ಬೆಂಗಳೂರು: ಶ್ರೀ ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ರಾಜ್ಯದ ಪ್ರಭಾವಿ ಸ್ವಾಮೀಜಿಯನ್ನು ಭೇಟಿಯಾಗಿದ್ದು ಬೆಳಕಿಗೆ ಬಂದಿದೆ.
ಹೌದು ಧರ್ಮಸ್ಥಳ ಷಡ್ಯಂತ್ರಕ್ಕೆ ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ ರಾಜ್ಯದ ಪ್ರಭಾವಿ ಸ್ವಾಮೀಜಿಯಾಗಿರುವಂತ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿದ್ದು ತಿಳಿದು ಬಂದಿದೆ. ಅವರನ್ನು ಬುರುಡೆ ಗ್ಯಾಂಗ್ ಭೇಟಿಯಾಗಿದ್ದಂತ ಪೋಟೋಗಳು ವೈರಲ್ ಕೂಡ ಆಗಿದ್ದಾವೆ.
ನಿರ್ಮಲಾನಂದನಾಥ ಶ್ರೀಗಳನ್ನು ಧರ್ಮಸ್ಥಳ ಬುರುಡೆ ಗ್ಯಾಂಗ್ ನ ಆರೋಪಿ ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ ಭೇಟಿಯಾಗಿದ್ದನ್ನು ಪೋಟೋದಲ್ಲಿ ಕಾಣಬಹುದಾಗಿದೆ.
ನಿರ್ಮಲಾನಂದ ಶ್ರೀ ಭೇಟಿಯ ವೇಳೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಸ್ವಾಮೀಜಿ ಬಳಿಯಲ್ಲಿ ಬುರುಡೆ ಕಥೆಯನ್ನು ಗ್ಯಾಂಗ್ ಹೇಳಿತ್ತಂತೆ. ಜೊತೆಗೆ ಸರ್ಕಾರದ ಮೇಲೆ ಒತ್ತಡ ಹಾಕಿ ತನಿಖೆ ನಡೆಸೋದಕ್ಕೆ ಮನವಿ ಮಾಡಿದ್ದಾಗಿ ಹೇಳಲಾಗುತ್ತಿದೆ.
BREAKING: ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ತೆರವು
ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ








