Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧಾರವಾಡ: ಬರ ಪರಿಹಾರ ಹಣವನ್ನು ಸಾಲದ ಖಾತೆಗೆ ಜಮಾ ಮಾಡದಂತೆ DC ದಿವ್ಯ ಪ್ರಭು ಸೂಚನೆ
KARNATAKA

ಧಾರವಾಡ: ಬರ ಪರಿಹಾರ ಹಣವನ್ನು ಸಾಲದ ಖಾತೆಗೆ ಜಮಾ ಮಾಡದಂತೆ DC ದಿವ್ಯ ಪ್ರಭು ಸೂಚನೆ

By kannadanewsnow0918/05/2024 8:19 PM

ಧಾರವಾಡ : ಸರಕಾರವು ಯಾವುದೇ ಪ್ರೋತ್ಸಾಹ ಧನ ಅಥವಾ ಸಹಾಯ ಧನವನ್ನು ರೈತರ ಹಾಗೂ ಸಾರ್ವಜನಿಕರ ಜೀವನೋಪಾಯಕ್ಕಾಗಿ ಬಿಡುಗಡೆ ಮಾಡುತ್ತದೆ. ಆದ್ದರಿಂದ ಬರ ಪರಿಹಾರದ ಹಣ ಸೇರಿದಂತೆ ವೃದ್ಯಾಪ್ಯ ವೇತನ, ಅಂಗವಿಕಲರ ಮಾಶಾಸನ, ನರೆಗಾ ಕೂಲಿ ಹಾಗೂ ಇತರೆ ಸರಕಾರದಿಂದ ಬಿಡುಗಡೆ ಆಗಿರುವಂತಹ ಪ್ರೋತ್ಸಾಹ ಧನ ನೇರವಾಗಿ ಫಲಾನುಭವಿಗಳ ಖಾತೆಗೆ (ಡಿಬಿಟಿ ಮೂಲಕ) ಸಂದಾಯವಾಗಿರುವಂತಹ ಹಣವನ್ನು ಯಾವುದೇ ಕಾರಣಕ್ಕೆ ಸಾಲದ ಖಾತೆಗೆ ಜಮಾ ಮಾಡಬಾರದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ನಿನ್ನೆ ಸಂಜೆ (ಮೇ.17) ಸರಕಾರದಿಂದ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವು ಬ್ಯಾಂಕಿನಲ್ಲಿ ಸಾಲದ ಖಾತೆಗೆ ಜಮಾ ಆಗಿತ್ತಿರುವ ಕುರಿತು ರೈತರಿಂದ ದೂರುಗಳ ಕಾರಣ ಧಾರವಾಡ ರೂಡ್ ಸೆಟ್ ಆವರಣದ ಸಭಾಂಗಣದಲ್ಲಿ (RUDSETI) ಆವರಣದಲ್ಲಿ ಆರ್.ಬಿ.ಐ ಅಧಿಕಾರಿ ಮೋನಿ ರಾಜ ಬ್ರಹ್ಮ, ಜಿಲ್ಲಾ ಲೀಡ ಬ್ಯಾಂಕ ವ್ಯವಸ್ಥಾಪಕರ ಶ್ರೀ ಪ್ರಭುದೇವ ಎನ್ ಜಿ ಅವರ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕಿನ ವ್ಯವಸ್ಥಾಪಕರುಗಳ ಜೊತೆ ತುರ್ತು ಸಭೆಯನ್ನು ಜರುಗಿಸಿ, ಮಾತನಾಡಿದರು.

ಸರಕಾರದಿಂದ ಬಿಡುಗಡೆಯಾದ ಯಾವುದೇ ತರಹದ ಪ್ರೋತ್ಸಾಹ ಧನವನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡದೆ ಗ್ರಾಹಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕು ಹಾಗೂ ಅವರ ಜೊತೆ ಸಂಯಮದಿಂದ ವರ್ತಿಸಬೇಕು. ತಾಂತ್ರಿಕ ಸಮಸ್ಯೆ ಇದ್ದರೆ ಗ್ರಾಹಕರಿಗೆ ಸರಿಯಾಗಿ ತಿಳುವಳಿಕೆ ನೀಡಿ ಮಾರ್ಗದರ್ಶನ ಮಾಡಬೇಕು ಮತ್ತು ಸಮಸ್ಯೆಯನ್ನು ಬೇಗನೆ ಪರಿಹರಿಸಬೇಕು ಎಂದು ಅವರು ಸಲಹೆ ನೀಡಿದರು.

