Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರ ಚುನಾವಣೆಗೆ ಮುನ್ನ ಮೇಲ್-ಇನ್ ಮತಪತ್ರಗಳು, ಮತದಾನ ಯಂತ್ರ ತೆಗೆದುಹಾಕುವ ಆದೇಶಕ್ಕೆ ಸಹಿ : ಅಮೆರಿಕಾ ಅಧ್ಯಕ್ಷ ಟ್ರಂಪ್

18/08/2025 6:01 PM

BREAKING: ‘ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಆಲಿ’ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

18/08/2025 6:00 PM

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

18/08/2025 5:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ
KARNATAKA

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

By kannadanewsnow0918/08/2025 5:50 PM

ಬೆಂಗಳೂರು : “ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸಭೆ ಕಲಾಪದ ವೇಳೆ ನಡೆದ ಚರ್ಚಾ ಸಮಯದಲ್ಲಿ ಮಾತನಾಡಿದ ಅವರು, “ಜವಾಬ್ದಾರಿಯುತ ದಕ್ಷ ಹಿರಿಯ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅಧಿಕಾರಿಗಳ ಮೇಲೆ ನಮಗೆ ನಂಬಿಕೆಯಿದೆ. ಮುಖ್ಯಮಂತ್ರಿಗಳು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿ ಪ್ರತಿವರ್ಷ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಅವರಿಗೂ ಆ ಕ್ಷೇತ್ರದ ಮೇಲೆ ನಂಬಿಕೆಯಿದೆ. ಸಿಎಲ್ ಪಿ ಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡರು ಹಾಗೂ ಬೇಳೂರು ಗೋಪಾಲಕೃಷ್ಣ ಅವರು ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ” ಎಂದರು.

ಒಂದೆರಡು ದಿನ ಸುಮ್ಮನಿರಿ

“ಧರ್ಮಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಹ ಸೂಚನೆ ನೀಡಿದ್ದು ಯಾರಿಗೆ ಯಾವ ರೀತಿ ಬಲಿ ತೆಗೆದುಕೊಳ್ಳಬೇಕೋ, ಯಾವ ಕಾನೂನು ಬಳಸಬೇಕೋ ಅದನ್ನು ಮಾಡಲಾಗುತ್ತದೆ. ಗೃಹಸಚಿವರು ಇದಕ್ಕೆ ಬದ್ದವಾಗಿದ್ದಾರೆ. ಈ ವಿಚಾರದಲ್ಲಿ ಒಂದೆರಡು ದಿನ ಸುಮ್ಮನಿರಿ. ನೀವೆಲ್ಲರೂ ತಾಳ್ಮೆವಹಿಸಿ” ಎಂದು ಪ್ರತಿಪಕ್ಷಗಳಿಗೆ ಆಗ್ರಹಿಸಿದರು.

“ಪ್ರತಿಪಕ್ಷದವರು ಮೊದಲೇ ಎಸ್ ಐಟಿ ರಚನೆ ಬೇಡ ಎಂದು ಹೇಳಬೇಕಿತ್ತು. ಆದರೆ ಹದಿನೈದು ದಿನ ಕಳೆದ ನಂತರ ಹೇಳುತ್ತಾ ಇದ್ದೀರಿ. ಈ ವಿಚಾರದಲ್ಲಿ ಮೊದಲು ನೀವು ಮಾತನಾಡಿಯೇ ಇಲ್ಲ. ದಿನಬೆಳಗಾದರೆ ನಿಮ್ಮ (ಪ್ರತಿಪಕ್ಷಗಳ ನಾಯಕರು) ಮುಖ್ಯಮಂತ್ರಿಗಳ ಮೇಲೆ, ನನ್ನ ಮೇಲೆ ಸೇರಿದಂತೆ ಅನೇಕರ ಮೇಲೆ ಯಾರೋ ಒಬ್ಬ ಆಪಾದನೆ ಮಾಡಿದ್ದಾರೆ. ಇದರಲ್ಲಿ ಷಡ್ಯಂತ್ರ ಇರಬಹುದು. ಇದೆಲ್ಲವೂ ಆಚೆ ಬರಬೇಕು ಅದಕ್ಕಾಗಿ ಗೃಹಸಚಿವರು ಕಾನೂನಿನ ಅಡಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

“ಯಾವುದೇ ಗೌಪ್ಯ ಮಾಹಿತಿಗಳನ್ನು ಬಹಿರಂಗಗೊಳಿಸುವುದಿಲ್ಲ ಎಂದು ಗೃಹಸಚಿವರು ಪ್ರಮಾಣ ವಚನ ತೆಗೆದುಕೊಂಡಿರುತ್ತಾರೆ. ವಿರೋಧ ಪಕ್ಷದಲ್ಲಿ ಇರುವ ನೀವುಗಳು ಸಹ ಅಧಿಕಾರದಲ್ಲಿದ್ದವರು. ತನಿಖೆ ವಿಚಾರವನ್ನು ಬಹಿರಂಗಪಡಿಸುವ ಮೊದಲು ಎಲ್ಲರೂ ತಾಳ್ಮೆಯಿಂದ ಇರಬೇಕು. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣವಿರಬಾರದು. ಇದರಲ್ಲಿ ರಾಜಕೀಯ ಮಾಡಬೇಡಿ” ಎಂದರು.

