Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಊಟ ಮಾಡುತ್ತಿರುವಾಗಲೇ ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ : 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟ ಶಂಕೆ!

12/06/2025 3:49 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: RCB, DNA ಪದಾಧಿಕಾರಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು

12/06/2025 3:45 PM

BREAKING : ವಿಮಾನ ಪತನಕ್ಕೂ ಮುನ್ನ ‘ATC’ ಗೆ ‘MAYDAY’ ಕರೆ ಮಾಡಿದ್ದ ಪೈಲಟ್ ಸುಮಿತ್ ಸಭರ್ವಾಲ್!

12/06/2025 3:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂವಿಧಾನ ಬದಲಿಸುವ ಕುರಿತ ಡಿಕೆಶಿ ಹೇಳಿಕೆಯು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಬಿವೈ ವಿಜಯೇಂದ್ರ ಕಿಡಿ
KARNATAKA

ಸಂವಿಧಾನ ಬದಲಿಸುವ ಕುರಿತ ಡಿಕೆಶಿ ಹೇಳಿಕೆಯು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಬಿವೈ ವಿಜಯೇಂದ್ರ ಕಿಡಿ

By kannadanewsnow0924/03/2025 4:21 PM

ಕಲ್ಬುರ್ಗಿ: ಸಂವಿಧಾನ ಬದಲಿಸುವ ಕುರಿತ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಜೀ ಅವರು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು.

ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ. ರಾಜ್ಯದ- ದೇಶದ ಶೋಷಿತ, ಪೀಡಿತ ಸಮುದಾಯಗಳನ್ನು ಮತಬ್ಯಾಂಕಾಗಿ ಮಾಡಿಕೊಂಡು ಅವರನ್ನು ದುರುಪಯೋಗ ಪಡಿಸಿಕೊಂಡಿತ್ತು. ಇದು ಪದೇಪದೇ ಗೊತ್ತಾಗುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕೇವಲ ಅವರ ವೈಯಕ್ತಿಕವಲ್ಲ; ರಾಹುಲ್ ಗಾಂಧಿಯವರ, ಈ ರಾಜ್ಯದ ಮುಖ್ಯಮಂತ್ರಿಗಳ ಮನಸ್ಥಿತಿಯನ್ನೇ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ ಎಂದು ವಿಶ್ಲೇಷಿಸಿದರು. ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಗೌರವ ಕೊಡುವ ಪಕ್ಷ ಬಿಜೆಪಿ. ಡಾ. ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಗೌರವ ಕೊಡುವವರು ಮಹಾನ್ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಎಂದು ತಿಳಿಸಿದರು.

ಚಟಕ್ಕೆ, ಮುಸ್ಲಿಮರ ಓಲೈಕೆಗೆ ಸಂವಿಧಾನ ಬದಲಿಸಲು ಅವಕಾಶ ಕೊಡುವುದಿಲ್ಲ..

ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಕಾಂಗ್ರೆಸ್ಸಿನವರ ಚಟಕ್ಕಾಗಿ ಹಾಗೂ ಮುಸ್ಲಿಮರ ಓಲೈಕೆಗೆ ಸಂವಿಧಾನವನ್ನು ಬದಲಿಸುವ ಹೇಳಿಕೆ ನೀಡಿದ್ದು, ಇದು ಅಸಾಧ್ಯ. ನರೇಂದ್ರ ಮೋದಿಯವರು ಇವತ್ತು ಪ್ರಧಾನಿ ಆಗಿದ್ದಾರೆ. ಡಾ. ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಗರಿಷ್ಠ ಗೌರವ ಕೊಡುವ ಹೆಮ್ಮೆಯ ಪ್ರಧಾನಮಂತ್ರಿ ಮೋದಿಜೀ ಇದ್ದಾಗ, ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ಇದಕ್ಕೆ ನಾವು ಖಂಡಿತವಾಗಿ ಅವಕಾಶ ಕೊಡುವುದಿಲ್ಲ ಎಂದು ವಿಜಯೇಂದ್ರ ಅವರು ಎಚ್ಚರಿಕೆ ನೀಡಿದರು.

