Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

ALERT : ನ್ಯೂಸ್ ಪೇಪರ್ ನಲ್ಲಿ ಪ್ಯಾಕ್ ಮಾಡಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಆರೋಗ್ಯಕ್ಕೆ ದೊಡ್ಡ ಅಪಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾನಿ ಮಾಸ್ಟರ್ ಪ್ರಕರಣದಲ್ಲಿನ ನಿಲುವು, ಯಡಿಯೂರಪ್ಪ ಕೇಸಲ್ಲಿ ಯಾಕಿಲ್ಲ?: ದಿನೇಶ್ ಗುಂಡೂರಾವ್ ಪ್ರಶ್ನೆ
KARNATAKA

ಜಾನಿ ಮಾಸ್ಟರ್ ಪ್ರಕರಣದಲ್ಲಿನ ನಿಲುವು, ಯಡಿಯೂರಪ್ಪ ಕೇಸಲ್ಲಿ ಯಾಕಿಲ್ಲ?: ದಿನೇಶ್ ಗುಂಡೂರಾವ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮಹಿಳೆಯರ ವಿಚಾರದಲ್ಲಿ ಬಿಜೆಪಿ ಸಮರ್ಥವಾಗಿದ್ದರೆ ಯಡಿಯೂರಪ್ಪ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಬೇಕು. ಜಾನಿ ಮಾಸ್ಟರ್ ಪ್ರಕರಣದಲ್ಲಿನ ನಿಲುವು, ಯಡಿಯೂರಪ್ಪನವರ ಪ್ರಕರಣದಲ್ಲಿ ಯಾಕಿಲ್ಲ? ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಅವರ ಈ ದಿಟ್ಟ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ನಾವು ಸಹನೆ ಇಟ್ಟುಕೊಳ್ಳಬಾರದು. ಅಂತಹವರ ವಿರುದ್ಧ ನಾವು ಸಾಧ್ಯವಾದಷ್ಟು ಹೆಚ್ಚಿನ ಕಠಿಣ ನಿರ್ಧಾರ ಕೈಗೊಳ್ಳಬೇಕು. ಮಹಿಳೆಯರು ಸಾರ್ವಜನಿಕ ಕ್ಷೇತ್ರ, ಉದ್ಯಮ ಹಾಗೂ ವ್ಯಾಪಾರದಲ್ಲಿ ಮಹಿಳೆಯರ ಪಾತ್ರ ಹೆಚ್ಚುತ್ತಿರುವ ಸಂದರ್ಭದಲ್ಲಿ ಅವರಿಗೆ ಮುಜುಗರ ಹಾಗೂ ತೊಂದರೆಯಾಗದಂತಹ ವಾತಾವರಣ ನಿರ್ಮಿಸುವುದು ಎಲ್ಲಾ ಸರ್ಕಾರಗಳ ಜವಾಬ್ದಾರಿ. ಹೀಗಾಗಿ ಈ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ ಎಂದರು.

ಕೇಂದ್ರ ಸರ್ಕಾರದ ಮಟ್ಟದಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ಒಂದು ಕಡೆಯಾದರೆ, ಬಿಜೆಪಿ ಪಕ್ಷ ಮಟ್ಟದ ವಿಚಾರದಲ್ಲಿ ಯಾಕೆ ದ್ವಂದ್ವ ನಿಲುವು ತಾಳಲಾಗಿದೆ? ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸಿಐಡಿ ತನಿಖೆಯಾಗಿ ಜುಲೈ ತಿಂಗಳಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಈಗ ವಿಚಾರಣೆ ನಡೆಯಬೇಕಾಗಿದೆ ಎಂದರು.

