Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

dks take oath

BIG BREAKING : ಸಂವಿಧಾನ ಹಿಡಿದುಕೊಂಡು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ ಡಿಕೆ ಶಿವಕುಮಾರ್

BIG BREAKING: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar Oath

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING : ಸಂವಿಧಾನ ಹಿಡಿದುಕೊಂಡು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ ಡಿಕೆ ಶಿವಕುಮಾರ್
KARNATAKA

BIG BREAKING : ಸಂವಿಧಾನ ಹಿಡಿದುಕೊಂಡು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ ಡಿಕೆ ಶಿವಕುಮಾರ್

By ಅವಿನಾಶ್‌ ಆರ್‌ ಭೀಮಸಂದ್ರ
dks take oath
dks take oath
  •  ಅವಿನಾಶ್‌ ಆರ್‌ ಭೀಮಸಂದ್ರ 

ಬೆಂಗಳೂರು: ದೀರ್ಘಾವಧಿಯ ರಾಜಕೀಯ ಚರ್ಚೆ ಹಾಗೂ ಹೈಕಮಾಂಡ್ ನಿರ್ದೇಶನದ ಬಳಿಕ, ರಾಜ್ಯ ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ “ಟ್ರಬಲ್‌ ಶೂಟರ್‌” ಎಂದೇ ಹೆಸರಾದ ಡಿ.ಕೆ. ಶಿವಕುಮಾರ್ ಅವರು ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.

ಬೆಂಗಳೂರಿನ ಲೋಕ ಭವನದ ಆವರಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ತಾಯಿ ಗೌರಮ್ಮ ಹಾಗೂ ಹಿರಿಯರ ಆಶೀರ್ವಾದ ಪಡೆದು ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ದೇವರೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಜೊತೆಗೆ ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ರೈತ ನಾಯಕರು, ಕನ್ನಡಪರ ಹೋರಾಟಗಾರರು ಹಾಗೂ ಸಾವಿರಾರು ಅಭಿಮಾನಿಗಳು ಈ ಸುದಿನಕ್ಕೆ ಸಾಕ್ಷಿಯಾದರು. ಸಂವಿಧಾನ ಹಿಡಿದುಕೊಂಡು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ್ದು ವಿಶೇಶವಾಗಿತ್ತು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಇಂದಿನಿಂದ ಡಿ.ಕೆ ಶಿವಕುಮಾರ್ ದರ್ಬಾರ್ ಆರಂಭಗೊಂಡಂತೆ ಆಗಿದೆ.

ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ; 13 ಸಚಿವರ ಪ್ರಮಾಣ ವಚನ
ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಿರಿಯ ನಾಯಕರಾದ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆಗೆ ಮೊದಲ ಹಂತದಲ್ಲಿ 13 ಪ್ರಮುಖ ನಾಯಕರು ಸಚಿವರಾಗಿ ಸಂಪುಟ ಸೇರಿದ್ದಾರೆ

  • ಯತೀಂದ್ರ ಸಿದ್ದರಾಮಯ್ಯ
  • ಯು.ಟಿ. ಖಾದರ್
  • ಎಂ.ಬಿ. ಪಾಟೀಲ್
  • ಕೆ.ಜೆ. ಜಾರ್ಜ್
  • ಕೆ.ಎಚ್. ಮುನಿಯಪ್ಪ
  • ಸತೀಶ್ ಜಾರಕಿಹೊಳಿ
  • ರಾಮಲಿಂಗಾರೆಡ್ಡಿ
  • ಕೃಷ್ಣ ಬೈರೇಗೌಡ
  • ಪ್ರಿಯಾಂಕ್ ಖರ್ಗೆ
  • ಈಶ್ವರ್ ಖಂಡ್ರೆ
  • ಬೈರತಿ ಸುರೇಶ್
  • ಶರಣಪ್ರಕಾಶ್ ಪಾಟೀಲ್

