ಧಾರವಾಡ : ಭಜರಂಗದಳದ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನಿಸಿರುವ ಘಟನೆ ಧಾರವಾಡ ನಗರದ ಹಳೆ ಎಪಿಎಂಸಿ ಬಳಿ ನಡೆದಿದೆ.
ಗೋ ರಕ್ಷಣೆ ಮಾಡಲು ಹೋದಾಗ ಸೋಮಶೇಖರ ಚನ್ನಶೆಟ್ಟಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗುತ್ತಿದ್ದು, ಧಾರವಾಡ ನಗರದ ಹಳೆ ಎಪಿಎಂಸಿ ಬಳಿ ಹಲ್ಲೆ ನಡೆಸಿರುವ ಆರೋಪ ಈಗ ಕೇಳಿ ಬಂದಿದೆ. ಹಲ್ಲೆಗೆ ಒಳಗಾದ ಸೋಮಶೇಖರ ಚೆನ್ನಶೆಟ್ಟಿ ಪ್ರಾಣಿ ರಕ್ಷಕ ಹಾಗೂ ಉರಗ ರಕ್ಷಕನು ಕೂಡ ಆಗಿದ್ದಾನೆ. ಠಾಣೆಯ ಮುಂದೆ ಕುಳಿತು ಇದೀಗ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.