ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಅವರನ್ನು ತನಿಖೆ ನಡೆಸುತ್ತಿರುವ ಅನ್ನಪೂರ್ಣೇಶ್ವರ ಪೊಲೀಸ್ ಠಾಣೆ ಎದುರು ದರ್ಶನ್ ಅಭಿಮಾನಿಗಳು ಜಮಾಯಿಸಿದ್ದಾರೆ.
ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಎದುರು ಜಮಾಯಿಸಿದ ದರ್ಶನ್ ಅಭಿಮಾನಿಗಳು ದರ್ಶನ್ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಪೊಲೀಸರು ದರ್ಶನ್ ಅಭಿಮಾನಿಗಳ ಮೇಲೆ ಲಾಠಿ ಬೀಸಿ ಅಲ್ಲಿಂದ ಓಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ದರ್ಶನ್ & ಗ್ಯಾಂಗ್ ಕರೆದುಕೊಂಡು ಪಟ್ಟಣಗೆರೆಯಲ್ಲಿ ಸ್ಥಳ ಮಹಜರು ನಡೆಸಲಾಗುತ್ತದೆ. ಈಹಿನ್ನೆಲೆಯಲ್ಲಿ ಪಟ್ಟಣಗೆರೆಯಲ್ಲಿ ಬಿಗಿ ಪೊಲೀಸ್ ಬಂಧೋಬಸ್ತ್ ಒದಗಿಸಲಾಗಿದೆ.