ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡರಾದ ಧನರಾಜ್ ಎಸ್. ತಾಳಂಪಳ್ಳಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಧನರಾಜ್ ತಾಳಂಪಳ್ಳಿ ಅವರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಧನರಾಜ್ ತಾಳಂಪಳ್ಳಿ ಧನ್ಯವಾದ:
ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಧನರಾಜ್ ಎಸ್. ತಾಳಂಪಳ್ಳಿ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ನಿಷ್ಠಾವಂತ ಕಾರ್ಯಕರ್ತನಾಗಿ ನಾನು ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮತ್ತು ನನ್ನ ಮೇಲೆ ವಿಶ್ವಾಸವಿಟ್ಟು ನನಗೆ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷನ ಜವಾಬ್ದಾರಿಯನ್ನು ನೀಡಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಗೆ ಧನ್ಯವಾದ ಅರ್ಪಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದರಾದ ಪ್ರಿಯಾಂಕಾ ವಾದ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಕಾರ್ಯದರ್ಶಿಗಳಾದ ಗೋಪಿನಾಥ ಪಳನಿಯಪ್ಪನ್, ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಹೆಬ್ಬಾಗಿಲು ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ
BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್