Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಸಿ ಬಾದಾಮಿ vs ನೆನೆಸಿದ ಬಾದಾಮಿ: ನಿಮ್ಮ ಆರೋಗ್ಯಕ್ಕೆ ಯಾವುದು ಉತ್ತಮ? | Almonds health benefits

12/09/2025 11:13 AM

AI ಚಾಟ್‌ಬಾಟ್‌ಗಳಿಂದ ಮಕ್ಕಳ ಸುರಕ್ಷತೆ ಅಪಾಯದಲ್ಲಿ : `FTC’ಯಿಂದ ಟೆಕ್ ಕಂಪನಿಗಳ ವಿರುದ್ಧ ತನಿಖೆ ಆರಂಭ |Safety for Children

12/09/2025 11:08 AM

BREAKING : ಉಡುಪಿಯಲ್ಲಿ ಘೋರ ಕೃತ್ಯ : ಹುಟ್ಟುಹಬ್ಬದ ದಿನವೇ ಯುವತಿಗೆ ಚಾಕು ಇರಿದು ಪಾಗಲ್ ಪ್ರೇಮಿ ಅಟ್ಟಹಾಸ!

12/09/2025 11:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಂಡೀಪುರ’ದಲ್ಲಿ ರಾತ್ರಿ ಸಂಚಾರದ ಬಗ್ಗೆ ಸಿಎಂ ಜೊತೆ ಸಮಾಲೋಚಿಸಿ ನಿರ್ಧಾರ: ಸಚಿವ ಈಶ್ವರ್ ಖಂಡ್ರೆ
KARNATAKA

‘ಬಂಡೀಪುರ’ದಲ್ಲಿ ರಾತ್ರಿ ಸಂಚಾರದ ಬಗ್ಗೆ ಸಿಎಂ ಜೊತೆ ಸಮಾಲೋಚಿಸಿ ನಿರ್ಧಾರ: ಸಚಿವ ಈಶ್ವರ್ ಖಂಡ್ರೆ

By kannadanewsnow0928/03/2025 3:52 PM

ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು ಎಂದರು.

ಹಾಲಿನ ದರ ಏರಿಕೆ ಸಮರ್ಥನೆ:

ಬೇರೆ ರಾಜ್ಯಗಳಲ್ಲಿನ ಹಾಲಿನ ದರಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಜೊತೆಗೆ ಮೇವುನ ದರ ಮತ್ತು ಹೈನುಗಾರಿಕೆ ನಿರ್ವಹಣಾ ವೆಚ್ಚ ಅಧಿಕವಾಗಿದ್ದು ಇದಕ್ಕೆ ಹೋಲಿಸಿದರೆ ಹಾಲಿನ ದರ ಏರಿಕೆ ಮಾಡಿರುವುದು ಕಡಿಮೆಯೇ ಇದೆ. ಹೈನುಗಾರಿಕೆ ಮಾಡುವ ರೈತರಿಗೆ ನೆರವಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಖರ್ಗೆ, ವೇಣುಗೋಪಾಲ್ ಭೇಟಿ:

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪರಿಸರ ಉಳಿಸಲು ಆರಂಭಿಸಿರುವ ಕಾರ್ಯಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಬೀದರ್ ಸಂಸತ್ ಸದಸ್ಯ ಸಾಗರ್ ಖಂಡ್ರೆ ಅವರೊಂದಿಗೆ ಭೇಟಿ ಮಾಡಿ, ರಾಜ್ಯದ ಮತ್ತು ಪಕ್ಷದ ವಿಧ್ಯಮಾನಗಳ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದ ಅವರು, ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದೆ ಎಂದು ತಿಳಿಸಿದರು.

ರಾಷ್ಟ್ರೀಯ ನಾಯಕರು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಲು ಸಂಘಟಿತ ಪ್ರಯತ್ನ ಮಾಡುವಂತೆ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಸಲು ಸೂಚಿಸಿದ್ದಾರೆ. ಈ ಕಾರ್ಯವನ್ನು ಮಾಡಲಾಗುವುದು ಎಂದರು.

ಸ್ಮಾರ್ಟ್ ಮೀಟರ್: ಬಿಜೆಪಿ ವಿರುದ್ಧ ಖಂಡ್ರೆ ಆಕ್ರೋಶ:

ಸ್ಮಾರ್ಟ್ ಮೀಟರ್ ಖರೀದಿಯನ್ನು ಟೆಂಡರ್ ಪ್ರಕ್ರಿಯೆ ಮೂಲಕ ನಡೆಸಲಾಗಿದ್ದು, ಈ ಬಗ್ಗೆ ಇಂಧನ ಸಚಿವರು ಸದನದಲ್ಲೇ ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ತೊಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮ್ಯಾನ್ಮಾರ್, ಥೈಲ್ಯಾಂಡ್’ನಲ್ಲಿ ಪ್ರಬಲ ಭೂಕಂಪ: ‘ತುರ್ತು ಪರಿಸ್ಥಿತಿ’ ಘೋಷಣೆ | Earthquake hit Bangkok, Thailand

BREAKING : ಸುಪ್ರೀಂಕೋರ್ಟ್ ನಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆ : ಕೇತಮಾರನಹಳ್ಳಿ ಒತ್ತುವರಿ ತೆರವು ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ.!

