Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭೂ ವ್ಯವಹಾರ ಪ್ರಕರಣದಲ್ಲಿ ರಾಬರ್ಟ್ ವಾದ್ರಾ 58 ಕೋಟಿ ಅಪರಾಧದ ಆದಾಯವಾಗಿ ಪಡೆದಿದ್ದಾರೆ: ED

10/08/2025 7:31 PM

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 1.50 ಲಕ್ಷ ಕೋಟಿ ಅನುದಾನ ಕೋರಿ ಪ್ರಧಾನಿ ಮೋದಿಗೆ ಡಿಕೆಶಿ ಮನವಿ

10/08/2025 7:18 PM

BREAKING: ಮತಗಳ್ಳತನ ಆರೋಪ: ದಾಖಲೆ ಒದಗಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

10/08/2025 7:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಸಮಗ್ರ ಅಭಿವೃದ್ಧಿಗೆ 1.50 ಲಕ್ಷ ಕೋಟಿ ಅನುದಾನ ಕೋರಿ ಪ್ರಧಾನಿ ಮೋದಿಗೆ ಡಿಕೆಶಿ ಮನವಿ
KARNATAKA

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 1.50 ಲಕ್ಷ ಕೋಟಿ ಅನುದಾನ ಕೋರಿ ಪ್ರಧಾನಿ ಮೋದಿಗೆ ಡಿಕೆಶಿ ಮನವಿ

By kannadanewsnow0910/08/2025 7:18 PM

ಬೆಂಗಳೂರು: “ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳಾದ ಟನಲ್ ರಸ್ತೆ, ಆರ್ಟಿಲರಿ ರಸ್ತೆಗಳ ಬಳಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಪೆಪಿಫೆರಲ್ ವರ್ತುಲ ರಸ್ತೆ, ಘನತ್ಯಾಜ ವಿಲೇವಾರಿ ಸೇರಿದಂತೆ ಇತರೇ ಮೂಲಸೌಕರ್ಯಗಳ ಅಭಿವೃದ್ಧಿಗೆ ಅಂದಾಜು ರೂ. 1.50 ಲಕ್ಷ‌ ಕೋಟಿ ರೂ. ಹಣ ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರದಿಂದ ಸಮರ್ಪಕ ಅನುದಾನ ಒದಗಿಸಿಕೊಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಮೆಟ್ರೋ ರೈಲು ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ವೇದಿಕೆ ಮೇಲೆ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಈ ಮನವಿ ಸಲ್ಲಿಸಿದರು.

“ಕರ್ನಾಟಕವು ವರ್ಷಕ್ಕೆ ಸುಮಾರು ರೂ.4.50 ಲಕ್ಷ ಕೋಟಿ ರೂ. ತೆರಿಗೆ ಪಾವತಿಸುತ್ತಿದೆ. ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ ಎಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಈಗಾಗಲೇ ಕರ್ನಾಟಕ ಸರ್ಕಾರವು ಯಶಸ್ವಿಯಾಗಿ ಮೆಟ್ರೋ ಮಾರ್ಗ ಹಾಗೂ ಡಬಲ್ ಡೆಕ್ಕರ್ ಅನ್ನು ಅನುಷ್ಠಾನಗೊಳಿಸಿದೆ. ಐದನೇ ಹಂತದ‌ ಕಾವೇರಿ ಕುಡಿಯುವ ನೀರು ಯೋಜನೆ ಸಹ ಯಶಸ್ವಿಯಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಕುಡಿಯುವ ನೀರಿನ ಯೋಜನೆಗಳು, ರಾಜಕಾಲುವೆಗಳ ಪಕ್ಕದಲ್ಲಿ ನೂತನ ರಸ್ತೆಗಳ ನಿರ್ಮಾಣ, ರೀಜನಲ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್ ಈ‌ ಎಲ್ಲಾ ಯೋಜನೆಗಳಿಂದ ಬೆಂಗಳೂರು ಇನ್ನಷ್ಟು ಪ್ರಮುಖ ನಗರವಾಗಿ ಅಭಿವೃದ್ಧಿಯಾಗಲಿದೆ” ಎಂದು ಮನವಿಯಲ್ಲಿ ವಿವಾರಿಸಿದ್ದರೆ.

