ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.
2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 / 9113935220 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ಅವರು ತಿಳಿಸಿದ್ದಾರೆ.
‘ರೈತ’ರಿಗೆ ಗುಡ್ ನ್ಯೂಸ್: ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಕೃಷಿ ಉಪಕರಣ’ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ: ಜ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut