Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮಾಲೆ ಬಂದಾಗ ‘ಕಣ್ಣು ಮತ್ತು ಉಗುರು’ಗಳು ‘ಹಳದಿ ಬಣ್ಣ’ಕ್ಕೆ ತಿರುಗಲು ಕಾರಣವೇನು ಗೊತ್ತಾ.?

21/06/2025 10:02 PM

ಮಜ್ಜಿಗೆಯಲ್ಲಿ ಒಂದು ಚಿಟಿಕೆ ‘ಇಂಗು’ ಬೆರೆಸಿ ಕುಡಿಯೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

21/06/2025 9:48 PM

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೋಗ ಜಲಪಾತವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ
KARNATAKA

ಜೋಗ ಜಲಪಾತವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

By kannadanewsnow0912/05/2025 7:21 PM

ಶಿವಮೊಗ್ಗ: ನೈಸರ್ಗಿಕ ಸಂಪತ್ತಿನಿಂದ ಕೂಡಿದ ಜೋಗ ಜಲಪಾತ ಪ್ರದೇಶವನ್ನು‌ ಐಕಾನಿಕ್ ಹಾಗೂ ಮಾದರಿ ಪ್ರವಾಸೋದ್ಯಮ ಪ್ರದೇಶವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.

ಜೋಗ್ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಜೋಗ ಜಲಪಾತ ಪ್ರದೇಶದ ಪ್ರವಾಸಿಗರಿಗಾಗಿ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ದಿ ಕಾಮಗಾರಿಗಳ ಕುರಿತು ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೂ. 184 ಕೋಟಿ‌ ಮೊತ್ತದಲ್ಲಿ‌ ಅಭಿವೃದ್ಧಿಪಡಿಸಲಾಗುತ್ತಿರುವ ಕಾಮಗಾರಿಗಳಾದ ಎಂಟ್ರೆನ್ಸ್ ಪ್ಲಾಜಾ, ಟೇಬಲ್ ಟಾಪ್ ಏರಿಯಾ ವ್ಯು, ವ್ಯು ಡೆಕ್, ಸೆಂಟ್ರಲ್ ಏರಿಯಾ, ಟ್ರಾನ್ಸಿಟ್ ಹಬ್, ಎಸ್ ಟಿ ಪಿ ರಸ್ತೆ, ಚರಂಡಿ, ರಿಟೇಲ್ ನೋಡ್ ಬ್ಲಾಕ್ಸ್, ಬ್ಲಾಕ್ ಎ, ಬಿ, ಸಿ , ಆರ್ಟ್ ಗ್ಯಾಲರಿ, ಸಿಸಿಟಿವಿ ಇತರೆ ವೀಕ್ಷಿಸಿ ಸೂಕ್ತ ಸಲಹೆ ಸೂಚನೆ ನೀಡಿದ್ದೇವೆ.
ಅಕ್ಟೋಬರ್ ೨೦೨೧ ರಲ್ಲಿ‌ ಕೆಲಸ ಆರಂಭಿಸಲಾಗಿದೆ.‌

