ಬೆಂಗಳೂರು : ಗ್ರಾಪಂ ಸದಸ್ಯರ ಗೌರವ ಧನವನ್ನು ಸಾವಿರದಿಂದ ಹತ್ತು ಸಾವಿರಕ್ಕೆ ಹೆಚ್ಚಿಸುವಂತೆ ಒತ್ತಾಯಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ಸದಸ್ಯರ ಮಹಾ ಒಕ್ಕೂಟ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.
ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಸೂರ್ಯನಾರಾಯಣ ರಾವ್ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು.
ಪಂಚಾಯ್ತಿ ಸದಸ್ಯರು ತಮ್ಮ ಫ್ಯಾಮಿಲಿ ಕೆಲಸ ಮಾಡದೇ ದಿನದ ಇಪ್ಪತ್ತಾಲ್ಕು ಗಂಟೆ ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ನಮಗೆ ನೀಡುತ್ತಿರುವ ಗೌರವ ಧನ ಸಾಕಾಗುತ್ತಿಲ್ಲ, ಸದಸ್ಯರಿಗೆ ಹತ್ತು ಸಾವಿರ ,ಅಧ್ಯಕ್ಷರಾದವರಿಗೆ 15 ಸಾವಿರ ನೀಡಬೇಕು, ಹಾಗೂ ವಾಹನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ಗ್ರಾಪಂ ಸದಸ್ಯರ ಗೌರವ ಧನವನ್ನು ಸಾವಿರದಿಂದ ಹತ್ತು ಸಾವಿರಕ್ಕೆ ಹೆಚ್ಚಿಸುವಂತೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ಸದಸ್ಯರ ಮಹಾ ಒಕ್ಕೂಟ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.
BREAKING NEWS : ಸಿದ್ದರಾಮಯ್ಯ, ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್