ಧಾರವಾಡ ಜಿಲ್ಲೆಯಲ್ಲಿ ಬ್ಯಾಂಕ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಸರಕಾರದ ಯೋಜನೆಗಳ ಲಾಭವನ್ನು ತಲುಪಿಸುತ್ತಿವೆ. ಆದರೆ ಎಲ್ಲ ಬ್ಯಾಂಕ್ ಗಳು ಇದನ್ನು ಅನುಸರಿಸಬೇಕು. ಸರಿಯಾದ ಸಮಯಕ್ಕೆ ಉದ್ಯೋಗಿಗಳಿಗೆ ಸಾಲ, ಸಹಾಯಧನ ಸೌಲಭ್ಯ ದೊರೆಯಬೇಕು ಎಂದರು.

ರೈತರ ಸಹಮತ ವಿಲ್ಲದೆ ಬರಪರಿಹಾರ ಸೇರಿದಂತ ಯಾವ ಪ್ರೋತ್ಸಹಧನವನ್ನು ಸಾಲಕ್ಕೆ ಜಮೆ ಮಾಡಬಾರದು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಎಲ್ಲ ಬ್ಯಾಂಕ್ ಶಾಖೆಗಳಿಗೆ ಮಾಹಿತಿ ನೀಡಿ, ರೈತರಿಗೆ ತೊಂದರೆ ಆಗದಂತೆ ನಿರಂತರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಲೀಡ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ ಎನ್. ಜಿ. ಅವರು 2023-24 ಸಾಲಿನ ಪ್ರಗತಿಯನ್ನು ವಿವರಿಸುತ್ತಾ, ಜಿಲ್ಲೆಯ ಬ್ಯಾಂಕುಗಳಿಂದ 2,90,392 ಫಲಾನುಭವಿಗಳು ಕೃಷಿ ಸಾಲ ಪಡೆದಿದ್ದಾರೆ. ಗೊತ್ತುಪಡಿಸಿದ ಗುರಿಗೆ ಹೋಲಿಸಲಾಗಿ

ಶೇ. 125 ಕೃಷಿ ಸಾಲ ಮತ್ತು ಶೇ.164 ಆಧ್ಯತಾ ವಲಯಕ್ಕೆ ಹೆಚ್ಚಿನ ಸಾಲವನ್ನು ವಿತರಿಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ವಾರ್ಷಿಕ ವಿತ್ತೀಯ ಯೋಜನೆ 2024-25ರ ಕುರಿತು ಮಾಹಿತಿ ನೀಡುತ್ತಾ ಆಧ್ಯತಾವಲಯಕ್ಕೆ 12,738.76 ಕೋಟಿ ರೂ.ಗಳ ಗುರಿ ನಿಗದಿಪಡಿಸಲಾಗಿದ್ದು ಮಾರ್ಚ್ 2024ರ ಸಾಧನೆಗೆ ಹೋಲಿಸಲಾಗಿ ಆಧ್ಯತಾ ವಲಯಕ್ಕೆ ಸುಮಾರು ಶೇ. 14 ರಷ್ಟು ಹೆಚ್ಚಿನ ಗುರಿ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

2024-25 ನೇ ಸಾಲಿನಲ್ಲಿ ಬೇಳೆ ಸಾಲ ವಲಯದಲ್ಲಿ 1,27,283 ಫಲಾನುಭವಿಗಳು ಇದ್ದು, ಮಾರ್ಚ್ 2024 ರ ಅಂತ್ಯಕ್ಕೆ 1,640.27 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 2291.25 ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ. ಒಟ್ಟು 140 ರಷ್ಟು ಶೇಕಡಾವಾರು ಸಾಧನೆ ಆಗಿದೆ.

ಕೃಷಿ ಅವಧಿ ಸಾಲ ವಲಯದಲ್ಲಿ 1,63,109 ಫಲಾನುಭವಿಗಳು ಇದ್ದು, ಮಾರ್ಚ್ 2024 ರ ಅಂತ್ಯಕ್ಕೆ 1,741.76 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 1,946.22 ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ. ಒಟ್ಟು 112 ಶೇಕಡಾವಾರು ಸಾಧನೆ ಆಗಿದೆ.

ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ವಲಯದಲ್ಲಿ 47,160 ಫಲಾನುಭವಿಗಳು ಇದ್ದು ಮಾರ್ಚ್ 2024 ರ ಅಂತ್ಯಕ್ಕೆ 3,021 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 6,368.18 ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ. ಒಟ್ಟು 211 ಶೇಕಡಾವಾರು ಸಾಧನೆ ಆಗಿದೆ.

