Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

14/08/2025 9:18 AM

ವಿಭಜನೆಯ ಭಯಾನಕ ನೆನಪಿನ ದಿನ : ‘ಕ್ರಾಂತಿ, ನೋವನ್ನು ನೆನಪಿಸಿಕೊಳ್ಳುತ್ತೇನೆ’: ಪ್ರಧಾನಿ ಮೋದಿ | Partition Horrors Remembrance Day

14/08/2025 9:17 AM

BR|EAKING: ರಾಜ್ಯಾದ್ಯಂತ ಮದ್ಯ, ಬಿಯರ್ ಮಾರಾಟ ಕುಸಿತ : ಮಳಿಗೆಗಳಲ್ಲಿ `MRP’ ಸ್ಟಿಕ್ಕರ್ ಕಡ್ಡಾಯ.!

14/08/2025 9:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇವೇಗೌಡರ ಅಳಿಯನೇ JDS ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ, ಇನ್ನೂ ಕಾರ್ಯಕರ್ತರು ಮುಂದಿನ ನಿರ್ಧಾರ ಮಾಡಬೇಕು- ಡಿ.ಕೆ. ಸುರೇಶ್
KARNATAKA

ದೇವೇಗೌಡರ ಅಳಿಯನೇ JDS ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ, ಇನ್ನೂ ಕಾರ್ಯಕರ್ತರು ಮುಂದಿನ ನಿರ್ಧಾರ ಮಾಡಬೇಕು- ಡಿ.ಕೆ. ಸುರೇಶ್

By kannadanewsnow0914/03/2024 6:13 PM

ರಾಮನಗರ : “ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ತಮ್ಮ ಮುಂದಿನ ತೀರ್ಮಾನ ಮಾಡಬೇಕು” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಚನ್ನಪಟ್ಟಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಡಾ. ಮಂಜುನಾಥ್ ಅವರು ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಿದಾಗ ಅವರು, “ಡಾ. ಮಂಜುನಾಥ್ ಅವರು ರಾಜಕಾರಣಕ್ಕೆ ಬರುತ್ತಿರುವುದನ್ನು ನಾನು ಸ್ವಾಗತಿಸುತ್ತೇನೆ. ಅವರು ದೇವೇಗೌಡರ ಕುಟುಂಬದವರು. ಇದು ನನ್ನ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜಕಾರಣಕ್ಕೆ ಹೊಸತೇನಲ್ಲ. ಹೀಗಾಗಿ ನಿಮ್ಮ (ಮಾಧ್ಯಮಗಳ) ನೇತೃತ್ವದಲ್ಲಿ ಸ್ಪರ್ಧೆ ನಡೆಯಲಿದೆ” ಎಂದು ತಿಳಿಸಿದರು.

ಮಂಜುನಾಥ್ ಅವರು ಮೃದು ಸ್ವಭಾವದವರು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಯಾರು ಏನು ಚರ್ಚೆ ಮಾಡುತ್ತಿದ್ದಾರೆ ಎಂಬುದು ನನಗೆ ಮುಖ್ಯವಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ ಕಾರ್ಯಕರ್ತರು ಚಿಂತನೆ ಮಾಡಬೇಕು. ದೇವೇಗೌಡರ ಬುದ್ಧಿವಂತ ಅಳಿಯನವರೇ ಬೇರೆ ಪಕ್ಷ ಆಯ್ಕೆ ಮಾಡಿಕೊಂಡ ನಂತರ ಅವರ ಕಾರ್ಯಕರ್ತರು ಉಳಿದ ವಿಚಾರ ತೀರ್ಮಾನ ಮಾಡಬೇಕು” ಎಂದು ತಿಳಿಸಿದರು.

ಜೆಡಿಎಸ್ ನೆಲೆ ಕಳೆದುಕೊಳ್ಳುತ್ತಿದೆಯೇ ಎಂದು ಕೇಳಿದಾಗ, “ನನಗೆ ಆ ಬಗ್ಗೆ ಗೊತ್ತಿಲ್ಲ. ಇದೆಲ್ಲವನ್ನು ಈಗ ಅವರ ಅಳಿಯನವರೇ ಹೇಳುತ್ತಿದ್ದಾರೆ. ದೇವೇಗೌಡರ ಅಳಿಯನವರು ಚುನಾವಣೆ ಕಣದಲ್ಲಿದ್ದಾರೆ. ದೇವೇಗೌಡರ ಸಲಹೆ ಏನಿದೆಯೋ ಗೊತ್ತಿಲ್ಲ. ಆದರೆ ದೇವೇಗೌಡರು ಕಟ್ಟಿದ ಪಕ್ಷಕ್ಕೆ ಈಗ ಜನಪ್ರಿಯತೆ ಇಲ್ಲ ಎಂಬುದನ್ನು ಅವರ ಕುಟುಂಬದ ಹಿರಿಯ ಸದಸ್ಯರೇ ಸ್ಪಷ್ಟಪಡಿಸುತ್ತಿದ್ದಾರೆ” ಎಂದು ತಿಳಿಸಿದರು.

