ನೀರನ್ನು ಉಳಿಸಿಕೊಂಡು ‘ತುಂಗಭದ್ರಾ ಡ್ಯಾಂ ಗೇಟ್’ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್

ಬೆಂಗಳೂರು : “ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ತುಂಗಭದ್ರಾ ಜಲಾಶಯಕ್ಕೆ ತೆರಳುವ ಮುನ್ನ ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮದವರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು “ನೀರನ್ನು ಹೊರಗೆ ಬಿಡದ ಹೊರತು ಗೇಟ್ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು. … Continue reading ನೀರನ್ನು ಉಳಿಸಿಕೊಂಡು ‘ತುಂಗಭದ್ರಾ ಡ್ಯಾಂ ಗೇಟ್’ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್