ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಅಮಾನತುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ಸಸ್ಪೆಂಡ್ ಮಾಡಲಾಗಿದೆ. ಅಮಾನತುಗೊಳಿಸಿ ಧಾರವಾಡ ಜಿಲ್ಲಾ ಪಂಚಾಯತ್ ಸಿಇಒ ಭುವನೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಯರಿನಾರಾಯಣಪುರಕ್ಕೆ ಮೂಲಸೌಕರ್ಯ ಕಲ್ಪಿಸದೆ ಪಿಡಿಓ ಕರ್ತವ್ಯ ಲೋಪ ಎಸಗಿದ್ದಾರೆ. ಯರಿನಾರಾಯಣಪುರ ಗ್ರಾಮದ ಕೆರೆಗೆ ಬಿದ್ದು ಅವಳಿ ಮಕ್ಕಳು ಮೃತಪಟ್ಟಿದ್ದರು. ಸಚಿವ ಸಂತೋಷ್ ಲಾಡ್ ಭೇಟಿಯ ವೇಳೆ ಗ್ರಾಮದ ನಿವಾಸಿಗಳು ದೂರು ನೀಡಿದ್ದರು. ಜನರ ಸುರಕ್ಷತೆಗೆ ಪಿಡಿಓ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಚಿವರು ಅಮಾನತಿಗೆ ಸೂಚನೆ ನೀಡಿದ್ದಾರೆ.