ಬೆಂಗಳೂರು : ಬೆಂಗಳೂರು ಕ್ಲಬ್ ಅಧ್ಯಕ್ಷರಾದ ಹರೀಶ್ ಪದ್ಮನಾಭ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
“ಹರೀಶ್ ಅವರು ಅವರ ನಿಧನ ಸುದ್ದಿ ಕೇಳಿ ಬೇಸರವಾಗಿದೆ. ನನಗೆ ಆತ್ಮೀಯರು ಆಗಿದ್ದರು. ಅವರ ತಂದೆ ಸಿ.ಜೆ. ಪದ್ಮನಾಭ ಅವರು ನಿವೃತ್ತ ಐಎಎಸ್ ಅಧಿಕಾರಿ ಆಗಿದ್ದು, ಬಿಡಿಎ ಮಾಜಿ ಮುಖ್ಯಸ್ಥರಾಗಿದ್ದರು. ಹರೀಶ್ ಅವರ ನಾಯಕತ್ವದಲ್ಲಿ ಬೆಂಗಳೂರು ಕ್ಲಬ್ ಸಾಕಷ್ಟು ಪ್ರಗತಿ ಸಾಧಿಸಿದೆ.
ಹರೀಶ್ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಸ್ನೇಹಿತರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.