ಇತರ ಆಧ್ಯತಾ ವಲಯದಲ್ಲಿ 68,824 ಫಲಾನುಭವಿಗಳು ಇದ್ದು, ಮಾರ್ಚ್ 2024 ರ ಅಂತ್ಯಕ್ಕೆ 471.87 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 658.24 ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ. ಒಟ್ಟು 139 ಶೇಕಡಾವಾರು ಸಾಧನೆ ಆಗಿದೆ. ಆಧ್ಯತಾ ರಹಿತ ವಲಯದಲ್ಲಿ 1,39,313 ಫಲಾನುಭವಿಗಳು ಇದ್ದು ಮಾರ್ಚ್ 2024 ರ ಅಂತ್ಯಕ್ಕೆ 7,705.56 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 8,293.84 ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ. ಒಟ್ಟು 108 ಶೇಕಡಾವಾರು ಸಾಧನೆ ಆಗಿದೆ. ಒಟ್ಟಾರೆಯಾಗಿ 5,45,689 ಫಲಾನುಭವಿಗಳು ಇದ್ದು ಮಾರ್ಚ್ 2024 ರ ಅಂತ್ಯಕ್ಕೆ 14,580.46 ಕೋಟಿ ರೂ.ಗಳಷ್ಟು ಗುರಿ ಹೊಂದಿದ್ದು, 19,560.73ಕೋಟಿ ರೂ.ಗಳಷ್ಟು ಸಾಧನೆ ಮಾಡಲಾಗಿದೆ. ಒಟ್ಟು 139 ಶೇಕಡಾವಾರು ಸಾಧನೆ ಆಗಿದೆ ಎಂದು ಅವರು ತಿಳಿಸಿದರು.

2024-25 ರಲ್ಲಿ ಜಿಲ್ಲೆಯ ವಾರ್ಷಿಕ ವಿತ್ತೀಯ ಯೋಜನೆಯಲ್ಲಿ 2024-25 ರ ಅಂತ್ಯಕ್ಕೆ ಬೆಳೆ ಸಾಲ ವಲಯದಲ್ಲಿ 2,003.74, ಕೃಷಿ ಅವಧಿ ಸಾಲ ವಲಯದಲ್ಲಿ 1,223.11, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ವಲಯದಲ್ಲಿ 8,096.24, ಶಿಕ್ಷಣ ಸಾಲ ವಲಯದಲ್ಲಿ 59.70, ಗೃಹ ಸಾಲ ವಲಯದಲ್ಲಿ 284.90, ಇತರೆ ಆಧ್ಯತಾ ವಲಯದಲ್ಲಿ 429.90 ಹಾಗೂ ಆಧ್ಯತಾ ರಹಿತ ವಲಯದಲ್ಲಿ 7,314.77 ಕೋಟಿ ರೂ.ಗಳ ಗುರಿಯನ್ನು ಹೊಂದಲಾಗಿದ್ದು, ಒಟ್ಟಾರೆಯಾಗಿ 19,412.36 ಕೋಟಿ ರೂ.ಗಳ ಗುರಿಯ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಆರ್‍.ಬಿ.ಐ ಅಧಿಕಾರಿ ಮೋನಿ ರಾಜ ಬ್ರಹ್ಮ ಅವರು ಮತನಾಡಿ, ಆರ್.ಬಿ.ಐ ನ ಮಾರ್ಗಸೂಚಿ ಮತ್ತು ನೀತಿಯನ್ನು ವಿವರಿಸಿದರು. ಗ್ರಾಹಕರಿಗೆ ಅನೌಪಚಾರಿಕ ಮೂಲಗಳಿಂದ ಪಡೆದಂತ ಸಾಲಗಳಿಂದ ಉಂಟಾಗುವ ತೊಂದರೆಗಳ ಬಗ್ಗೆ ವಿವರಿಸಿ ಔಪಚಾರಿಕ ಮೂಲಗಳಿಂದ ಸಾಲ ಪಡೆಯಲು ಪ್ರೋತ್ಸಾಹಿಸಬೇಕೆಂದು ಬ್ಯಾಂಕಿನ ಅಧಿಕಾರಿಗಳಿಗೆ ಸಲಹೆ ನೀಡಿದರು. ಸೈಬರ ವಂಚನೆ, ಸೈಬರ್ ಅಪರಾಧಗಳನ್ನು ವರದಿ ಮಾಡಲು ಸ್ಥಾಪಿಸಿರುವಂತ ಸಹಾಯವಾಣಿ 1930 ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಪ್ರಸಾರ ಮಾಡಲು ಅವರು ತಿಳಿಸಿದರು.

ಸಭೆಯಲ್ಲಿ ಎಸ್.ಬಿ. ಐ, ಕೆನರಾ, ಕೆವಿಜಿಬಿ, ಬ್ಯಾಂಕಾ ಬರೋಡಾ, ಯುನಿಯನ್ ಬ್ಯಾಂಕ್ ಆಪ್ ಇಂಡಿಯಾ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ ಅಧಿಕಾರಿಗಳು ಭಾಗವಹಿಸಿದ್ದರು.

BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ

ಬೆಂಗಳೂರಿನ ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.22ರ ಬೆಳಿಗ್ಗೆ 6ರಿಂದ 23ರ ಸಂಜೆ 6ರವರೆಗೆ ‘ಮದ್ಯ ಮಾರಾಟ’ ನಿಷೇಧ

Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.