ಯಾರು ಹುಚ್ಚರು ಎಂಬುದನ್ನು ಜನರೇ ಮಾತನಾಡುತ್ತಿದ್ದಾರೆ. ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯಬಹುದು ಎಂಬುದನ್ನು ಕಾಂಗ್ರೆಸ್ಸಿನವರು ತೋರಿಸಿಕೊಡುತ್ತಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದವರು…

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯನವರು, ಡಿ.ಕೆ.ಶಿವಕುಮಾರ್ ಸೇರಿದಂತೆ ರಾಹುಲ್ ಗಾಂಧಿಯವರು ಸಹ ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಅಪಪ್ರಚಾರ ಮಾಡಿದ್ದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು, ಮೋದಿಯವರು ಪ್ರಧಾನಿ ಆಗಬಾರದೆಂದು ಹೀಗೆ ಮಾಡಿದ್ದರು. ಸ್ವಾತಂತ್ರ್ಯ ಬಂದ ಬಳಿಕ ಸಂವಿಧಾನಕ್ಕೆ ಅತಿ ಹೆಚ್ಚು ತಿದ್ದುಪಡಿ ತಂದ ಅಪಕೀರ್ತಿ ಈ ದೇಶವನ್ನು ಆಳಿದ ಕಾಂಗ್ರೆಸ್ಸಿಗೆ ಸಲ್ಲುತ್ತದೆ ಎಂದು ನಾವು ಹೇಳಿದ್ದೆವು.

ಈಗ ಮತ್ತೊಮ್ಮೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯಿಂದ ಇವರ ಬಂಡವಾಳ ಬಯಲಾಗಿದೆ. ಕಾಂಗ್ರೆಸ್ ಪಕ್ಷದ ಬಂಡವಾಳ ಬಯಲಾಗಿದೆ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸಂವಿಧಾನವನ್ನೂ ಕೂಡ ಬದಲಿಸುವುದಾಗಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಇವರ ಮನಸ್ಥಿತಿ ಏನು? ಡಾ. ಅಂಬೇಡ್ಕರರ ಕುರಿತು ಇವರು ಎಷ್ಟು ಗೌರವ ಇಟ್ಟುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ ಎಂದು ವಿಶ್ಲೇಷಿಸಿದರು.

ಧರ್ಮಾಧಾರಿತ ಮೀಸಲಾತಿಯನ್ನು ನೀಡಬಾರದು ಎಂದು ಡಾ. ಅಂಬೇಡ್ಕರರು ಸ್ಪಷ್ಟವಾಗಿ ಹೇಳಿದ್ದಾರೆ ಮತ್ತು ಅದು ಸಂವಿಧಾನದಲ್ಲಿ ಉಲ್ಲೇಖ ಆಗಿದೆ. ಇಷ್ಟಿದ್ದರೂ ಡಿ.ಕೆ.ಶಿವಕುಮಾರ್- ಸಿದ್ದರಾಮಯ್ಯನವರು ಮುಸಲ್ಮಾನರನ್ನು ಸಂತೃಪ್ತಿ ಪಡಿಸಲು ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನ ವಿರೋಧಿ ಎಂದು ಖಂಡಿಸಿದರು.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಕಾಲ್ತುಳಿತ ದುರಂತ: RCB, DNA ಪದಾಧಿಕಾರಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು

12/06/2025 3:45 PM1 Min Read

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಇಂದು ಒಂದೇ ದಿಂದ ‘ಹಾರ್ಟ್ ಅಟ್ಯಾಕ್’ ಗೆ ಮೂವರು ಬಲಿ!

12/06/2025 3:32 PM1 Min Read

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು

12/06/2025 1:52 PM1 Min Read
Recent News

BREAKING : ಊಟ ಮಾಡುತ್ತಿರುವಾಗಲೇ ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ : 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟ ಶಂಕೆ!

12/06/2025 3:49 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: RCB, DNA ಪದಾಧಿಕಾರಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು

12/06/2025 3:45 PM

BREAKING : ವಿಮಾನ ಪತನಕ್ಕೂ ಮುನ್ನ ‘ATC’ ಗೆ ‘MAYDAY’ ಕರೆ ಮಾಡಿದ್ದ ಪೈಲಟ್ ಸುಮಿತ್ ಸಭರ್ವಾಲ್!

12/06/2025 3:42 PM

ಏರ್ ಇಂಡಿಯಾ ವಿಮಾನ ದುರಂತ ; ಟೇಕ್-ಆಫ್ ಆದ ತಕ್ಷಣ ಪೈಲೆಟ್’ನಿಂದ ‘MAYDAY’ ಕರೆ, ಅಪಘಾತಕ್ಕೂ ಮೊದ್ಲು ಏನಾಯ್ತು.?

12/06/2025 3:40 PM
State News
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ: RCB, DNA ಪದಾಧಿಕಾರಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು

By kannadanewsnow0912/06/2025 3:45 PM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ…

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಇಂದು ಒಂದೇ ದಿಂದ ‘ಹಾರ್ಟ್ ಅಟ್ಯಾಕ್’ ಗೆ ಮೂವರು ಬಲಿ!

12/06/2025 3:32 PM

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು

12/06/2025 1:52 PM

SHOCKING : ಹಾಸನದಲ್ಲಿ ಘೋರ ದುರಂತ : ಒಂದೇ ದಿನ ಇಬ್ಬರು ‘ಹೃದಯಾಘಾತಕ್ಕೆ’ ಬಲಿ!

12/06/2025 1:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.