ಮನವಿಯಲ್ಲಿ ಉಲ್ಲೇಖಿಸಿರುವ ಪ್ರಮುಖ ಯೋಜನೆಗಳು ಹಾಗೂ ಅಂದಾಜು ಮೊತ್ತ

ಟನಲ್ ರಸ್ತೆ, ಎಲೆವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ರೂ. 41,780 ಕೋಟಿ, ನಗರದ ಪ್ರಮುಖ ರಸ್ತೆಗಳ ಬಳಿ ಎಲಿವೇಟೆಡ್ ಕಾರಿಡಾರ್ ಗಳ ನಿರ್ಮಾಣಕ್ಕೆ ರೂ. 15,000 ಕೋಟಿ, ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ರೂ. 27,000 ಕೋಟಿ, ಘನತ್ಯಾಜ್ಯ ವಿಲೇವಾರಿಗೆ ರೂ.3,200 ಕೋಟಿ, ಡಬಲ್ ಡೆಕ್ಕರ್ ಗಳ ನಿರ್ಮಾಣಕ್ಕೆ ರೂ. 8,916 ಕೋಟಿ ವೆಚ್ಚವಾಗಲಿದೆ. ಮೆಟ್ರೋ 1 ನೇ ಹಂತ ಸಂಪೂರ್ಣಗೊಂಡು, ಕಾರ್ಯ ನಿರ್ವಹಿಸುತ್ತಿದೆ. ಹಂತ 2, 2ಎ, 3, 3ಎ ಮೆಟ್ರೋ ರೈಲು ಯೋಜನೆಗಳ ಅನುಷ್ಠಾನದಿಂದ ರೈಲು ಮಾರ್ಗ ಒಟ್ಟು ಉದ್ದ 128 ಕಿ.ಮೀಗೆ ವಿಸ್ತಾರವಾಗಲಿದೆ. ಇದರಿಂದ ಸಂಚಾರ ದಟ್ಟಣೆ ತಪ್ಪಿಸಬಹುದು. ಈ ಯೋಜನೆಗಳಿಗೂ ಸೂಕ್ತ ಅನುದಾನ ನೀಡಿ ಎಂದು ಕೋರಲಾಗಿದೆ.

ರಾಜಕಾಲುವೆಗಳ ಪಕ್ಕ ಹೊಸ ರಸ್ತೆಗಳ ನಿರ್ಮಾಣಕ್ಕೆ ರೂ.3000 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ನಗರಕ್ಕೆ ಹೆಚ್ಚುವರಿ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ರೂ.6,939 ಕೋಟಿ ಅನುದಾನ ಬೇಕಾಗಬಹುದು ಎಂದು ಮನವಿಯಲ್ಲಿ ಡಿಸಿಎಂ ಅವರು ತಿಳಿಸಿದ್ದಾರೆ.

ನಮೋ ಭಾರತ್ ರೈಲು ನೀಡಿ

ಇದಲ್ಲದೆ ರಾಪಿಡ್ ರೈಲ್ ಟ್ರಾನ್ಸಿಟ್ ಸಿಸ್ಟಮ್ ಅನ್ನು ಬೆಂಗಳೂರಿನಲ್ಲಿ ಜಾರಿಗೆ ತರಬೇಕು ಎಂದೂ ಮನವಿ ಮಾಡಿದ್ದಾರೆ‌.

