ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಬಂಧನದಲ್ಲಿರುವಂತ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜರಾಜೇಶ್ವರಿನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಿಸಿರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಯಾರೇ ಸ್ಟೇ ತಂದಿದ್ರೂ ತೆರವು ಮಾಡ್ತೀವಿ ಅಂತ ನಟ ದರ್ಶನ್ ಮನೆ ತೆರವು ಬಗ್ಗೆ ಡಿಕೆ ಶಿವಕುಮಾರ್ ಖಡಕ್ ಮಾತಿನಲ್ಲಿ ಹೇಳಿದ್ದಾರೆ.
ನಟ ದರ್ಶನ್ ಗೆ ಈಗ ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಿಸಿರೋ ಸಂಕಷ್ಟ ಎದುರಾರಗಿದೆ. ರಾಜ ರಾಜೇಶ್ವರಿ ನಗರದಲ್ಲಿನ ದರ್ಶನ್ ಮನೆ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಾಣ ಮಾಡಲಾಗಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಅಲ್ಲದೇ ನಟ ದರ್ಶನ್ ಮನೆ ಒತ್ತುವರಿ ತೆರವಿಗೂ ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕಿದ್ದರು.
ಈ ಬಗ್ಗೆ ಇಂದು ಬೆಂಗಳೂರು ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಗಮನಕ್ಕೆ ಬರುತ್ತಿದ್ದಂತೆ, ರಾಜಕಾಲುವೆಯನ್ನು ಯಾರೇ ಒತ್ತುವರಿ ಮಾಡಿದ್ರೂ, ಸ್ಟೇ ತಂದಿದ್ದರೂ ಸಹ ಕಾನೂನಿನ ಪ್ರಕಾರ ತೆರವು ಮಾಡಲು ಸೂಚನೆ ನೀಡಿದ್ದಾರೆ. ಹೀಗಾಗಿ ನಟ ದರ್ಶನ್ ಅವರು ರಾಜ ಕಾಲುವೇ ಒತ್ತುವರಿ ಮಾಡಿ ಕಟ್ಟಿರುವಂತ ಮನೆಯನ್ನು ಬಿಬಿಎಂಪಿ ಅಧಿಕಾರಿಗಳು ಶೀಘ್ರವೇ ತೆರವುಗೊಳಿಸೋ ಸಾಧ್ಯತೆ ಇದೆ.
BREAKING: ವಿಜಯಪುರದಲ್ಲಿ ಘೋರ ದುರಂತ: ವಿದ್ಯುತ್ ಸ್ಪರ್ಶಿಸಿ ಇಬ್ಬರು ಬಾಲಕರು ಧಾರುಣ ಸಾವು
ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi