ನವದೆಹಲಿ: ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಟೀಕಿಸಿದ್ದು, ಚುನಾವಣೆಯಲ್ಲಿ ಸೋತ ನಂತರ ಅಭ್ಯರ್ಥಿಗಳು ನ್ಯಾಯಾಲಯಗಳಿಗೆ ಧಾವಿಸಬಾರದು ಎಂದು ಅಭಿಪ್ರಾಯಪಟ್ಟಿದೆ
ಮತದಾರರಿಂದ ತಿರಸ್ಕರಿಸಲ್ಪಟ್ಟವರು ಜನಪ್ರಿಯತೆಯನ್ನು ಮರಳಿ ಪಡೆಯಲು ನ್ಯಾಯಾಂಗವನ್ನು ಸಾಧನವಾಗಿ ಬಳಸಬಾರದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. 2025 ರ ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಿಶೋರ್ ಅವರ ಮನವಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ತೀಕ್ಷ್ಣ ಅಭಿಪ್ರಾಯಗಳನ್ನು ನೀಡಿದೆ.
ಮತದಾನಕ್ಕೆ ಸ್ವಲ್ಪ ಮುಂಚಿತವಾಗಿ ಮಹಿಳಾ ಉದ್ಯೋಗ ಯೋಜನೆ ಪಾವತಿಯನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಪ್ರಶಾಂತ್ ಕಿಶೋರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಚುನಾವಣಾ ಆಯೋಗ ಅವರ ಮನವಿಯನ್ನು ಸ್ವೀಕರಿಸಲು ನಿರಾಕರಿಸಿದ್ದು, ಪ್ರಶಾಂತ್ ಕಿಶೋರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಾಲಯ ಏನು ಹೇಳಿದೆ?
ವಿಚಾರಣೆಯ ವೇಳೆ ಪ್ರಶಾಂತ್ ಕಿಶೋರ್ ಪ್ರಜಾಸತ್ತಾತ್ಮಕ ಜನಾದೇಶವನ್ನು ಗೌರವಿಸಬೇಕು ಎಂದು ನ್ಯಾಯಪೀಠ ದೃಢವಾಗಿ ಹೇಳಿತು. “ಜನರು ನಿಮ್ಮನ್ನು ತಿರಸ್ಕರಿಸಿದಾಗ, ನೀವು ಜನಪ್ರಿಯತೆಗಾಗಿ ನ್ಯಾಯಾಲಯವನ್ನು ಬಳಸಬಾರದು” ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಂಗವನ್ನು ಈಗಾಗಲೇ ಮತಪತ್ರದ ಮೂಲಕ ಇತ್ಯರ್ಥಪಡಿಸಿದ ರಾಜಕೀಯ ಹೋರಾಟಗಳಿಗೆ ವೇದಿಕೆಯಾಗಿ ಪರಿವರ್ತಿಸಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು








