ಜೈಪುರ: ಶಾಲೆಯಲ್ಲಿ ಬಿಂದಿಗೆಯಿಂದ ನೀರು ಕುಡಿದ ಕಾರಣಕ್ಕೆ ಕೋಪಗೊಂಡ ಶಿಕ್ಷಕನೊಬ್ಬ ದಲಿತ ಸಮುದಾಯದ 9 ವರ್ಷದ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದು, ತೀವ್ರ ಗಾಯಗೊಂಡಿದ್ದ ಬಾಲಕ ಶನಿವಾರ ಮೃತಪಟ್ಟಿದ್ದಾನೆ. ರಾಜಸ್ಥಾನ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದು, ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

BIGG BREAKING NEWS : ಬೆಂಗಳೂರಿನಲ್ಲಿ ಟಿಪ್ಪು ಬ್ಯಾನರ್ ಹರಿದು ಹಾಕಿದ ಪ್ರಕರಣ : ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ರಾಜಸ್ಥಾನದ ಜಾಲೋರ್ ಜಿಲ್ಲೆಯ ಸಯ್ಲಾ ಎಂಬ ಗ್ರಾಮದಲ್ಲಿನ ಖಾಸಗಿ ಶಾಲೆಯಲ್ಲಿ ಜುಲೈ 20ರಂದು ಈ ಹಲ್ಲೆ ಘಟನೆ ನಡೆದಿತ್ತು. ಕಣ್ಣು ಮತ್ತು ಕಿವಿ ಬಳಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕನಿಗೆ ಚಿಕಿತ್ಸೆ ನೀಡಲು ಸುಮಾರು 300 ಕಿಮೀ ದೂರದಲ್ಲಿನ ಅಹ್ಮದಾಬಾದ್‌ಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಶನಿವಾರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

BREAKING NEWS : 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ : 75 ಎಲೆಕ್ಟ್ರಿಕ್ ಬಸ್ ಗಳಿಗೆ ಸಿಎಂ ಬೊಮ್ಮಾಯಿ ಹಸಿರು ನಿಶಾನೆ

ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿರುವುದರಿಂದ ವದಂತಿಗಳು ಹರಡಿ ಗಲಭೆ ಸೃಷ್ಟಿಯಾಗುವ ಭೀತಿ ಉಂಟಾಗಿದ್ದು, ಈ ಪ್ರದೇಶದಲ್ಲಿ ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ.

BREAKING NEWS : 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ : 75 ಎಲೆಕ್ಟ್ರಿಕ್ ಬಸ್ ಗಳಿಗೆ ಸಿಎಂ ಬೊಮ್ಮಾಯಿ ಹಸಿರು ನಿಶಾನೆ

ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪ್ರಕರಣದ ವೇಗವಾದ ವಿಚಾರಣೆಗಾಗಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. “ಸಂತ್ರಸ್ತ ಬಾಲಕನ ಕುಟುಂಬಕ್ಕೆ ಆದಷ್ಟು ಬೇಗನೆ ನ್ಯಾಯ ಸಿಗಲಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಕುಟುಂಬಕ್ಕೆ 5 ಲಕ್ಷ ರೂಪಾಯಿ ಸಹಾಯ ನೀಡಲಾಗುವುದು” ಎಂದು ಹೇಳಿದ್ದಾರೆ.

BIGG BREAKING NEWS : ಬೆಂಗಳೂರಿನಲ್ಲಿ ಟಿಪ್ಪು ಬ್ಯಾನರ್ ಹರಿದು ಹಾಕಿದ ಪ್ರಕರಣ : ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

Share.
Exit mobile version