ಸಿಐಡಿಯವರು ಯಡಿಯಬರಪ್ಪ ಹಾಗೂ ಮೂವರು ಸಹಚರರ ವಿರುದ್ಧ 700 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದು, ಇವರು ಸಾಕ್ಷಿನಾಶ, ಪ್ರಕರಣ ಮುಚ್ಚಿಹಾಕುವ ವಿಚಾರ, ಸಂತ್ರಸ್ತ ಬಾಲಕಿ ಹೆಳಿಕೆಗಳನ್ನು ಸೇರಿಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಸಹಾಯಕ್ಕೆಂದು ಬಂದ ಬಾಲಕಿ ಮೇಲೆ ಇಂತಹ ಕೆಟ್ಟ ಅನುಭವ ಆಗಿರುವ ಪ್ರಕರಣವನ್ನು ಬಹಳ ಹಗುರವಾಗಿ ಪರಿಗಣಿಸಲಾಗಿರುವುದು ದುರ್ದೈವ. ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ. ಸಿಐಡಿ ತನಿಖೆಯಾಗಿ ಆರೋಪಪಟ್ಟಿಯಲ್ಲಿ ಅನೇಕ ಮಾಹಿತಿ ಇದ್ದರೂ ಇದನ್ನು ಪ್ರಶ್ನೆ ಮಾಡಬಾರದೇ? ಈ ವಿಚಾರದಲ್ಲಿ ಬಿಜೆಪಿ ಸ್ಪಷ್ಟ ನಿಲುವು ತೋರುತ್ತಿಲ್ಲ ಯಾಕೆ? ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಯಾಕೆ ಉಳಿಸಿಕೊಂಡಿದ್ದಾರೆ? ಕನಿಷ್ಠಪಕ್ಷ ಬಿಜೆಪಿಯು ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಪಕ್ಷದ ಎಲ್ಲಾ ಹುದ್ದೆಗಳಿಂದ ಅವರನ್ನು ತೆಗೆದುಹಾಕುವ ನಿರ್ಧಾರ ಯಾಕೆ ಮಾಡುತ್ತಿಲ್ಲ? ಮಹಿಳೆಯರ ಪರವಾಗಿ ಅವರ ನಿಲುವೇನು? ಎಂದು ಕೇಳಿದರು.

ಯಾವ ಒತ್ತಡಕ್ಕೆ ಅವರು ಮಣಿದಿದ್ದಾರಾ? ಬಿಜೆಪಿ ನಾಯಕರ ಹೇಳಿಕೆ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರ ಬ್ಲಾಕ್ ಮೇಲ್ ನಿಂದಾಗಿ ಯಡಿಯೂರಪ್ಪ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಒಂದುಕಡೆ ಆ ಆರೋಪ ಹೊತ್ತಿರುವ ಕಾರಣ ನೃತ್ಯ ನಿರ್ದೇಶಕನಿಗೆ ಕೊಟ್ಟಿರುವ ಪ್ರಶಸ್ತಿ ಹಿಂಪಡೆಯಲಾಗಿದೆ, ಮತ್ತೊಂಡೆದೆ ಇದೇ ಆರೋಪ ಹೊತ್ತಿರುವ ಯಡಿಯೂರಪ್ಪ ಅವರ ಮೇಲೆ ಆರೋಪಪಟ್ಟಿ ದಾಖಲಾಗಿದ್ದರೂ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ? ಈ ವಿಚಾರದಲ್ಲಿ ಬಿಜೆಪಿ ಮನಸ್ಥಿತಿ ಏನು? ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೈಕಮಾಂಡ್ ಹಿಂದೇಟು ಹಾಕುತ್ತಿರುವುದೇಕೆ? ಎಂದು ಪ್ರಶ್ನಿಸಿದರು.

ಪೋಕ್ಸೋ ಪ್ರಕರಣ ಹಾಗೂ ಈ ಕಾಯ್ದೆ ಮಾನದಂಡಗಳು ಬಹಳ ಗಂಭೀರವಾಗಿವೆ. ಈ ಆರೋಪ ಸಾಬೀತಾದರೆ ಗಂಭೀರವಾದ ಶಿಕ್ಷೆ ಒಳಗುವ ಸಾಧ್ಯತೆ ಇದೆ. ಬಿಜೆಪಿಯ ಅನೇಕ ನಾಯಕರ ಮೇಲೆ ಇಂತಹ ಆರೋಪಗಳಿವೆ. ಶಾಸಕ ಮುನಿರತ್ನ ಅವರ ಪ್ರಕರಣದಲ್ಲಿ ಬಿಜೆಪಿ ಸ್ಪಷ್ಟ ನಿಲುವು ತಾಳಿಲ್ಲ. ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರದಲ್ಲೂ ಬಿಜೆಪಿ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಮಹಿಳೆಯರ ಮೇಲಿನ ಎಲ್ಲಾ ದೌರ್ಜನ್ಯ ಪ್ರಕರಣಗಳನ್ನು ಬಿಜೆಪಿಯವರು ರಾಜಕೀಯವಾಗಿ ನೋಡುತ್ತಿದ್ದು, ರಾಜಕೀಯವಾಗಿ ನೋಡುವ ಅಗತ್ಯವಿಲ್ಲ ಎಂದು ಹೇಳಿದರು.