ಸ್ವಾಭಾವಿಕ‌ ನೈಸರ್ಗಿಕ ಸಂಪತ್ತಿನಿಂದ ಕೂಡಿದ ಈ ಪ್ರದೇಶ ಐಕಾನಿಕ್ ಸ್ಥಳವಾಗುವಂತೆ, ಇತರೆ ದೇಶಗಳೂ ಇದನ್ನು ಮಾದರಿಯಾಗುವಂತೆ ತೆಗೆದುಕೊಳ್ಳುವಂತೆ ಕಾಮಗಾರಿಗಳು ಆಗಬೇಕು ಎಂದು‌ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವ್ಯು ಡೆಕ್ ಲ್ಲಿ ಪ್ರತಿ ದಿನ ಸಾವಿರಾರು ಜನರು ಬರುತ್ತಾರೆ. ಇದಕ್ಕೆ ಸಮರ್ಪಕ ವ್ಯವಸ್ಥೆ ಮಾಡಿಕೊಳ್ಳಬೇಕು. ಜನರಿಗೆ ಉತ್ತಮ‌ ಮನೋರಂಜನೆ ಜೊತೆ ಆದಾಯ ತರುವಂತಹ ಚಟುವಟಿಕೆ ಗೆ ಒತ್ತು ನೀಡಬೇಕು. ಜಯಿಂಟ್ ವ್ಹೀಲ್ ಅಳವಡಿಸುವ ಮೂಲಕ ಅದರಿಂದ ಜೋಗ ಜಲಪಾತದ ಸೊಬಗನ್ನು ಸವಿಯುವ ಯೋಜನೆ ರೂಪಿಸುವಂತೆ ಸಲಹೆ ನೀಡಿದ ಅವರು ವರ್ಷದ ೩೬೫ ದಿನಗಳೂ ಪ್ರವೇಶಕ್ಕೆ ಲಭ್ಯವಾಗುವಂತೆ ಮಾಡಬೇಕು . ಜಲಪಾತಕ್ಕೆ ಲೈಟಿಂಗ್ ವ್ಯವಸ್ಥೆ ಮಾಡಿದರೆ ಇನ್ನೂ ಆಕರ್ಷಕವಾಗಿರುತ್ತದೆ. ಬೇಸಿಗೆಯಲ್ಲಿ ಮಕ್ಕಳ ಮನೋರಂಜನೆಗೆ ರೈನ್ ಡ್ಯಾನ್ಸ್, ಇತರೆ ಚಟುವಟಿಕೆ ಹಾಕಿಕೊಳ್ಳಬೇಕು. ಶೈಕ್ಷಣಿಕ ಪ್ರವಾಸಕ್ಕೆ ವ್ಯವಸ್ಥೆ ಮಾಡಬೇಕು.
ಕೆಆರ್ ಎಸ್ ರೀತಿ ಗಾರ್ಡನ್, ಫೌಂಟನ್ ವ್ಯವಸ್ಥೆ ಮಾಡಿದರೆ ಪ್ರವಾಸೋದ್ಯಮಕ್ಕೆ ಅನುಕೂಲವಾಗಿತ್ತದೆ ಎಂದರು.

ಸಭೆಗೂ ಮುನ್ನ ಸಚಿವರು, ಶಾಸಕರು‌ ಅಧಿಕಾರಿಗಳೊಂದಿಗೆ ಕಾಮಗಾರಿಗಳನ್ನು‌ ವೀಕ್ಷಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಶಾಸಕರಾದ ಬೇಳೂರು ಗೋಪಾಲಕೃಷ್ಣ, ಕಾರ್ಗಲ್ ಪ.ಪಂ.ಅಧ್ಯಕ್ಷ ರಾಜು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕೆಪಿಸಿ ಮುಖ್ಯ ಅಧೀಕ್ಷಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಭೆಯ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಶಾಸಕರಾದ ಗೋಪಾಲಕೃಷ್ಣ ಅವರು ರೂ. 75. ಕೋಟಿ ತಂದು ಕೆಲಸ ಚುರುಕುಗೊಳಿಸಿದ್ದಾರೆ. ರೋಪ್ ವೇ, ಗ್ಲಾಸ್ ಹೌಸ್, ಝಿಪ್ ಲೈನ್, ಕೆಆರ್ ಎಸ್ ರೀತಿ ಪಾರ್ಕ್, ಮನೋರಂಜನೆ, ವರ್ಷಪೂರ್ತಿ ಪ್ರವಾಸಿಗರನ್ನು ಆಕರ್ಷಿಸುವ ಚಟುವಟಿಕೆ ನಡೆಯುವಂತೆ ವ್ಯವಸ್ಥೆ ಮಾಡಲಾಗುವುದು.

