ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಜ್ವರ ಆರ್ಭಟಿಸಿದೆ. ಈ ಆರ್ಭಟಕ್ಕೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ನಾಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ ಪಡಿಸಲಾಗಿದೆ.

ಈ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಸಮನ್ವಯ ಸಭೆ ನಡೆಸಲಾಗಿತ್ತು. ಈ ಬೆನ್ನಲ್ಲೇ ನಾಳೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಲಿದ್ದಾರೆ.

ದಿನಾಂಕ 04-07-2024ರಂದು ವಿಧಾನಸೌಧದ ಕೊಠಡಿ ಸಂಖ್ಯೆ 122ರಲ್ಲಿ ಮಧ್ಯಾಹ್ನ 3.30ಕ್ಕೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರು ಕೂಡ ಭಾಗಿಯಾಗಲಿದ್ದಾರೆ.

UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

‘ರೈತ’ರಿಗೆ ಬಹುಮುಖ್ಯ ಮಾಹಿತಿ: ಹವಾಮಾನ ಆಧಾರಿತ ‘ಬೆಳೆ ವಿಮೆ ನೋಂದಣಿ’ಗೆ ಅರ್ಜಿ ಆಹ್ವಾನ

Share.
Exit mobile version