ಬೆಂಗಳೂರು: ಬಿಜೆಪಿ ಆಡಳಿತದ ( BJP Government ) ಚಿನ್ನದ ರಸ್ತೆಗಳಲ್ಲಿ ಜನ ರಕ್ತ ಸುರಿಸುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ, ಚಿನ್ನದ ರಸ್ತೆಗಳಲ್ಲಿ ಆದ ಅಪಘಾತಗಳಿಗೆ ಸರ್ಕಾರವೇ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸಬೇಕು, ಸಾವುಗಳಿಗೆ 50 ಲಕ್ಷ ಪರಿಹಾರ ಒದಗಿಸಬೇಕು, ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ನೀಡಬೇಕು. ಏಕೆಂದರೆ ಇವು ಸರ್ಕಾರಿ ಕೊಲೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ವಾಗ್ಧಾಳಿ ನಡೆಸಿದೆ.

ರಸ್ತೆ ಗುಂಡಿಗಳು ಜನರ ಜೀವ ಹಿಂಡುತ್ತಿರುವುದು ದಿನನಿತ್ಯದ ಸುದ್ದಿಯಾಗಿದೆ. ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿದೆಯೇ ( Bengaluru Road Pathole ) ಅಥವಾ ಗುಂಡಿಯಲ್ಲೇ ರಸ್ತೆ ಇದೆಯೇ ಎಂಬ ಅನುಮಾನ ಮೂಡುತ್ತಿದೆ! ರಸ್ತೆ ಗುಂಡಿಯಿಂದಾದ ಸಾವುಗಳನ್ನು “ಸರ್ಕಾರಿ ಕೊಲೆ” ಎಂದೇ ಪರಿಗಣಿಸಬೇಕು ಎಂದು ಒತ್ತಾಯಿಸಿದೆ.

Share.
Exit mobile version