ಜೆಡಿಎಸ್ ಕಾರ್ಯಕರ್ತರು ಏನು ಮಾಡಬೇಕು ಎಂದು ಕೇಳಿದಾಗ, “ಆ ಪಕ್ಷ ಇಲ್ಲವೆಂದು ದೇವೇಗೌಡರ ಅಳಿಯನವರೇ ನಿರ್ಧರಿಸಿರುವಾಗ ಉಳಿದ ವಿಚಾರವನ್ನು ನೀವೇ ಮುಂದುವರಿಸಬೇಕು” ಎಂದರು.

ಕನಕಪುರದ ಕಿರಾತಕರಿಗೆ ಪಾಠ ಕಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ನಾಮಪತ್ರ ಸಲ್ಲಿಸಿದ ನಂತರ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.

ಸುರೇಶ್ ಅವರನ್ನು ಕಂಡರೆ ಕುಮಾರಸ್ವಾಮಿ ಅವರಿಗೆ ಭಯವಿದೇಯೇ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಗೊತ್ತಿಲ್ಲ. ಅವರ ಪಕ್ಷ ಹಾಗೂ ಅವರ ನಾಯಕತ್ವಕ್ಕೆ ಅಸ್ತಿತ್ವವಿಲ್ಲ ಎಂದು ಅವರದೇ ಕುಟುಂಬದವರು ಹೇಳುತ್ತಿದ್ದಾರೆ ಅಷ್ಟೇ ” ಎಂದರು.

ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ನೀವು ಆಹ್ವಾನ ನೀಡುತ್ತೀರಾ ಎಂದು ಕೇಳಿದಾಗ, “ಜೆಡಿಎಸ್ ನಾಯಕರ ಕುಟುಂಬ ಸದಸ್ಯರೇ ಬೇರೆ ಪಕ್ಷದ ಚಿಹ್ನೆಯಡಿ ಚುನಾವಣೆಗೆ ಸ್ಪರ್ಧಿಸುತ್ತಿರುವಾಗ, ಜೆಡಿಎಸ್ ಕಾರ್ಯಕರ್ತರು ಏನು ಮಾಡಬೇಕು? ನಾನು ಮಾಧ್ಯಮಗಳ ಮೂಲಕ ಜೆಡಿಎಸ್ ಕಾರ್ಯಕರ್ತರಿಗೆ ಆಹ್ವಾನ ನೀಡುತ್ತೇನೆ. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಗ. ನಿಮ್ಮ ಸಹೋದರನಾಗಿ ಈ ಜಿಲ್ಲೆ ಹಾಗೂ ಇಲ್ಲಿನ ತಾಲೂಕುಗಳ, ರೈತರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ನೀವೆಲ್ಲರೂ ಪಕ್ಷಭೇದ ಮರೆತು ಬನ್ನಿ ಎಂದು ತುಂಬು ಹೃದಯದಿಂದ ಕರೆಯುತ್ತೇನೆ” ಎಂದರು.

ಕುಟುಂಬ ರಾಜಕಾರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿರುವ ಬಗ್ಗೆ ಕೇಳಿದಾಗ, “ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ನೀವು ಹೇಗೆ ನಿಮ್ಮ ಅಭಿಪ್ರಾಯದ ಮೇಲೆ ನನಗೆ ಪ್ರಶ್ನೆ ಕೇಳುತ್ತಿದ್ದೀರೋ ಅದೇ ರೀತಿ ಅವರವರು ತಮ್ಮ ಅಭಿಪ್ರಾಯದ ಮೇರೆಗೆ ಚರ್ಚೆ ಮಾಡುತ್ತಿರಬಹುದು. ಅದಕ್ಕೂ ನನಗೂ ಸಂಬಂಧವಿಲ್ಲ. ಅದಕ್ಕೆ ನಾನು ಉತ್ತರ ನೀಡಲು ಆಗುವುದಿಲ್ಲ” ಎಂದರು.

ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆಯನ್ನು ತಳಮಟ್ಟದಲ್ಲಿ ಕಾರ್ಯಕರ್ತರೇ ಒಪ್ಪುತ್ತಿಲ್ಲ ಎಂಬ ಬಗ್ಗೆ ಕೇಳಿದಾಗ, “ನನಗೆ ಆ ಬಗ್ಗೆ ಗೊತ್ತಿಲ್ಲ. ನನಗೆ ಗೊತ್ತಿರುವ ವಿಚಾರ ಒಂದೇ. ಅದು ನಾನು ಮಾಡಿರುವ ಕೆಲಸಕ್ಕೆ ಜನರ ಬಳಿ ಕೂಲಿ ಕೇಳುವುದು” ಎಂದರು.

ಮಂಜುನಾಥ್ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಅವರು ಹರಕೆಯೋ, ಕುರಿಯೋ ನನಗೆ ಗೊತ್ತಿಲ್ಲ. ತಿಳುವಳಿಕಸ್ಥರನ್ನೇ ಕೇಳಿ” ಎಂದರು.

ಮಂಜುನಾಥ್ ಅವರ ಸ್ಪರ್ಧೆ ಬಗ್ಗೆ ಜನರಲ್ಲಿ ಅಭಿಪ್ರಾಯ ಹೇಗಿದೆ ಎಂದು ಕೇಳಿದಾಗ, “ನನಗೆ ದೇವೇಗೌಡರ ಅಳಿಯ ಎಂದಷ್ಟೇ ಗೊತ್ತಿತ್ತು. ಈಗ ಅವರು ಮೈತ್ರಿ ಅಭ್ಯರ್ಥಿಯಾಗಿ ಗೊತ್ತಾಗಿದ್ದಾರೆ. ಅವರು ರಾಜಕಾರಣಕ್ಕೆ ಬಂದಿದ್ದಾರೆ, ಹೀಗಾಗಿ ಅವರನ್ನು ಸ್ವಾಗತಿಸಿದ್ದೇನೆ” ಎಂದರು.

ಹಾಸನದಿಂದ ನಿಮ್ಮನ್ನು ಸೋಲಿಸಲು ಬರುತ್ತಿದ್ದಾರೆಯೇ ಎಂದು ಕೇಳಿದಾಗ, “ಎಲ್ಲವನ್ನು ಒಂದೇ ದಿನ ಚರ್ಚೆ ಮಾಡುವುದು ಬೇಡ. ಈಗಷ್ಟೇ ನನಗೆ ಟಿಕೆಟ್ ಸಿಕ್ಕಿದೆ. ಈಗ ಬಿಜೆಪಿಯಲ್ಲಿ ಪ್ರತಾಪ್ ಸಿಂಹ, ಕಟೀಲ್ ಅವರಂತಹ ಪಕ್ಷ ಕಟ್ಟಿದವರಿಗೆ ಕೈ ಕೊಡಲಾಗಿದೆ. ನನ್ನನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದವರು ಈಗ ಬಂಡಾಯ ಎನ್ನುತ್ತಿದ್ದಾರೆ. ಸಂವಿಧಾನ ಬದಲಾವಣೆ ಮಾಡಲು ಹೊರಟವರ ಕಥೆ ಏನಾಯ್ತೋ ಗೊತ್ತಿಲ್ಲ. ಇನ್ನು ಯಾರ ಕಥೆ ಏನಾಗಲಿದೆಯೋ ಗೊತ್ತಿಲ್ಲ” ಎಂದು ತಿಳಿಸಿದರು.

ಪ್ರತಾಪ್ ಸಿಂಹ ಅವರು ನಿಮ್ಮನ್ನು ಒಳ್ಳೆಯ ಕೆಲಸಗಾರ ಎಂದು ಹೊಗಳುತ್ತಿರುವ ಬಗ್ಗೆ ಕೇಳಿದಾಗ, “ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ರಸ್ತೆ ಮಾಡುವ ವಿಚಾರದಲ್ಲಿ ನಾನು, ಅವರು ಜತೆಗೂಡಿ ಕೆಲಸ ಮಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡುವಾಗ ನನಗೆ ಅವರು, ಅವರಿಗೆ ನಾನು ಸಲಹೆ ಮತ್ತು ಸಹಕಾರ ನೀಡಿದ್ದೇವೆ. ಹೀಗಾಗಿ ನಮ್ಮ ನಡುವೆ ವಿಶ್ವಾಸವಿದೆ. ವಿಶ್ವಾಸ ಬೇರೆ, ಪಕ್ಷ ಬೇರೆ. ರಾಜಕಾರಣ ಬಂದಾಗ ಬೇರೆ” ಎಂದು ತಿಳಿಸಿದರು.