Share. Facebook Twitter LinkedIn WhatsApp Email

Related Posts

BREAKING : ಉಡುಪಿಯಲ್ಲಿ ಘೋರ ಕೃತ್ಯ : ಹುಟ್ಟುಹಬ್ಬದ ದಿನವೇ ಯುವತಿಗೆ ಚಾಕು ಇರಿದು ಪಾಗಲ್ ಪ್ರೇಮಿ ಅಟ್ಟಹಾಸ!

12/09/2025 11:06 AM1 Min Read

ALERT : ಜ್ವರ ಇದ್ದಾಗ ಖಾಲಿ ಹೊಟ್ಟೆಯಲ್ಲಿ `ಪ್ಯಾರೆಸಿಟಮಾಲ್’ ಸೇವಿಸಿದ್ರೆ ಈ ಗಂಭೀರ ಅಪಾಯ ಬರಬಹುದು.!

12/09/2025 10:57 AM1 Min Read

BREAKING : ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ : ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

12/09/2025 10:54 AM1 Min Read
Recent News

ಹಸಿ ಬಾದಾಮಿ vs ನೆನೆಸಿದ ಬಾದಾಮಿ: ನಿಮ್ಮ ಆರೋಗ್ಯಕ್ಕೆ ಯಾವುದು ಉತ್ತಮ? | Almonds health benefits

12/09/2025 11:13 AM

AI ಚಾಟ್‌ಬಾಟ್‌ಗಳಿಂದ ಮಕ್ಕಳ ಸುರಕ್ಷತೆ ಅಪಾಯದಲ್ಲಿ : `FTC’ಯಿಂದ ಟೆಕ್ ಕಂಪನಿಗಳ ವಿರುದ್ಧ ತನಿಖೆ ಆರಂಭ |Safety for Children

12/09/2025 11:08 AM

BREAKING : ಉಡುಪಿಯಲ್ಲಿ ಘೋರ ಕೃತ್ಯ : ಹುಟ್ಟುಹಬ್ಬದ ದಿನವೇ ಯುವತಿಗೆ ಚಾಕು ಇರಿದು ಪಾಗಲ್ ಪ್ರೇಮಿ ಅಟ್ಟಹಾಸ!

12/09/2025 11:06 AM

ALERT : ಜ್ವರ ಇದ್ದಾಗ ಖಾಲಿ ಹೊಟ್ಟೆಯಲ್ಲಿ `ಪ್ಯಾರೆಸಿಟಮಾಲ್’ ಸೇವಿಸಿದ್ರೆ ಈ ಗಂಭೀರ ಅಪಾಯ ಬರಬಹುದು.!

12/09/2025 10:57 AM
State News
KARNATAKA

BREAKING : ಉಡುಪಿಯಲ್ಲಿ ಘೋರ ಕೃತ್ಯ : ಹುಟ್ಟುಹಬ್ಬದ ದಿನವೇ ಯುವತಿಗೆ ಚಾಕು ಇರಿದು ಪಾಗಲ್ ಪ್ರೇಮಿ ಅಟ್ಟಹಾಸ!

By kannadanewsnow0512/09/2025 11:06 AM KARNATAKA 1 Min Read

ಉಡುಪಿ : ಉಡುಪಿಯಲ್ಲಿ ಘೋರ ಕೃತ್ಯ ನಡೆದಿದ್ದು, ಹುಟ್ಟುಹಬ್ಬದ ದಿನವೇ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಡುಪಿ…

ALERT : ಜ್ವರ ಇದ್ದಾಗ ಖಾಲಿ ಹೊಟ್ಟೆಯಲ್ಲಿ `ಪ್ಯಾರೆಸಿಟಮಾಲ್’ ಸೇವಿಸಿದ್ರೆ ಈ ಗಂಭೀರ ಅಪಾಯ ಬರಬಹುದು.!

12/09/2025 10:57 AM

BREAKING : ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ : ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

12/09/2025 10:54 AM

BIG NEWS : ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಜಾರಿದ ಶಾಲಾ ಬಸ್ : 20 ಕ್ಕೂ ಹೆಚ್ಚು ಮಕ್ಕಳು ಪ್ರಣಾಪಾಯದಿಂದ ಪಾರು!

12/09/2025 10:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.