ಕಲಬುರ್ಗಿ : ಪ್ರತಿಭಟನೆಯ ವೇಳೆ ಕಲಬುರ್ಗಿ ಜಿಲ್ಲಾಧಿಕಾರಿಯ ಕುರಿತು ಕಲ್ಬುರ್ಗಿ ಜಿಲ್ಲಾಧಿಕಾರಿಗಳು ಇಂಡಿಯಾದವರ? ಅಥವಾ ಪಾಕಿಸ್ತಾನದವರ? ಎಂದು ಬಿಜೆಪಿ MLC ರವಿಕುಮಾರ್ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆ ಕುರಿತು ಹೈಕೋರ್ಟ್ ವಿಚಾರಣೆಗೆ ಹಾಜರಾಗಿ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದು ಕಲ್ಬುರ್ಗಿಯ ಸೆನ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರು ವಿಚಾರಣೆಗೆ ಹಾಜರಾಗಿದ್ದರು.
ವಿಚಾರಣೆಯ ವೇಳೆ ಪೊಲೀಸರು ರವಿಕುಮಾರ್ ಅವರ ವಾಯ್ಸ್ ಸ್ಯಾಂಪಲ್ ಪಡೆದುಕೊಂಡರು.. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದೆ. ನನ್ನನ್ನು ಅರೆಸ್ಟ್ ಮಾಡಬಾರದು ಎಂದು ಕೋರ್ಟ್ ಹೇಳಿದೆ. ದಲಿತರ ಅವಹೇಳನ ಮಾಡಿಲ್ಲ ಆ ಬಗ್ಗೆ ವಿಡಿಯೋ ಇದೆ. ಕಲ್ಬುರ್ಗಿ ಜಿಲ್ಲಾಧಿಕಾರಿಗೂ ಕೂಡ ನಾನು ಬೈದಿಲ್ಲ ಧರ್ಮದ ವಿಚಾರವಾಗಿ ನಾನು ಹೇಳಿಕೆಯನ್ನು ನೀಡಿಲ್ಲ. ನಾನು ಹೇಳಿಕೆ ನೀಡಿದ ಮರುದಿನವೇ ಕ್ಷಮೆ ಕೇಳಿದ್ದೇನೆ ವೈಯಕ್ತಿಕವಾಗಿಯೂ ಜಿಲ್ಲಾಧಿಕಾರಿಗೆ ಪತ್ರ ಬರೆದು ಕ್ಷಮೆ ಕೇಳುತ್ತೇನೆ ಎಂದು ರವಿಕುಮಾರ್ ಅವರು ತಿಳಿಸಿದರು.