ಬೆಂಗಳೂರು-ಬಿಡದಿ- ಮೈಸೂರು, ಬೆಂಗಳೂರು- ಹಾರೋಹಳ್ಳಿ- ಕನಕಪುರ, ಬೆಂಗಳೂರು- ನೆಲಮಂಗಲ- ತುಮಕೂರು, ಬೆಂಗಳೂರು- ಏರ್ ಪೋರ್ಟ್- ಚಿಕ್ಕಬಳ್ಳಾಪುರ, ಬೆಂಗಳೂರು- ಹೊಸಕೋಟೆ- ಕೋಲಾರಕ್ಕೆ ಆರ್ ಆರ್ ಟಿಎಸ್ ಯೋಜನೆಯಡಿ “ನಮೋ ಭಾರತ್ ರೈಲು ಯೋಜನೆ” ಅನುಷ್ಠಾನಗೊಳಿಸಬೇಕಾಗಿ ಮನವಿಯಲ್ಲಿ ತಿಳಿಸಲಾಗಿದೆ.

ಬೆಂಗಳೂರು ನಗರದ ಒಳಗೆ 77.6 ಕಿಲೋಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ನಗರ ಬೆಳೆದ ಪರಿಣಾಮವಾಗಿ ಈ ಹೆದ್ದಾರಿಗಳ ಮೂಲಕ ಸುಲಭ ಸಂಚಾರ ದುಸ್ತರವಾಗಿದೆ. ಆರ್ಥಿಕ ಬೆಳವಣಿಗೆಗೂ ಸಹ ಹೊಡೆತ ಬೀಳುತ್ತಿದೆ. ಈ ಕಾರಣಕ್ಕೆ ಹೊಸೂರು ರಸ್ತೆಯಿಂದ ಬಳ್ಳಾರಿ ರಸ್ತೆವರೆಗೆ, ಎರಡನೆಯದು ಕೆ.ಆರ್.ಪುರಂನಿಂದ ಮೈಸೂರು ರಸ್ತೆವರೆಗೆ ಹಾಗೂ ಎಲೆವೇಟೆಡ್ ಕಾರಿಡಾರ್ ಅನ್ನು ಕನಕಪುರ ರಸ್ತೆಯ ಬಳಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಪಿಪಿಪಿ ಮಾದರಿಯಡಿ ಬೆಂಗಳೂರು ಬಿಜಿನೆಸ್ ಕಾರಿಡಾರ್ ನಿರ್ಮಾಣ ಮಾಡಿದರೆ ನಗರದ ಒಳಗೆ ಸಂಚಾರ ದಟ್ಟಣೆ ತಪ್ಪಿಸಬಹುದು ಎಂದು ಹೇಳಿದ್ದಾರೆ.

ನಗರದಲ್ಲಿ ದಿನವೊಂದಕ್ಕೆ 6,500 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು ಇದರ ವೈಜ್ಞಾನಿಕ ವಿಲೇವಾರಿಗೆ ಸಿಎನ್ ಜಿ ತಯಾರಿಕೆ ಘಟಕ, ಗೊಬ್ಬರ ಘಟಕ,‌ ವೇಸ್ಟ್ ಎನರ್ಜಿ ಘಟಕಗಳ ಸ್ಥಾಪನೆಗೆ ಬೆಂಬಲ ಕೋರಿ ಪತ್ರದಲ್ಲಿ ವಿವರಿಸಲಾಗಿದೆ. ಜೊತೆಗೆ ಮೆಟ್ರೋ ಮಾರ್ಗದ ಜೊತೆಗೆ ಡಬಲ್ ಡೆಕ್ಕರ್ ಯೋಜನೆ ಕೈಗೆತ್ತಿಕೊಂಡರೆ ಪರ್ಯಾಯ ರಸ್ತೆ ಮಾರ್ಗಗಳ ಸಮಸ್ಯೆ, ಭೂಸ್ವಾಧೀನ ಸಮಸ್ಯೆ, ಹೆಚ್ಚುವರಿ ಪರಿಹಾರ ಸಮಸ್ಯೆ ನಿವಾರಣೆಯಾಗಲಿದೆ. ಜೆ.ಪಿ.ನಗರದಿಂದ ಹೆಬ್ಬಾಳದ ವರೆಗೆ ಹಾಗೂ ಹೊಸಹಳ್ಳಿಯಿಂದ ಕಡಬಗೆರೆಯ ಮಾರ್ಗಗಳಲ್ಲಿ ಸುಮಾರು 40.65 ಕಿಮೀ ಉದ್ದ ಡಬಲ್ ಡೆಕ್ಕರ್ ನಿರ್ಮಾಣ ಮಾಡಬಹುದು ಎಂದು ತಿಳಿಸಲಾಗಿದೆ.