ಬೆಂಗಳೂರಲ್ಲಿ ‘ಕನ್ನಡ ನಾಮಫಲಕ’ ಹಾಕದವರಿಗೆ BBMP ಶಾಕ್: ಮಾಲ್ ಆಪ್ ಏಷ್ಯಾದ ಕೆಲ ಮಳಿಗೆಗಳಿಗೆ ಬೀಗ, ಲೈಸೆನ್ಸ್ ರದ್ದು

‘ಮಾರುವೇಷ’ದಲ್ಲಿ ರೋಗಿಯಂತೆ ‘ಸರ್ಕಾರಿ ಆಸ್ಪತ್ರೆ’ಗೆ ತೆರಳಿ ಅವ್ಯವಸ್ಥೆ ಬಹಿರಂಗ ಪಡಿಸಿದ ‘IAS ಅಧಿಕಾರಿ’: ವೀಡಿಯೋ ವೈರಲ್

breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

14/08/2025 9:18 AM2 Mins Read

BR|EAKING: ರಾಜ್ಯಾದ್ಯಂತ ಮದ್ಯ, ಬಿಯರ್ ಮಾರಾಟ ಕುಸಿತ : ಮಳಿಗೆಗಳಲ್ಲಿ `MRP’ ಸ್ಟಿಕ್ಕರ್ ಕಡ್ಡಾಯ.!

14/08/2025 9:12 AM1 Min Read

BREAKING : `ನ್ಯಾಯ ಸಿಕ್ಕೇ ಸಿಗುತ್ತದೆ’ : ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ `ಪವಿತ್ರಾ ಗೌಡ’ ಪೋಸ್ಟ್ ವೈರಲ್ .!

14/08/2025 8:47 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

14/08/2025 9:18 AM

ವಿಭಜನೆಯ ಭಯಾನಕ ನೆನಪಿನ ದಿನ : ‘ಕ್ರಾಂತಿ, ನೋವನ್ನು ನೆನಪಿಸಿಕೊಳ್ಳುತ್ತೇನೆ’: ಪ್ರಧಾನಿ ಮೋದಿ | Partition Horrors Remembrance Day

14/08/2025 9:17 AM

BR|EAKING: ರಾಜ್ಯಾದ್ಯಂತ ಮದ್ಯ, ಬಿಯರ್ ಮಾರಾಟ ಕುಸಿತ : ಮಳಿಗೆಗಳಲ್ಲಿ `MRP’ ಸ್ಟಿಕ್ಕರ್ ಕಡ್ಡಾಯ.!

14/08/2025 9:12 AM

ಗ್ರಾಹಕರಿಗೆ ಗುಡ್ ನ್ಯೂಸ್ : ಅಕ್ಟೋಬರ್ 4ರಿಂದ ಕೆಲವೇ ಗಂಟೆಗಳಲ್ಲಿ ಚೆಕ್ ವಿಲೇವಾರಿ : RBI

14/08/2025 9:11 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನ ‘ಮಾಣಿಕ್ ಷಾ ಪರೇಡ್ ಮೈದಾನ’ದ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲು ಜಸ್ಟ್ ಹೀಗೆ ಮಾಡಿ.!

By kannadanewsnow5714/08/2025 9:18 AM KARNATAKA 2 Mins Read

ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತ್ತದೆ. ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ಅವಕಾಶ…

BR|EAKING: ರಾಜ್ಯಾದ್ಯಂತ ಮದ್ಯ, ಬಿಯರ್ ಮಾರಾಟ ಕುಸಿತ : ಮಳಿಗೆಗಳಲ್ಲಿ `MRP’ ಸ್ಟಿಕ್ಕರ್ ಕಡ್ಡಾಯ.!

14/08/2025 9:12 AM

BREAKING : `ನ್ಯಾಯ ಸಿಕ್ಕೇ ಸಿಗುತ್ತದೆ’ : ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ `ಪವಿತ್ರಾ ಗೌಡ’ ಪೋಸ್ಟ್ ವೈರಲ್ .!

14/08/2025 8:47 AM

ರಾಜ್ಯ ಸರ್ಕಾರದಿಂದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

14/08/2025 8:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.