ನವದೆಹಲಿ: ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಂಪುಟ ಸಮಿತಿಯ ಸಭೆ ನಡೆಯಲಿದೆ.
ನಾಳೆ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.
ಭದ್ರತಾ ಸಂಪುಟ ಸಮಿತಿ ಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಸಂಪುಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸದ್ಯ ಭೂತಾನ್ ಪ್ರವಾಸದಲ್ಲಿರುವಂತ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ. ಭಾರತಕ್ಕೆ ಆಗಮಿಸುತ್ತಿದ್ದಂತೆ ಭದ್ರತಾ ಸಂಪುಟ ಸಮಿತಿ ಸಭೆಯನ್ನು ನಡೆಸಲಿದ್ದಾರೆ.
ದೆಹಲಿ ಕಾರು ಸ್ಪೋಟ ಕೇಸ್: ಕೇಂದ್ರ ಗೃಹ ಇಲಾಖೆಗೆ ‘ಪ್ರಾಥಮಿಕ ತನಿಖಾ ವರದಿ’ ಸಲ್ಲಿಕೆ
ನವದೆಹಲಿ: ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಗೆ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಕೆ ಮಾಡಲಾಗಿದೆ.
ಈ ಘಟನೆ ಕುರಿತಂತೆ ತಕ್ಷಣವೇ ತನಿಖೆಗೆ ಇಳಿದಂತ ದೆಹಲಿ ಪೊಲೀಸರು ತಮ್ಮ ಪ್ರಾಥಮಿಕ ತನಿಖಾ ವರದಿಯನ್ನು ಸಿದ್ಧಪಡಿಸಿದ್ದರು. ಈ ತನಿಖಾ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.
ದೆಹಲಿ ಸ್ಪೋಟದ ಆರೋಪಿಗಳನ್ನು ಬಿಡಲ್ಲ – ಅಮಿತ್ ಶಾ
ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಸಿದಂತ ಆರೋಪಿಗಳನ್ನು ಬಿಡುವುದಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.
ದೆಹಲಿ ಕಾರು ಸ್ಪೋಟದ ಆರೋಪಿಗಳು ಎಲ್ಲೇ ಇದ್ರೂ ನಾವು ಬಿಡಲ್ಲ. ಪತ್ತೆ ಹಚ್ಚುವಂತ ಕೆಲಸವನ್ನು ತನಿಖಾ ಸಂಸ್ಥೆಗಳು ಕೈಗೊಂಡಿರೋದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡ `ರೈತರ’ ಖಾತೆಗೆ ಹಣ ವರ್ಗಾವಣೆ : CM ಸಿದ್ದರಾಮಯ್ಯ ಘೋಷಣೆ
Watch Video: ದೆಹಲಿ ಸ್ಪೋಟಕಕ್ಕೂ 2 ವಾರ ಹಿಂದಿನ i20 ಕಾರಿನ ಮತ್ತೊಂದು ವೀಡಿಯೋ ವೈರಲ್








