Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದೇ ‘ಯುವನಿಧಿ’ಗೆ ಡಿಪ್ಲೋಮಾ, ಪದವೀಧರರು ನೊಂದಾಯಿಸಿ: ನಾಳೆಯಿಂದ ‘ಭತ್ಯೆ’ ಪಡೆಯರಿ
KARNATAKA

ಇಂದೇ ‘ಯುವನಿಧಿ’ಗೆ ಡಿಪ್ಲೋಮಾ, ಪದವೀಧರರು ನೊಂದಾಯಿಸಿ: ನಾಳೆಯಿಂದ ‘ಭತ್ಯೆ’ ಪಡೆಯರಿ

By kannadanewsnow0911/01/2024 5:37 PM

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ  ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ನಾಳೆ ಜನವರಿ 12 ರಂದು ಯೋಜನೆಗೆ ಶಿವಮೊಗ್ಗ ನಗರದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಯೋಜನೆಗೆ ನೊಂದಣಿಯಾಗಿರುವ  ಎಲ್ಲ ಅಭ್ಯರ್ಥಿಗಳ ಖಾತೆಗೆ ನಾಳೆ ದಿನ ಮೊದಲ ತಿಂಗಳ ಹಣ ಜಮೆ ಆಗಲಿದೆ.

ಈ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿದೆ.

ಪದವೀದಧರರಿಗೆ ರೂ. 3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500/- ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡಲಾಗುವುದು. ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬೇಕು.

ಯುವನಿಧಿ ಯೋಜನೆಯ ಫಲಾನುಭವಿಗಳಾಗಲು ಪದವಿ, ಡಿಪ್ಲೋಮಾಗಳನ್ನು 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡಿರಬೇಕು ಹಾಗೂ 2023ರಲ್ಲಿ ತೇರ್ಗಡೆಯಾಗಿದ್ದು 180 ದಿವಸಗಳವರೆಗೆ ನಿರುದ್ಯೋಗಿಗಳಾಗಿ ಅಭ್ಯರ್ಥಿಗಳು ಕನಿಷ್ಠ 6 ವರ್ಷ ಕರ್ನಾಟಕದ ನಿವಾಸಿಗಳಾಗಿರಬೇಕು. ಅಂತವರು ಈ ಯೋಜನೆ ಫಲಾನುಬಿವಿಗಳಾಗುತ್ತಾರೆ.

ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರುವವರು, ಸ್ವ-ಉದ್ಯೋಗಿಗಳು, ಕನಿಷ್ಠ 6 ವರ್ಷ ಕರ್ನಾಟಕ ರಹವಾಸಿಗಳಲ್ಲದವರು ಮತ್ತು ಪದವಿ ಅಥವಾ ಡಿಪ್ಲೋಮಾ ಕೋರ್ಸ್ನ್ನು ಕರ್ನಾಟಕ ಹೊರತಾಗಿ ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದವರು, ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವವರು ಈ ಯೋಜನೆಗೆ ಅನರ್ಹರಾಗಿರುತ್ತಾರೆ.

2023 ರಲ್ಲಿ ಪದವಿ ಅಥವಾ ಡಿಪ್ಲೋಮಾ ತೇರ್ಗಡೆಯಾದ ನಂತರ ಕನಿಷ್ಠ 6 ತಿಂಗಳವರೆಗೆ ಉದ್ಯೋಗವನ್ನು ಪಡೆಯದ ಮತ್ತು ಕರ್ನಾಟಕದಲ್ಲಿ ವಾಸವಿದ್ದು, ವಿದ್ಯಾರ್ಥಿಯಾಗಿರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ. ವಾಸವಿರುವ ವಿದ್ಯಾರ್ಥಿ ಎಂದರೆ ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ  ಅಥವಾ ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು. 6 ವರ್ಷಗಳ ವಾಸವಿರುವುದನ್ನು ಎಸ್‌ಎಸ್‌ಎಲ್ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಮತ್ತು ಡಿಪ್ಲೋಮಾ ಪ್ರಮಾಣ ಪತ್ರ ಅಥವಾ ಅಂಕಪಟ್ಟಿ ಅಥವಾ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣಪತ್ರ ಅಥವಾ ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪ್ರಮಾಣ ಪತ್ರ NIOS(ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್‌ಸ್ಕೂಲಿಂಗ್) ನೀಡಿದ ಎಸ್‌ಎಸ್‌ಎಲ್ ಅಂಕಪಟ್ಟಿಯನ್ನು ಸಹ ವಾಸಸ್ಥಳ ಪರಿಶೀಲನೆಗಾಗಿ ಪರಿಗಣಿಸಲಾಗುವುದು.

