Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING ; ಆನ್ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ಅನುಮೋದನೆ ; 3 ವರ್ಷ ಜೈಲು, 1 ಕೋಟಿ ರೂ. ದಂಡ

22/08/2025 9:12 PM

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

22/08/2025 8:49 PM

ಮೊಬೈಲ್ ಪರದೆ ಮೇಲೆ ವಿಚಿತ್ರ ಬದಲಾವಣೆಗಳು ; ಅನೇಕ ಬಳಕೆದಾರರಿಗೆ ಗೊಂದಲ, ಸ್ಕ್ಯಾಮ್.?

22/08/2025 8:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ‘ನಿರ್ಮಲಾ ಸೀತಾರಾಮನ್’ಗೆ ಧನ್ಯವಾದ- ಡಿ.ಕೆ ಶಿವಕುಮಾರ್
KARNATAKA

ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ‘ನಿರ್ಮಲಾ ಸೀತಾರಾಮನ್’ಗೆ ಧನ್ಯವಾದ- ಡಿ.ಕೆ ಶಿವಕುಮಾರ್

By kannadanewsnow0907/04/2024 2:08 PM

ಬೆಂಗಳೂರು: “ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು.

ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ;

“ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು.

ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ.

ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು”

ಅಧಿಕಾರ ಇದ್ದಾಗ ಕುಮಾರಸ್ವಾಮಿ ಯಾಕೆ ಮಾಡಲಿಲ್ಲ?:

ಮೇಕೆದಾಟು ಯೋಜನೆ ವಿಚಾರವಾಗಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿ, “ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.

ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಅವರು ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ.

ನಾವು ಹೋರಾಟ ಮಾಡಿದ್ದು ರಾಜ್ಯದ ಜನತೆಗಾಗಿ. ರಾಜಕಾರಣದಲ್ಲಿ ಅದು ನಮ್ಮ ಬದ್ಧತೆ. ಅದನ್ನು ಅವರಿಂದ ಸಹಿಸಲು ಆಗಲಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ.

ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಎಂದು ಜನರಿಗೆ ನಂಬಿಕೆ ಇದೆ. ಅವರ ನಂಬಿಕೆಗೆ ತಕ್ಕಂತೆ ನಡೆಯುತ್ತೇನೆ. ಇದು ಮತದಾರರಿಗೆ ಮನವರಿಕೆಯಾಗಿದೆ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕೆ.ಎಚ್ ಮುನಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ಅದರ ಬಗ್ಗೆ ತಿಳಿದು ಮಾತನಾಡುತ್ತೇನೆ” ಎಂದು ತಿಳಿಸಿದರು.

‘UGC NET’ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

BREAKING : ಬೆಂಗಳೂರಲ್ಲಿ ‘ಹಿಟ್ ಅಂಡ್ ರನ್’ ಗೆ ವೃದ್ದೆ ಬಲಿ : ಕಾರು ಚಾಲಕ ಪರಾರಿ

ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್ ಗೆ ಧನ್ಯವಾದ- ಡಿ.ಕೆ ಶಿವಕುಮಾರ್ DK Shivakumar thanks Nirmala Sitharaman for acknowledging injustice done to the state
Share. Facebook Twitter LinkedIn WhatsApp Email

Related Posts

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

22/08/2025 8:49 PM2 Mins Read

recruitment of Agniveer : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 8:13 PM1 Min Read

ಬೀದಿ ನಾಯಿ ಪ್ರಕರಣ: ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನ 10 ಪ್ರಮುಖ ಅಂಶಗಳು ಇಲ್ಲಿವೆ

22/08/2025 8:02 PM2 Mins Read
Recent News

BREAKING ; ಆನ್ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ಅನುಮೋದನೆ ; 3 ವರ್ಷ ಜೈಲು, 1 ಕೋಟಿ ರೂ. ದಂಡ

22/08/2025 9:12 PM

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

22/08/2025 8:49 PM

ಮೊಬೈಲ್ ಪರದೆ ಮೇಲೆ ವಿಚಿತ್ರ ಬದಲಾವಣೆಗಳು ; ಅನೇಕ ಬಳಕೆದಾರರಿಗೆ ಗೊಂದಲ, ಸ್ಕ್ಯಾಮ್.?

22/08/2025 8:33 PM

ಇಸ್ರೋದ ‘ಭಾರತೀಯ ಅಂತರಿಕ್ಷ ಸ್ಟೇಷನ್ ಮಾಡ್ಯೂಲ್’ನ ಮೊದಲ ಚಿತ್ರ ಬಿಡುಗಡೆ!

22/08/2025 8:15 PM
State News
KARNATAKA

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

By kannadanewsnow0922/08/2025 8:49 PM KARNATAKA 2 Mins Read

ಮಂಡ್ಯ : ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಇಲಾಖಾ ನೌಕರರೂ ಮಾತೃ ಹೃದಯದಿಂದ…

recruitment of Agniveer : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 8:13 PM

ಬೀದಿ ನಾಯಿ ಪ್ರಕರಣ: ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನ 10 ಪ್ರಮುಖ ಅಂಶಗಳು ಇಲ್ಲಿವೆ

22/08/2025 8:02 PM

RCB ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ – CM ಸಿದ್ದರಾಮಯ್ಯ ಅವರ ಉತ್ತರ ಹೀಗಿದೆ

22/08/2025 7:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.