ರಾಜಕಾಲುವೆಗಳ ಒತ್ತುವರಿ ತಡೆಯಲು ಅವುಗಳ ಪಲ್ಕದಲ್ಲಿಯೇ ರಸ್ತೆ ನಿರ್ಮಾಣ‌ ಮಾಡುವ ಆಲೋಚನೆ ಬಗ್ಗೆ ಹಾಗೂ ಹೆಚ್ಚುತ್ತಿರುವ ನಗರದ ಜನಸಂಖ್ಯೆಗೆ ಅನುಗುಣವಾಗಿ ಆರನೇ ಹಂತದ ಕುಡಿಯುವ ನೀರಿನ ಯೋಜನೆ ಮೂಲಕ ದಿನಕ್ಕೆ 500 ಎಂಎಲ್ ಡಿ ನೀರನ್ನು ಪೂರೈಕೆ ಮಾಡುವ ಬಗ್ಗೆ ಮನವಿ ಪತ್ರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉಲ್ಲೇಖಿಸಿದ್ದಾರೆ.

ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

BREAKING: ಮತಗಳ್ಳತನ ಆರೋಪ: ಸಂಸದ ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್

Share. Facebook Twitter LinkedIn WhatsApp Email

Related Posts

BREAKING: ಮತಗಳ್ಳತನ ಆರೋಪ: ದಾಖಲೆ ಒದಗಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

10/08/2025 7:05 PM1 Min Read

ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

10/08/2025 6:54 PM1 Min Read

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ

10/08/2025 6:31 PM1 Min Read
Recent News

ಭೂ ವ್ಯವಹಾರ ಪ್ರಕರಣದಲ್ಲಿ ರಾಬರ್ಟ್ ವಾದ್ರಾ 58 ಕೋಟಿ ಅಪರಾಧದ ಆದಾಯವಾಗಿ ಪಡೆದಿದ್ದಾರೆ: ED

10/08/2025 7:31 PM

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 1.50 ಲಕ್ಷ ಕೋಟಿ ಅನುದಾನ ಕೋರಿ ಪ್ರಧಾನಿ ಮೋದಿಗೆ ಡಿಕೆಶಿ ಮನವಿ

10/08/2025 7:18 PM

BREAKING: ಮತಗಳ್ಳತನ ಆರೋಪ: ದಾಖಲೆ ಒದಗಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

10/08/2025 7:05 PM

ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

10/08/2025 6:54 PM
State News
KARNATAKA

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 1.50 ಲಕ್ಷ ಕೋಟಿ ಅನುದಾನ ಕೋರಿ ಪ್ರಧಾನಿ ಮೋದಿಗೆ ಡಿಕೆಶಿ ಮನವಿ

By kannadanewsnow0910/08/2025 7:18 PM KARNATAKA 3 Mins Read

ಬೆಂಗಳೂರು: “ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳಾದ ಟನಲ್ ರಸ್ತೆ, ಆರ್ಟಿಲರಿ ರಸ್ತೆಗಳ ಬಳಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಪೆಪಿಫೆರಲ್…

BREAKING: ಮತಗಳ್ಳತನ ಆರೋಪ: ದಾಖಲೆ ಒದಗಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

10/08/2025 7:05 PM

ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

10/08/2025 6:54 PM

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಕಾಂಗ್ರೆಸ್ ವಕ್ತಾರ ಅನಿಲ್ ಕುಮಾರ್.ಟಿ ವಾಗ್ಧಾಳಿ

10/08/2025 6:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.