ಬೆಂಗಳೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ( Gruhalakshmi Scheme ) ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000 ಹಣವನ್ನು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಒಂದು ವೇಳೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೆಂದರೇ ಇದೇ ಕಾರಣವಂತೆ. ಅದಕ್ಕಾಗಿ ನೀವು ಈ ಕೆಲಸ ಮಾಡಿ, ತಪ್ಪದೇ ಬರುತ್ತೆ ಎಂಬುದು ಇಲಾಖೆಯ ಮಾಹಿತಿಯಾಗಿದೆ.
ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದೆ.
ರಾಜ್ಯದ ಕೆಲ ಜಿಲ್ಲೆಯ ಯಜಮಾನಿ ಮಹಿಳೆಯರಿಗೆ NPCI Failure/ E-KYC Failure ಕಾರಣದಿಂದ ಫಲಾನುಭವಿಗಳಿಗೆ ಹಣ ಪಾವತಿಯಾಗಿಲ್ಲ. ಹೀಗಾಗಿ ಯಜಮಾನಿ ಮಹಿಳೆಯರು ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಹಾಗೂ ಬ್ಯಾಂಕ್ ಪಾಸ್ಪುಸ್ತಕ ಒಂದು ಅಥವಾ ಇತರೆ ಪಾಸ್ಪುಸ್ತಕ ಇದ್ದಲ್ಲಿ ತೆಗೆದುಕೊಂಡು ಬಂದು ಸರಿಪಡಿಸಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತಿಳಿಸಿದೆ.
ರಾಜ್ಯದ ‘ರೈತ’ರಿಗೆ ಮಹತ್ವದ ಮಾಹಿತಿ: ವಿವಿಧ ಬೆಳೆಗಳಿಗೆ ‘ವಿಮೆ ನೋಂದಣಿ’ಗೆ ಆಹ್ವಾನ