ರಾಮನಗರ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭ್ರಷ್ಟಾಚಾರದ ಪಿತಾಮಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಈ ಒಂದು ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ಅವರು ಹಾಕಿದ್ದು, ಭ್ರಷ್ಟಾಚಾರದ ಪಿತಾಮಹ ಅಂತ ಅಂದರೆ ಏನು ಅಂತ ಹೇಳಲಿ ನನ್ನ ಮೇಲಿನ ಆರೋಪ ಸಾಬೀತುಪಡಿಸಿದರೆ ನಾನು ಈಗಲೂ ಜೈಲಿಗೆ ಹೋಗಲು ರೆಡಿ ಇದ್ದೇನೆ ಎಂದು ಸವಾಲು ಹಾಕಿದರು.
ರಾಮನಗರ ತಾಲೂಕಿನ ಬಿಡದಿಯಲ್ಲಿ ಜನಲೋಂದನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮಾಡಿದ್ದ ಹಗರಣಕ್ಕೆ ಜವಾಬ್ದಾರಿ ಯಾರು? ರಾಮನಗರ ತಾಲೂಕಿನ ಬಿಡದಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ ಕಾರಿದ್ದು, ಯಾವ ಬ್ಯಾಂಕಿಗೆ ಹಣ ಹೋಗಿದೆ ಎಂಬ ಮಾಹಿತಿ ಕೊಡಬೇಕು.ಪಾದಯಾತ್ರೆಯಲ್ಲಿ ನಾವು ಪ್ರಶ್ನೆ ಕೇಳಿದ್ದಕ್ಕೆ ಉತ್ತರ ಕೊಡಬೇಕು. ನಮ್ಮನ್ನು ಜೈಲಿಗೆ ಹಾಕಿಸಬೇಕು ಅಂತ ಸಂಚು ನಡೆಯುತ್ತಿದೆ. ನಾನು ಜೈಲಿಗೆ ಹೋಗಬೇಕು ರೆಡಿ ಇದ್ದೇನೆ. ನನ್ನಂತಹ ಬೇಕಾದಷ್ಟು ಜನ ಕಾಂಗ್ರೆಸ್ ನಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದರು.
ಬಿವೈ ವಿಜಯೇಂದ್ರ ವಿರುದ್ಧ ಎಲ್ಲಾ ಆರೋಪಗಳನ್ನು ಬಿಚ್ಚಿಡುತ್ತೇನೆ. ಭ್ರಷ್ಟಾಚಾರದ ಪಿತಾಮಹ ಅಂತ ಅಂದ್ರೆ ಏನು ಅಂತ ಹೇಳಲಿ. ಆಗ ಬಿವೈ ವಿಜಯೇಂದ್ರನನ್ನು ಪಾರ್ಟಿ ಅಧ್ಯಕ್ಷ ಅಂತ ಒಪ್ಪಿಕೊಳ್ಳುತ್ತೇನೆ. ನಾನು ಇಡಿ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದೆ. ಸುಪ್ರೀಂ ಕೋರ್ಟ್ ನಲ್ಲಿ ಇಡಿ ಕೇಸ್ ವಜಾ ಆಗಿದ್ದು ಗೊತ್ತ? ಇದಕ್ಕೆಲ್ಲ ಉತ್ತರ ಕೊಡುತ್ತೇನೆ. ಸಮಯ ಬರಲಿ ಎಂದು ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬಿವೈ ವಿಜಯೇಂದ್ರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.