ಅಭ್ಯರ್ಥಿಯ ಪದವಿ ಅಥವಾ ಡಿಪ್ಲೋಮಾ ಹೊಂದಿರುವ ಸ್ಥಿತಿಯ ಬಗ್ಗೆ ಪರಿಶೀಲಿಸಲು National Academic Depository (NAD) ಯಲ್ಲಿ ಅಪ್ಲೊಡ್ ಮಾಡಲಾದ ಅಭ್ಯರ್ಥಿಗಳ ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದು.ಫಲಿತಾಂಶಗಳ ಪ್ರಕಟಣೆಯ ದಿನಾಂಕದಿಂದ ಒಂದು ವಾರದೊಳಗೆ ವಿದ್ಯಾರ್ಥಿಗಳ ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರಗಳು ಅಥವಾ ತಾತ್ಕಾಲಿಕ ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರಗಳು ಓಂಆ ನಲ್ಲಿ ಅಪ್ಲೊಡ್ ಮಾಡಲಾಗಿರುವುದನ್ನು ವಿಶ್ವವಿದ್ಯಾಲಯಗಳು ಮತ್ತು ಮಂಡಳಿಗಳು ಖಚಿಪಡಿಸಿಕೊಳ್ಳಬೇಕು.

ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ಮೊದಲು ಡಿಜಿಲಾಕರನಲ್ಲಿ ಡಿಜಿಲಾಕರ್ ಖಾತೆಯನ್ನು ಸೃಜಿಸುವ ಮೂಲಕ ತಮ್ಮ NAD ಪ್ರಮಾಣಪತ್ರ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು. NAD ಕರ್ನಾಟಕ ಪೋರ್ಟಲನಲ್ಲಿ ಚಾಟ್‌ಬಾಕ್ಸ್ ಉಪಯುಕ್ತತೆಯನ್ನು ಬಳಸಿಕೊಂಡು ಅಭ್ಯರ್ಥಿಗಳು ತಮ್ಮ ಡಿಜಿಲಾಕರನಲ್ಲಿ ಪದವಿ ಅಥವಾ  ಡಿಪ್ಲೋಮಾ ಪ್ರಮಾಣ ಪತ್ರಗಳ ಲಭ್ಯತೆಯನ್ನು ಪರಿಶೀಲನೆ ಮಾಡತಕ್ಕದ್ದು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು (ಡಿಬಿಟಿ) ಸ್ವೀಕರಿಸಲು ಆಧಾರ್ ಸಂಖ್ಯೆ ಸೇರ್ಪಡೆಯಾದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಹಾಗೂ ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಕೊಳ್ಳಬೇಕು.

ಎಲ್ಲ ಅಗತ್ಯ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ ಅಂದರೆ ತಾತ್ಕಾಲಿಕ ಪದವಿ ಪತ್ರ ಪಡೆದು 180 ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು. ಆದರೆ 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು. ಅಭ್ಯರ್ಥಿಯು ಅವಳು ಅಥವಾ ಅವನು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷಣೆಯನ್ನು ಸಲ್ಲಿಸಬೇಕು. ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ವತ್ರ ನೀಡತಕ್ಕದ್ದು. ನೋಂದಾಯಿತ ವಿವರಗಳನ್ನು NAD ಮೂಲಕ ಪರಿಶೀಲಿಸಲಾಗುವುದು. ಪದವಿ ಅಥವಾ ಡಿಪ್ಲೋಮಾದ ಪ್ರಮಾಣಪತ್ರಗಳನ್ನು manual ಅಪ್ಲೊಡ್ ಮಾಡಿದರೆ, ಅಪ್ ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಅವರಿಗೆ ರವಾನಿಸಲಾಗುವುದು.

