Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ
KARNATAKA

ದಲಿತ ಜನಾಂಗಕ್ಕೆ ದೇಗುಲ ಪ್ರವೇಶ ನಿರಾಕರಣೆ : ಮದ್ದೂರು ತಹಶೀಲ್ದಾರ್ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿ

By kannadanewsnow0913/03/2026 10:11 PM

ಮಂಡ್ಯ :- ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಸ್ಪೃಶ್ಯತೆ ಆಚರಣೆಯಂತಹ ಅನಿಷ್ಠ ಪದ್ಧತಿ ಮಾತ್ರ ತೊಲಗಿಲ್ಲ. ಮದ್ದೂರು ತಾಲೂಕಿನ ಹುಲಿಕೆರೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಪರಿಶಿಷ್ಟ ಜಾತಿಯವರು ಎಂಬ ಕಾರಣಕ್ಕೆ ದೇಗುಲದ ಅರ್ಚಕರೊಬ್ಬರು ಪ್ರವೇಶ ನಿರಾಕರಿಸಿದ್ದಾರೆ ಎಂದು ಅರೋಪಿಸಿ ಗ್ರಾಮದ ಸತೀಶ್ ಕುಮಾರ್ ಎಂಬುವರು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ.

ಮಾರ್ಚ್ 10 ರಂದು ಸತೀಶ್ ಕುಮಾರ್, ಪತ್ನಿ ಶ್ವೇತ, ಮಕ್ಕಳಾದ ಯಶಿಕಾ, ಗೋಕುಲ್ ಕುಟುಂಬ ಸಮೇತ ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಕೊಡಿ ಎಂದು ಅರ್ಚಕ ಯಶ್ವಂತ್ ಅವರನ್ನು ಕೇಳಿದ್ದಾರೆ. ಈ ವೇಳೆ ಅರ್ಚಕ ಯಶ್ವಂತ್ ನೀವು ಪರಿಶಿಷ್ಟ ಜಾತಿಯವರು ಎಂದು ಕೀಳಾಗಿ ಕಂಡು ನಾನು ಸ್ನಾನ ಮಾಡಿ ಬರುವುದಾಗಿ ಸುಳ್ಳು ಹೇಳಿ ಹೋದವರು ವಾಪಾಸ್ ದೇಗುಲಕ್ಕೆ ಬರಲಿಲ್ಲ. ಇದರಿಂದ ಕಾದು ಕಾದು ಸುಸ್ತಾಗಿ ಮನನೊಂದು ನಾನು ಮತ್ತು ಕುಟುಂಬ ಸದಸ್ಯರು ಮನೆಗೆ ವಾಪಸ್ ಬಂದೆವು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಸುಮಾರು 56 ಪರಿಶಿಷ್ಟ ಜಾತಿ ಕುಟುಂಬಗಳಿದ್ದು, ಮುಜರಾಯಿ ಇಲಾಖೆಗೆ ಸೇರಿದ್ದ ಬಸವೇಶ್ವರಸ್ವಾಮಿ, ಮಹದೇಶ್ವರಸ್ವಾಮಿ ಹಾಗೂ ಮಾರಮ್ಮ ದೇವಸ್ಥಾನಗಳಿಗೆ ಪರಿಶಿಷ್ಟ ಜನಾಂಗದವರನ್ನು ಸೇರಿಸುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಮಧ್ಯಪ್ರವೇಶ ಮಾಡಿ ದೇವಸ್ಥಾನಕ್ಕೆ ನಮ್ಮ ಜನಾಂಗದವರು ಹೋಗಲು ಮುಕ್ತ ಅವಕಾಶ ನೀಡಬೇಕೆಂದು ಮನವಿ ಪತ್ರದಲ್ಲಿ ಮನವಿ ಮಾಡಿದ್ದರು.

ಈ ದೂರಿನನ್ವಯ ಶುಕ್ರವಾರ ಗ್ರಾಮಕ್ಕೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ನವೀನ್, ಮಹೇಶ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಗಮಿಸಿ ಶಾಂತಿ ಸಭೆ ನಡೆಸಿ ಗ್ರಾಮದಲ್ಲಿರುವ ದೇಗುಲಗಳಿಗೆ ಎಲ್ಲಾ ಜನಾಂಗದವರಿಗೆ ಮುಕ್ತವಾಗಿ ಪ್ರವೇಶ ಮಾಡಲು ಅವಕಾಶ ಕೊಡಬೇಕು. ಇದರಲ್ಲಿ ಯಾವುದೇ ತಾರತಮ್ಯ ಮಾಡಬಾರದು ಎಂದು ದೇಗುಲದ ಅರ್ಚಕರಿಗೆ ಹಾಗೂ ಗ್ರಾಮಸ್ಥರಿಗೆ ತಿಳುವಳಿಕೆ ನೀಡಿ ಇಂತಹ ಘಟನೆಗಳು ಮತ್ತೆ ನಡೆಯದಂತೆ ಮನವಿ ಮಾಡಿದರು. ಬಳಿಕ ಸತೀಶ್ ಕುಮಾರ್ ಅವರ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ದೇಗುಲ ಪ್ರವೇಶ ಮಾಡಿ ಪೂಜೆ ಸಲ್ಲಿಸಲಾಯಿತು.

ವರದಿ : ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM2 Mins Read

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM2 Mins Read

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM1 Min Read
Recent News

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM

ಆನ್‌ಲೈನ್ ಗೇಮರ್‌ಗಳಿಗೆ ಶಾಕ್: ಮೇ 1 ರಿಂದ ದೇಶದಲ್ಲಿ ಹೊಸ ಗೇಮಿಂಗ್ ನಿಯಮಗಳು ಜಾರಿ!

22/04/2026 9:57 PM
State News
KARNATAKA

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

By kannadanewsnow0922/04/2026 10:22 PM KARNATAKA 2 Mins Read

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಸಚಿವ ಸ್ಥಾನದ ಕುರಿತು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆಸಿದ ಮಾತುಕತೆ ಅತ್ಯಂತ…

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.