ಜಮ್ಮು (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಜೈಲಿನ ಉನ್ನತ ಅಧಿಕಾರಿ ಹೇಮಂತ್ ಕುಮಾರ್ ಲೋಹಿಯಾ ಮನೆಗೆ ನುಗ್ಗಿ ಭಯೋತ್ಪಾದಕರು ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಹತ್ಯೆಯ ಹೊಣೆಯನ್ನು ಭಯೋತ್ಪಾದನಾ ಸಂಘಟನೆಯಾದ ಲಷ್ಕರ್ ಇ ತೊಯಿಬಾ ( Lashkar -e -taiba) ಹೊತ್ತುಕೊಂಡಿದೆ.
ಹೇಮಂತ್ ಕುಮಾರ್ ಲೋಹಿಯಾ ಅವರು ಜಮ್ಮು ಕಾಶ್ಮೀರದ ಡಿಜಿಪಿ ಆಗಿದ್ದರು. 57 ವರ್ಷದ ಲೋಹಿಯಾ, ಜಮ್ಮುವಿನ ಹೊರವಲಯದಲ್ಲಿ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಕ್ಟೋಬರ್ 3 ರಂದು ನಿನ್ನೆ ಅವರ ಮೃತದೇಹ ಪತ್ತೆಯಾಗಿತ್ತು, ಅವರ ಕುತ್ತಿಗೆಯನ್ನು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರದ ಪ್ರವಾಸದ ಅವಧಿಯಲ್ಲೇ ಭಯೋತ್ಪಾದಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ
ಇನ್ನೊಂದು ಕಡೆ ಹೇಮಂತ್ ಕುಮಾರ್ ಮನೆಯ ಕೆಲಸದವನ ಮೇಲೆ ಅನುಮಾನ ವ್ಯಕ್ತವಾಗಿದ್ದು, ಹತ್ಯೆ ಬೆನ್ನಲ್ಲೇ ಲೋಹಿಯಾರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ ಮನೆ ಕೆಲಸದಾಳು ಯಾಸೀರ್ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಪ್ರಾಥಮಿಕ ಪರೀಕ್ಷೆಯಲ್ಲಿ ಇದೊಂದು ಶಂಕಿತ ಕೊಲೆ ಪ್ರಕರಣ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 1992ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ಕತ್ತು ಸೀಳಿರುವ ಸ್ಥಿತಿಯಲ್ಲಿ ಕೊಲೆಯಾಗಿ ಪತ್ತೆಯಾಗಿದ್ದಾರೆ. ಹೇಮಂತ್ ಅವರನ್ನು ಆಗಸ್ಟ್ನಲ್ಲಿ ಜೈಲುಗಳ ಮಹಾನಿರ್ದೇಶಕರಾಗಿ (ಜೆ & ಕೆ) ನೇಮಿಸಲಾಗಿತ್ತು.
ಈ ಸಂಬಂಧ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಮನೆಯ ಸಹಾಯಕ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ಆರಂಭಿಸಲಾಗಿದೆ. ತನಿಖಾ ಪ್ರಕ್ರಿಯೆಯು ಪ್ರಾರಂಭವಾಗಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
BIGG NEWS: ಅರಮನೆಯಲ್ಲಿ ಇಂದು ಆಯುಧಪೂಜೆ; ನಾಳೆ ಜಂಬೂ ಸವಾರಿಗೆ ಭರದ ಸಿದ್ಧತೆ,ಬಿಗಿ ಭದ್ರತೆ | Mysore Dasara