Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕನ್ನಡ ತಂತ್ರಾಂಶ ಬಳಗ’ಕ್ಕೆ ದಶಮಾನೋತ್ಸವ ಸಂಭ್ರಮ: ಮಿಮಿಕ್ರಿಯಲ್ಲಿ 2ನೇ ಬಹುಮಾನ ಪಡೆದ ‘ಚಿತ್ರಲಿಂಗಯ್ಯ’

27/07/2025 8:10 PM

ಆ.1ರಿಂದ ‘UPI ನಿಯಮ’ಗಳಲ್ಲಿ ಏನೆಲ್ಲ ಬದಲಾವಣೆ? ಇಲ್ಲಿದೆ ಮಾಹಿತಿ | UPI rule changes

27/07/2025 7:27 PM

2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಕೃತಿಗಳ ಆಹ್ವಾನ

27/07/2025 7:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಪ್ಲೋಮಾ, ಪದವೀಧರರೇ ಗಮನಿಸಿ : `ಯುವನಿಧಿ’ ಯೋಜನೆ ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!
KARNATAKA

ಡಿಪ್ಲೋಮಾ, ಪದವೀಧರರೇ ಗಮನಿಸಿ : `ಯುವನಿಧಿ’ ಯೋಜನೆ ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!

By kannadanewsnow5709/01/2025 5:34 AM

ಚಿತ್ರದುರ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರೂಪಿಸಲಾಗಿದ್ದು, ಆರ್ಥಿಕ ಸಂಕಷ್ಟದ ನಡುವೆ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು, ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಏರ್ಪಡಿಸಿದ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೃತ್ತಿಪರ ತರಬೇತಿ ಪಡೆದ ಡಿಪ್ಲೊಮಾ ವಿದ್ಯಾರ್ಥಿಗಳು ಹಾಗೂ ಪದವಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಸ್ವಾವಲಂಬಿ ಜೀವನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯಸರ್ಕಾರದ ಯುವನಿಧಿ ನೆರವಾಗಲಿದ್ದು, ಯುವನಿಧಿಯಡಿ ದೊರಕುವ ನಿರುದ್ಯೋಗ ಭತ್ಯೆಯನ್ನು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧವಾಗಲು ಪುಸ್ತಕ ಖರೀದಿಗೆ ಉಪಯೋಗವಾಗಲಿದೆ ಎಂದರು.

ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರವು ಯುವನಿಧಿ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿದ್ದು, ನಿರುದ್ಯೋಗಿ ಯುವ ಜನರಿಗೆ ಎರಡು ವರ್ಷಗಳವರೆಗೆ ಅಥವಾ ಫಲಾನುಭವಿಗಳಿಗೆ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ ಒದಗಿಸಲಾಗುತ್ತದೆ. ಯುವನಿಧಿ ಯೋಜನೆಯು ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ರೂ.1500/- ಒದಗಿಸುವ ಅಭೂತಪೂರ್ವ ಯೋಜನೆ ಇದಾಗಿದೆ ಎಂದು ಹೇಳಿದರು.

ಜಿಲ್ಲಾ ಉದ್ಯೋಗಾಧಿಕಾರಿ ಡಿ.ರವೀಂದ್ರ ಮಾತನಾಡಿ, ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ಮತ್ತು 2024ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಇದೇ ಜ.20 ರವರೆಗೆ “ಯುವನಿಧಿ” ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣ ಪತ್ರ ಸೇರಿದಂತೆ ನೋಂದಣಿಗೆ ಅಗತ್ಯವಿರುವ ದಾಖಲಾತಿಗಳೊಂದಿಗೆ http://sevasindhugs.karnataka.gov.in ನಲ್ಲಿ ಆನ್‍ಲೈನ್‍ನಲ್ಲಿ ನೋಂದಾಯಿಸಬೇಕು. ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ, ಕಾಲೇಜು, ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಣಿ ಘಟಕ ತೆರೆಯಲಾಗಿದ್ದು, ಉಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 4,714 ಯುವ ಜನರು ಯುವನಿಧಿಯ ಯೋಜನೆಯ ಫಲಾನುಭವಿಗಳಾಗಿದ್ದು, 2024ರ ಜನವರಿಯಿಂದ ನವೆಂಬರ್ ಮಾಹೆಯವರೆಗೂ ಒಟ್ಟು 6.77 ಕೋಟಿ ಹಣ ಪಾವತಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ ಮಾತನಾಡಿ, ರಾಜ್ಯ ಸರ್ಕಾರವು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಜಾರಿಗೊಳಿಸಿ, ವಿದ್ಯಾವಂತ ನಿರುದ್ಯೋಗಿ ಯುವ ಜನತೆಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿದರು.

