ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿ ಎಲ್ಲ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದ್ದು, ಇಂದು ಮಧ್ಯಾಹ್ನದ ನಂತರ ವಿಡಿಯೋ ಕಾನ್ಫರೆನ್ಸ್ ಮೂಲಕ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಹೌದು ಇಂದು ಜಡ್ಜ್ ಎದುರುಗಡೆ ದರ್ಶನ್ ಮತ್ತು ಗ್ಯಾಂಗ್ ವಿಚಾರಣೆಗೆ ಹಾಜರಾಗುತ್ತಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳು ಇಂದು ಹಾಜರಾಗಲಿದ್ದಾರೆ.ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಸಾಧ್ಯತೆ ಎನ್ನಲಾಗುತ್ತಿದೆ. ಇಂದು ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಕೂಡ ನಡೆಯಲಿದೆ.
ಅಲ್ಲದೆ ಜೈಲಿನಲ್ಲಿ ಮನೆ ಊಟ ಕೋರಿ, ದರ್ಶನ್ ಅರ್ಜಿ ಸಲ್ಲಿಸಿದರು. ಆದರೆ ಇದಕ್ಕೆ ಮನೆ ಊಟಕ್ಕೆ ಜೈಲಾಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದಾರೆ. ಅಲ್ಲದೆ ತನಿಖಾಧಿಕಾರಿಗಳಿಂದಲು ಕೂಡ ಮನೆ ಊಟಕ್ಕೆ ಅಕ್ಷೆಪಣೆ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಮಧ್ಯಾಹ್ನದ ಬಳಿಕ ವಿಚಾರಣೆ ನಡೆಯಲಿದೆ. ಹೀಗಾಗಿ ನಟ ದರ್ಶನ್ ಮತ್ತು ಎಲ್ಲಾ ಹದಿನೇಳು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.