ತಪ್ಪು ಘೋಷಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ. ಮತ್ತು  ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಅಭ್ಯರ್ಥಿಯು ನಿರುದ್ಯೋಗಿ ಎಂದು ಪ್ರತಿ ತಿಂಗಳು ಕಡ್ಡಾಯವಾಗಿ ದೃಢೀಕರಿಸಬೇಕು.  ಸೇವಾ ಸಿಂಧು ಪೊರ್ಟಲನಲ್ಲಿ ಉದ್ಯೋಗಿ ಅಥವಾ ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25 ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾರ್ ಆಧಾರಿತ ಮೂಲಕ ಘೋಷಣೆ ಮಾಡತಕ್ಕದ್ದು. ಸ್ವೀಕೃತವಾದ ಘೋಷಣೆಯ ಆಧಾರದ ಮೇಲೆ, ಮುಂದಿನ ತಿಂಗಳ ಭತ್ಯೆಯನ್ನು ಪಾವತಿ ಮಾಡಲಾಗುವುದು. ಪ್ರತಿ ತಿಂಗಳು ಘೋಷಣೆ ಮಾಡದಿದ್ದಲ್ಲಿ 90 ದಿನಗಳ ನಂತರ ನಿಷ್ಕ್ರಿಯಗೊಳಿಸಲಾಗುವುದು.

ಅಭ್ಯರ್ಥಿಗಳು ತಾನು ಕರ್ನಾಟಕ ರಹವಾಸಿಯೆಂದು. ಸರ್ಕಾರಿ ಉದ್ಯೋಗದಲ್ಲಿಲ್ಲವೆಂದು, ಸ್ವ-ಉದ್ಯೋಗಿಯಲ್ಲವೆಂದು ಮತ್ತು ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿಲ್ಲವೆಂದು ಅರ್ಜಿಯ ಪ್ರಾರಂಭದಲ್ಲಿಯೇ ಘೋಷಣೆ ಮಾಡಬೇಕಾಗುತ್ತದೆ. ಉದ್ಯೋಗ ದೊರಕಿದ ತಕ್ಷಣ ಪ್ರತಿ ತಿಂಗಳು 25ನೇ ತಾರೀಖಿನೊಳಗೆ ಘೋಷಣೆ ಮಾಡುವ ಸಂದರ್ಭದಲ್ಲಿ ಉದ್ಯೋಗಿಯೆಂದು ಘೋಷಿಸಬೇಕು. ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವು ಸ್ಕಿಲ್ ಕನೆಕ್ಟ್ ಪೋರ್ಟಲ್‌ಗೆ ಜೋಡಣೆಯಾಗಲಿದ್ದು, ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ದೀರ್ಘಾವಧಿ ಅಥವಾ ಅಲ್ಪವಾಧಿ ತರಬೇತಿಗಳನ್ನು ನೀಡಲು ಮತ್ತು ಈಗಾಗಲೇ ನೋಂದಾಯಿಸಿಕೊಂಡ ಉದ್ಯೋಗದಾತರು ಅಭ್ಯರ್ಥಿಗಳ ದತ್ತಾಂಶವನ್ನು ಬಳಸಿಕೊಂಡು ಅವರಿಗೆ ಉದ್ಯೋಗ ದೊರೆಯುವ ಸೌಲಭ್ಯ ಕೂಡಾ ದೊರೆಯಲಿದೆ.

ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ

BIG NEWS: ಜ.21ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ

Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.