಾನದ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ.

‘ಸಾವಿನ’ ಅಪಾಯವನ್ನು ಕಡಿಮೆ ಮಾಡಲು ದಿನಕ್ಕೆ ‘ಇಷ್ಟು’ ಹೆಜ್ಜೆ ಹಾಕಿ: ವರದಿ

ಇವತ್ತು ಮತ ನಮ್ಮ ಬಳಿ (ದಲಿತರ ಬಳಿ) ಇದೆ, ನಾಯಕತ್ವ ಇನ್ಯಾರ ಬಳಿಯೋ ಇದೆ. ಪ್ರಸ್ತುತ ಸಿದ್ದರಾಮಯ್ಯನವರು ಯಾಕೆ ಮುಖ್ಯಮಂತ್ರಿಯಾದರು, ಯಡಿಯೂರಪ್ಪ, ಎಚ್‌.ಡಿ.ದೇವೇಗೌಡರು ಯಾಕಾಗಿ ಮುಖ್ಯಮಂತ್ರಿಯಾಗಿದ್ದರು? ಜನಬೆಂಬಲ ಅವರಿಗಿದೆ. ಏಕೆಂದರೆ, ನಾವು ಕಣ್ಣು ಮುಚ್ಚಿಕೊಂಡು ಮತ ಹಾಕುತ್ತಿದ್ದೇವೆ ಎಂದು ಮಹದೇವಪ್ಪ ತಿಳಿಸಿದರು.

ಚಂದ್ರಯಾನ -4 ಎರಡು ಹಂತಗಳಲ್ಲಿ ಉಡಾವಣೆ, ‘LVM -3’ ಮತ್ತು ‘PSLV’ ಎರಡೂ ಬಳಕೆ

ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ 5ನೇ ರಾಜ್ಯ ಮಟ್ಟದ ಜಾಗೃತ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 17 ಶೇ. ದಲಿತರು, ಶೇ. 7 ಪರಿಶಿಷ್ಟ ಪಂಗಡ, ಶೇ. 15 ಅಲ್ಪಸಂಖ್ಯಾತರಿದ್ದೇವೆ. ಇವೆಲ್ಲ ಸೇರಿದರೆ ರಾಜ್ಯದಲ್ಲಿ ನೂರಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲ್ಲಬಹುದು. ಆದರೆ, ಪ್ರಭಾವಿ ದಲಿತ ಮುಖ್ಯಮಂತ್ರಿ ಆಗುವ ಅವಕಾಶ ಸಿಗಲಿಲ್ಲ ಎಂದೂ ಅವರು ಬೇಸರ ವ್ಯಕ್ತಪಡಿಸಿದರು.

BREAKING : ನನಗೂ ‘ಬೆದರಿಕೆ ಇ-ಮೇಲ್’ ಸಂದೇಶ ಬಂದಿದೆ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ

ಇವತ್ತು ಡಾ. ಪರಮೇಶ್ವರ್‌, ಖರ್ಗೆ ಅವರಾಗಲೀ, ನಾನಾಗಲಿ ನೀತಿ ನಿರೂಪಣೆ ರೂಪಿಸುವ ಜಾಗದಲ್ಲಿಲ್ಲ. ನಾವು ಮುಖ್ಯಮಂತ್ರಿ ಆಗಲಿಲ್ಲ. ದೇಶದಲ್ಲಿ ಅಂಬೇಡ್ಕರ್‌ ಬಳಿಕ ಮತ್ತೊಬ್ಬ ಅಂತ ನಾಯಕ ಸಿಗಲಿಲ್ಲ. ಕರ್ನಾಟಕದಲ್ಲಿ ಪ್ರಭಾವಿ ದಲಿತ ನಾಯಕರಿದ್ದರೂ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ. ಆದರೂ ನಮ್ಮ ಪ್ರಭಾವ ಬಳಸಿ ಎಸ್ಸಿಪಿ, ಟಿಎಸ್‌ಪಿ ಕಾಯ್ದೆ, ಮುಂಬಡ್ತಿ ಮೀಸಲಾತಿ, ಗುತ್ತಿಗೆ ಮೀಸಲಾತಿ, ಕೆಐಎಡಿಬಿ ಮೀಸಲಾತಿ ಸೇರಿ ಅನೇಕ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ ಎಂದರು.

 

Share.
Exit mobile version