ರಾಜ್ಯಸಭಾ ಚುನಾವಣೆಗಳ ನಂತರ ಸಂಪುಟದ ಮುಂದಿನ ವಿಸ್ತರಣೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಸಂಘಟನಾ ಚಾತುರ್ಯ ಹಾಗೂ ಆಡಳಿತದ ಸುದೀರ್ಘ ಅನುಭವವಿದೆ. ಸಿದ್ದರಾಮಯ್ಯ ಅವರ ಯಶಸ್ವಿ ಆಡಳಿತದ ನಂತರ ಅಧಿಕಾರ ಹಿಡಿದಿರುವ ಡಿ.ಕೆ. ಶಿವಕುಮಾರ್ ಅವರ ಮುಂದೆ ಮುಂಬರುವ ಚುನಾವಣೆಗಳನ್ನು ಎದುರಿಸುವುದು, ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಅಚ್ಚುಕಟ್ಟಾಗಿ ಮುಂದುವರಿಸಿಕೊಂಡು ಹೋಗುವುದು ಹಾಗೂ ಎಲ್ಲ ವರ್ಗದ ಜನರನ್ನು ಒಟ್ಟಿಗೆ ಕೊಂಡೊಯ್ಯುವ ದೊಡ್ಡ ಜವಾಬ್ದಾರಿ ಇದೆ.ರಾಜ್ಯದ ಜನತೆ ನೂತನ ಮುಖ್ಯಮಂತ್ರಿಯವರ ಆಡಳಿತದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದು, ಕರ್ನಾಟಕದ ಪ್ರಗತಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಯಾಗಲಿ ಎಂದು ಶುಭ ಹಾರೈಸುತ್ತಿದ್ದಾರೆ.

Bengaluru Infrastructure Bengaluru Oath Ceremony congress government dk shivakumar Dr G Parameshwara Kanakapura MLA Karnataka Administration Karnataka Cabinet 2026 Karnataka Chief Minister karnataka politics KPCC President Political Update Karnataka ಕನಕಪುರ ಶಾಸಕ ಕರ್ನಾಟಕ ಅಭಿವೃದ್ಧಿ ಕರ್ನಾಟಕ ಆಡಳಿತ ಕರ್ನಾಟಕ ಮುಖ್ಯಮಂತ್ರಿ ಕರ್ನಾಟಕ ರಾಜಕೀಯ ಕಾಂಗ್ರೆಸ್ ಸರ್ಕಾರ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಗ್ಯಾರಂಟಿ ಯೋಜನೆಗಳು ಜಿ ಪರಮೇಶ್ವರ್ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಂಗಳೂರು ರಾಜಭವನ ರಾಜಕೀಯ ವಿಶ್ಲೇಷಣೆ ಸಚಿವ ಸಂಪುಟ ರಚನೆ ಸಿದ್ದರಾಮಯ್ಯ ರಾಜೀನಾಮೆ
Share. Facebook Twitter LinkedIn WhatsApp Email

Related Posts

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

3 Mins Read

BIG BREAKING: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar Oath

3 Mins Read

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

1 Min Read
Recent News

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

dks take oath

BIG BREAKING : ಸಂವಿಧಾನ ಹಿಡಿದುಕೊಂಡು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ ಡಿಕೆ ಶಿವಕುಮಾರ್

BIG BREAKING: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar Oath

ದೇಶದ ಮೂಲಸೌಕರ್ಯಕ್ಕೆ ಹೊಸ ಬೂಸ್ಟರ್ ಡೋಸ್: ಕೇಂದ್ರ ಸಂಪುಟದಿಂದ ಕೋಟ್ಯಂತರ ರೂಪಾಯಿಯ ಬೃಹತ್ ಯೋಜನೆಗಳಿಗೆ ಗ್ರೀನ್ ಸಿಗ್ನಲ್!

State News
KARNATAKA

BIG BREAKING: ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ…

dks take oath

BIG BREAKING : ಸಂವಿಧಾನ ಹಿಡಿದುಕೊಂಡು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರ ಮಾಡಿದ ಡಿಕೆ ಶಿವಕುಮಾರ್

BIG BREAKING: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar Oath

ರಾಜಕಾರಣಕ್ಕೆ ವಾಪಸ್ಸು ಬರುವುದರ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.