ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿತ್ತು. ಇದೇ ವೇಳೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ನಾಯಕರೇ ಮಾಡಿದ್ದರು. ಇದಕ್ಕೆ ಪುಷ್ಠಿ ನೀಡುವಂತೆ ಸಿಪಿ ಯೋಗೇಶ್ವರ್ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ.
‘ಮೇಕೆದಾಟು ಯೋಜನೆ’ಗೆ ಬೆಂಬಲ ನೀಡಿರುವ ‘HD ದೇವೇಗೌಡ’ಗೆ ಧನ್ಯವಾದ- ಮಾಜಿ MLC ರಮೇಶ್ ಬಾಬು
ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಗೆಲುವಿಗೆ ಸಹಾಯ ಮಾಡಿದ್ದೆ ಎಂದು ಯೋಗೇಶ್ವರ್ ಅವರೇ ಬಾಯಿಬಿಟ್ಟಿದ್ದಾರೆ.ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ನಾಯಕರೇ ಮಾಡಿದ್ದರು. ಇದಕ್ಕೆ ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರ ಹೇಳಿಕೆ ಪುಷ್ಟಿ ಎಂಬಂತಿದೆ.
BREAKING : ಲೋಕಸಭಾ ಚುನಾವಣೆಗೆ ‘ಕಾಂಗ್ರೆಸ್ ಅಭ್ಯರ್ಥಿಗಳ 6ನೇ ಪಟ್ಟಿ’ ಬಿಡುಗಡೆ
ರಾಮನಗರ ಜಿಲ್ಲೆ ಕನಕಪುರದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಭೆಯಲ್ಲಿ ಸಿಪಿ ಯೋಗೇಶ್ವರ್ ಅವರು ಈ ಸತ್ಯಸಂಗತಿಯನ್ನು ಬಾಯಿಬಿಟ್ಟಿದ್ದಾರೆ. ನನ್ನ ತಮ್ಮನನ್ನು ಗೆಲ್ಲಿಸಿಕೊಡಿ ಎಂದು ಡಿ.ಕೆ.ಶಿವಕುಮಾರ್ ಅವರು ಕಾಲಿಗೆ ಬಿದ್ದಿದ್ದರು. ಹೀಗಾಗಿ ಅಂದು ನಾನು ಡಿಕೆ ಸುರೇಶ್ ಗೆಲುವಿಗೆ ಸಹಾಯ ಮಾಡಿದ್ದೆ ಎಂದಿದ್ದಾರೆ. ಅಲ್ಲದೆ, ರಾಜಕೀಯ ವ್ಯವಸಾಯದಲ್ಲಿ ಡಿಕೆ ಬ್ರದರ್ಸ್ ಪ್ರವೀಣರು ಎಂದು ಹೇಳಿದ ಯೋಗೇಶ್ವರ್, ಡಿಕೆ ಬ್ರದರ್ಸ್ ಪ್ರತಿ ವರ್ಷ ಆಸ್ತಿ ಹೆಚ್ಚಿಸಿಕೊಂಡು ಶ್ರೀಮಂತರಾಗುತ್ತಿದ್ದಾರೆ ಎಂದರು.
BREAKING : ಲೋಕಸಭಾ ಚುನಾವಣೆಗೆ ‘ಕಾಂಗ್ರೆಸ್ ಅಭ್ಯರ್ಥಿಗಳ 6ನೇ ಪಟ್ಟಿ’ ಬಿಡುಗಡೆ
ಡಿ.ಕೆ.ಬ್ರದರ್ಸ್ಗೆ ಆಡಳಿತ ವಿರೋಧಿ ಅಲೆ ಇದೆ. ರಾಮನಗರ ಕ್ಷೇತ್ರದ ಶಾಸಕ ಗಂಡಸ್ತನದ ವಿಚಾರ ಚರ್ಚೆ ಮಾಡುತ್ತಾನೆ. ಅವನಿಗೆ ಜನ ತಕ್ಕಪಾಠ ಕಲಿಸುತ್ತಾರೆ. ಡಿ.ಕೆ.ಸುರೇಶ್ ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಕನಕಪುರ ಇಬ್ಬಾಗ ಮಾಡಾಯ್ತು, ಈಗ ದೇಶ ಇಬ್ಭಾಗ ಮಾಡಲು ಹೋಗುತ್ತಿದ್ದಾರೆ. ಸ್ಟಾಲಿನ್ ಜೊತೆ ಸೇರಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದಾರೆ. ಈ ಚುನಾವಣೆಯಲ್ಲಿ ಡಿಕೆ ಬ್ರದರ್ಸ್ಗೆ ತಕ್ಕ ಪಾಠ ಕಲಿಸಬೇಕು ಎಂದರು.