Diploma graduates note: These documents are mandatory for registration of 'Yuvanidhi' scheme. ಡಿಪ್ಲೋಮಾ ಪದವೀಧರರೇ ಗಮನಿಸಿ : `ಯುವನಿಧಿ ಯೋಜನೆ'ಗೆ ನೋಂದಣಿ ಆರಂಭ.!
Share. Facebook Twitter LinkedIn WhatsApp Email

Related Posts

‘ಕನ್ನಡ ತಂತ್ರಾಂಶ ಬಳಗ’ಕ್ಕೆ ದಶಮಾನೋತ್ಸವ ಸಂಭ್ರಮ: ಮಿಮಿಕ್ರಿಯಲ್ಲಿ 2ನೇ ಬಹುಮಾನ ಪಡೆದ ‘ಚಿತ್ರಲಿಂಗಯ್ಯ’

27/07/2025 8:10 PM1 Min Read

2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಕೃತಿಗಳ ಆಹ್ವಾನ

27/07/2025 7:21 PM2 Mins Read

ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

27/07/2025 7:09 PM2 Mins Read
Recent News

‘ಕನ್ನಡ ತಂತ್ರಾಂಶ ಬಳಗ’ಕ್ಕೆ ದಶಮಾನೋತ್ಸವ ಸಂಭ್ರಮ: ಮಿಮಿಕ್ರಿಯಲ್ಲಿ 2ನೇ ಬಹುಮಾನ ಪಡೆದ ‘ಚಿತ್ರಲಿಂಗಯ್ಯ’

27/07/2025 8:10 PM

ಆ.1ರಿಂದ ‘UPI ನಿಯಮ’ಗಳಲ್ಲಿ ಏನೆಲ್ಲ ಬದಲಾವಣೆ? ಇಲ್ಲಿದೆ ಮಾಹಿತಿ | UPI rule changes

27/07/2025 7:27 PM

2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಕೃತಿಗಳ ಆಹ್ವಾನ

27/07/2025 7:21 PM

ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

27/07/2025 7:09 PM
State News
KARNATAKA

‘ಕನ್ನಡ ತಂತ್ರಾಂಶ ಬಳಗ’ಕ್ಕೆ ದಶಮಾನೋತ್ಸವ ಸಂಭ್ರಮ: ಮಿಮಿಕ್ರಿಯಲ್ಲಿ 2ನೇ ಬಹುಮಾನ ಪಡೆದ ‘ಚಿತ್ರಲಿಂಗಯ್ಯ’

By kannadanewsnow0927/07/2025 8:10 PM KARNATAKA 1 Min Read

ಬೆಂಗಳೂರು: ಇಂದು ನಗರದಲ್ಲಿ ಕನ್ನಡ ತಂತ್ರಾಂಶ ಬಳಗದ ದಶಮಾನೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಹಾಸ್ಯ ಚಟಾಕಿಯ…

2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಕೃತಿಗಳ ಆಹ್ವಾನ

27/07/2025 7:21 PM

ನೊಂದವರ ರಾಯಭಾರಿಗಳಾಗಿ ಸಮಾಜದ ಋಣ ತೀರಿಸೋಣ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

27/07/2025 7:09 PM

ನಟ ದರ್ಶನ್ ಅಭಿಮಾನಿಗಳ ವಿರುದ್ಧ ಕಿಡಿಕಾರಿದ ನಟಿ ರಮ್ಯಾ: ‘ಅಶ್ಲೀಲ ಮೆಸೇಜ್’ಗಳ ಪೋಸ್ಟ್ ಹಂಚಿಕೆ

27/07/2025 6:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.