“ತಪ್ಪು ಯಾರೇ ಮಾಡಿದ್ದರು ಶಿಕ್ಷೆ ಆಗಿಯೇ ಆಗುತ್ತದೆ. ಸೌಜನ್ಯ ಪ್ರಕರಣದಲ್ಲಿ ಯಾವುದೇ ತನಿಖೆ ನಡೆಯಲಿ ಎಂದು ಪ್ರತಿಪಕ್ಷವರು ಹೇಳಿದರು. ನಾವು ಅದನ್ನು ಗೌರವಿಸಿದೆವು. ಕೊನೆಗೆ ನ್ಯಾಯಲಯ ಹಾಗೂ ಸಿಬಿಐ ನವರು ಅಂತಿಮ ತೀರ್ಪು ನೀಡಿದಾಗ ಏನೂ ಇಲ್ಲ ಎಂದು ತಿಳಿಯಿತು” ಎಂದು ಹೇಳಿದರು.

“ತನಿಖೆ ಯಾವ ಕಾರಣಕ್ಕೆ ಪ್ರಾರಂಭವಾಗುತ್ತದೆ ಎಂಬುದು ಪ್ರತಿಪಕ್ಷಗಳಿಗೂ ತಿಳಿದಿದೆ. ಧರ್ಮಸ್ಥಳ ವಿಚಾರದಲ್ಲಿ ಸರಿತಪ್ಪುಗಳಿವೆಯೋ, ಷಡ್ಯಂತ್ರವಿದೆಯೋ ಎಂಬುದು ತನಿಖೆ ನಂತರ ತಿಳಿಯುತ್ತದೆ. ವ್ಯಕ್ತಿಯೊಬ್ಬ ತಲೆಬುರುಡೆ ಹಿಡಿದುಕೊಂಡು ನ್ಯಾಯಲಯದ ಮುಂದೆ ಹೇಳಿಕೆ ನೀಡಿದ ಮೇಲೆ ಇದನ್ನು ಇಡೀ ದೇಶ ನೋಡಿತು. ಜೊತೆಗೆ ಎಲ್ಲಾ ಮಾಧ್ಯಮಗಳು ಇದರ ಬಗ್ಗೆ ಗಮನ ಸೆಳೆಯಿತು” ಎಂದರು.

ಷಡ್ಯಂತ್ರ ಮಾಡಿದವರು ಯಾರು ಎಂದು ಉಪಮುಖ್ಯಮಂತ್ರಿಗಳು ಬಹಿರಂಗಪಡಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದಾಗ, “ತನಿಖೆ ಮುಗಿದ ನಂತರ ನೂರಕ್ಕೆ ನೂರರಷ್ಟು ಅವರ ಹೆಸರು, ಫೋಟೋ ಎಲ್ಲವೂ ಆಚೆ ಬರುತ್ತದೆ” ಎಂದು ತಿಳಿಸಿದರು.

ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

Share. Facebook Twitter LinkedIn WhatsApp Email

Related Posts

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

18/08/2025 5:35 PM1 Min Read

ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

18/08/2025 5:33 PM1 Min Read

ಎಲೆಕ್ಟ್ರಿಕಲ್ ಮೋಟರ್ ರಿವೈಂಡಿಂಗ್ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

18/08/2025 5:29 PM1 Min Read
Recent News

2026ರ ಚುನಾವಣೆಗೆ ಮುನ್ನ ಮೇಲ್-ಇನ್ ಮತಪತ್ರಗಳು, ಮತದಾನ ಯಂತ್ರ ತೆಗೆದುಹಾಕುವ ಆದೇಶಕ್ಕೆ ಸಹಿ : ಅಮೆರಿಕಾ ಅಧ್ಯಕ್ಷ ಟ್ರಂಪ್

18/08/2025 6:01 PM

BREAKING: ‘ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಆಲಿ’ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

18/08/2025 6:00 PM

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

18/08/2025 5:50 PM

BREAKING : ಪ್ರಧಾನಿ ಮೋದಿಗೆ ಪುಟಿನ್ ಕರೆ, ಅಲಾಸ್ಕಾದಲ್ಲಿ ಟ್ರಂಪ್ ಸಭೆ ಕುರಿತು ಮಾಹಿತಿ ಹಂಚಿಕೊಂಡ ರಷ್ಯಾ ಅಧ್ಯಕ್ಷ

18/08/2025 5:49 PM
State News
KARNATAKA

ಧರ್ಮಸ್ಥಳ ಕೇಸ್; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸಿಎಂ ಸೂಚನೆ- ಡಿಸಿಎಂ ಡಿಕೆಶಿ

By kannadanewsnow0918/08/2025 5:50 PM KARNATAKA 2 Mins Read

ಬೆಂಗಳೂರು : “ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ…

ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

18/08/2025 5:35 PM

ಜಂಗಲ್ ಖರಾಬು-ಬಿ ಖರಾಬು ಜಮೀನಿನ ಮಂಜೂರಾತಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

18/08/2025 5:33 PM

ಎಲೆಕ್ಟ್ರಿಕಲ್ ಮೋಟರ್ ರಿವೈಂಡಿಂಗ್ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

18/08/2025 5:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.