ದೇಶದ ಕುಸ್ತಿಪಟುಗಳು ತಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ವಿರೋಧಿಸಿ ಬೀದಿಯಲ್ಲಿ ಹೋರಾಟ ಮಾಡಿದರು. ಈ ಪ್ರಕರಣದಲ್ಲೂ ಬಿಜೆಪಿ ನಾಯಕರು ಸಹಾನುಭೂತಿ ತೋರಲಿಲ್ಲ, ಆರೋಪಿ ಬ್ರಿಜ್ ಭೂಷಣ್ ಸಿಂಗ್ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ನಿಟ್ಟಿನಲ್ಲೇ ಬಿಜೆಪಿಯನ್ನು ಬಲತ್ಕಾರಿ ಜನತಾ ಪಕ್ಷ ಎಂದು ಕರೆಯುತ್ತಾರೆ. ಈ ರೀತಿ ಹೇಳಲು ಕಷ್ಟವಾಗುತ್ತದೆ. ಆದರೆ ಇಂತಹ ಪ್ರಕರಣಗಳು ಮಣಿಪುರದ ಘಟನೆಗಳಲ್ಲಿ ದಿಟ್ಟ ನಿಲುವು ಯಾಕೆ ತೋರುತ್ತಿಲ್ಲ? ಎಂದು ಕೇಳಿದರು.

ಮಹಿಳೆಯರ ವಿಚಾರದಲ್ಲಿ ಬಿಜೆಪಿ ಸಮರ್ಥವಾಗಿದ್ದರೆ ಯಡಿಯೂರಪ್ಪ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಬೇಕು. ಜಾನಿ ಮಾಸ್ಟರ್ ಪ್ರಕರಣದಲ್ಲಿನ ನಿಲುವು, ಯಡಿಯೂರಪ್ಪನವರ ಪ್ರಕರಣದಲ್ಲಿ ಯಾಕಿಲ್ಲ? ಎಂದು ಪ್ರಶ್ನಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಮಾಧ್ಯಮ ಕಾರ್ಯದರ್ಶಿ ದಿಪಕ್ ತಿಮಯ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ಕೆಪಿಸಿಸಿ ವಕ್ತಾರರಾದ ನಟರಾಜ್ ಗೌಡ ಅವರು ಉಪಸ್ಥಿತರಿದ್ದರು.

BIG BREAKING: ‘ತೆಲಗಿ ಮಾದರಿ’ಯಲ್ಲಿ ಕರ್ನಾಟಕದಲ್ಲಿ ಮತ್ತೊಂದು ಭಾರೀ ‘ನಕಲಿ ಛಾಪಾ ಕಾಗದ ಹಗರಣ’

BREAKING : ಹರಿಯಾಣ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ `ವಿನೇಶ್ ಪೋಗಟ್’ ಗೆ ಭರ್ಜರಿ ಗೆಲುವು | Vinesh Phogat

Share. Facebook Twitter LinkedIn WhatsApp Email

Related Posts

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

1 Min Read

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

1 Min Read

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

2 Mins Read
Recent News

SHOCKING : ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

ALERT : ನ್ಯೂಸ್ ಪೇಪರ್ ನಲ್ಲಿ ಪ್ಯಾಕ್ ಮಾಡಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಆರೋಗ್ಯಕ್ಕೆ ದೊಡ್ಡ ಅಪಾಯ!

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

State News
KARNATAKA

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 2.33ಕೋಟಿ ಮೌಲ್ಯದ ಗಾಂಜಾ ಜಪ್ತಿ!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ಸ್…

BREAKING : ಸರ್ಕಾರಿ ಕೆಲಸ ಕೊಡಿಸುವುದಾಗಿ, 5 ಕೋಟಿಗೂ ಹೆಚ್ಚು ವಂಚನೆ : ಬೆಂಗಳೂರಲ್ಲಿ ಅಪ್ಪ, ಮಗಳು ಅರೆಸ್ಟ್!

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

BIG NEWS : ಜಮೀರ್ ಅಹ್ಮದ್ ಖಾನ್ ಇಲ್ಲದೆ ಸರ್ಕಾರ ಇಲ್ಲ, ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ : ಕೋಡಿಶ್ರೀ ಭವಿಷ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.