ಜಯಿಂಟ್ ವೀಲ್, ಕೇಬಲ್ ಕಾರ್, ನೈಟ್ ವ್ಯೂ ವ್ಯವಸ್ಥೆ ಮಾಡಲು ಸಲಹೆ ನೀಡಿದ್ದೇನೆ.‌ ಜೋಗ ಅತ್ಯಂತ ಆಕರ್ಷಣೀಯ ಪ್ರವಾಸೋದ್ಯಮ ಪ್ರದೇಶ ಆಗಬೇಕು. ರಾಜ್ಯದಲ್ಲೇ ಅತಿ ಹೆಚ್ಚು ಮತ್ತು ೪ ಮಟ್ಟದ ವಿದ್ಯುತ್ ಉತ್ಪಾದನೆ ಆಗುತ್ತಿರುವ ವ್ಯವಸ್ಥೆ ಕುರಿತು ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಮ್ಯೂಸಿಯಂ ಲ್ಲಿ ಲೈವ್ ಟಿವಿ ಹಾಕಿ ತೋರಿಸುವ ವ್ಯವಸ್ಥೆ ಮಾಡುವಂತೆ ತಿಳಿಸಿದ್ದೇನೆ. ಕಾಮಗಾರಿಗಳು ಕ್ಷಿಪ್ರಗತಿಯಲ್ಲಿ ಆಗಬೇಕಿದ್ದು 6 ರಿಂದ 8 ತಿಂಗಳಲ್ಲಿ ಕೆಲಸ ಮುಗಿಯುವ ನಿರೀಕ್ಷೆ ಇದೆ ಎಂದರು.

ಶಾಸಕರಾದ ಬೇಳೂರು ಗೋಪಾಲಕೃಷ್ಣ ಮಾತನಾಡಿ, ರಾಜ್ಯದ, ಹೊರ ರಾಜ್ಯದ ಜನರು ಬರುವ ಹಾಗೆ ಜೋಗ ಜಲಪಾತ ಪ್ರದೇಶ ಅಭಿವೃದ್ಧಿಪಡಿಸಲಾಗುತ್ತಿದೆ. ರೂ. 184 ಕೋಟಿ ವೆಚ್ಚದ ಕಾಮಗಾರಿ ಇದಾಗಿದ್ದು ಈವರೆಗೆ 95 ಕೋಟಿ ಬಿಡುಗಡೆ ಮಾಡಲಾಗಿದೆ. ರೈನ್ ಡಾನ್ಸ್,ಫೌಂಟನ್ , ಗ್ಲಾಸ್ ಹೌಸ್ , ರೋಪ್ ವೇ, ಜಯಿಂಟ್ ವೀಲ್ ಇತರೆ ಮನೋರಂಜನೆ, ಪಾರ್ಕಿಂಗ್, ಪೀಕ್ ಸೀಜನ್ ಲ್ಲಿ ಜನದಟ್ಟಣೆ ನಿರ್ವಹಣೆ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲಭೂತ ವ್ಯವಸ್ಥೆ ಮಾಡಲಾಗುವುದು. ಡ್ಯಾಂ ಕೆಳಗೆ ಜಾಗ ಇದ್ದು ಕೆಆರ್ ಎಸ್ ರೀತಿ ದೊಡ್ಡ ಪಾರ್ಕ್ ನ್ನು ಪ್ರಾಧಿಕಾರದಿಂದ ಮಾಡುವ ಯೋಜನೆ ಇದೆ. ಪಾರ್ಕಿಂಗ್, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜೂ.30ರೊಳಗೆ ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡ ಡೆಡ್ ಲೈನ್

ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore

Share. Facebook Twitter LinkedIn WhatsApp Email

Related Posts

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM1 Min Read

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM1 Min Read

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM1 Min Read
Recent News

ಕಾಮಾಲೆ ಬಂದಾಗ ‘ಕಣ್ಣು ಮತ್ತು ಉಗುರು’ಗಳು ‘ಹಳದಿ ಬಣ್ಣ’ಕ್ಕೆ ತಿರುಗಲು ಕಾರಣವೇನು ಗೊತ್ತಾ.?

21/06/2025 10:02 PM

ಮಜ್ಜಿಗೆಯಲ್ಲಿ ಒಂದು ಚಿಟಿಕೆ ‘ಇಂಗು’ ಬೆರೆಸಿ ಕುಡಿಯೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

21/06/2025 9:48 PM

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM
State News
KARNATAKA

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

By kannadanewsnow0521/06/2025 9:27 PM KARNATAKA 1 Min Read

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಅಮಾನತುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿನಕಟ್ಟಿ…

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.