Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿತ್ತು, ಈಗ ಯೂಟರ್ನ್: ಡಿಕೆಶಿ ಕಿಡಿ

09/06/2025 2:48 PM

ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

09/06/2025 2:34 PM

BREAKING: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

09/06/2025 2:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕರ್ನಾಟಕದಲ್ಲಿ ಕಳೆದ 5 ವರ್ಷಗಳಲ್ಲಿ ತಾಯಿ ಮರಣ ಪ್ರಕರಣಗಳು ಎಷ್ಟು ಗೊತ್ತಾ.? ಇಲ್ಲಿದೆ ಅಂಕಿ ಅಂಶ
KARNATAKA

BIG NEWS: ಕರ್ನಾಟಕದಲ್ಲಿ ಕಳೆದ 5 ವರ್ಷಗಳಲ್ಲಿ ತಾಯಿ ಮರಣ ಪ್ರಕರಣಗಳು ಎಷ್ಟು ಗೊತ್ತಾ.? ಇಲ್ಲಿದೆ ಅಂಕಿ ಅಂಶ

By kannadanewsnow0917/12/2024 3:45 PM

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಾಣಂತಿಯರ ಸಾವಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಅಫಜಲಪುರದಲ್ಲಿ 22 ವರ್ಷದ ಭಾಗ್ಯಶ್ರೀ ಎನ್ನುವವರು ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಸಾವನ್ನಪ್ಪಿದ್ದಾರೆ. ಹಾಗಾದ್ರೆ ಕಳೆದ 5 ವರ್ಷಗಳಲ್ಲಿ ಕರ್ನಾಟಕದಲ್ಲಿ ತಾಯಿ ಮರಣ ಪ್ರಕರಣಗಳು ಎಷ್ಟು ಅಂತ ಮುಂದೆ ಓದಿ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ನವೆಂಬರ್.11, 2024ರಂದು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ತಾಯಂದಿರ ಸಾವು ವರದಿಯಾಗಿದೆ. ನವೆಂಬರ್.9, 10 ಮತ್ತು 11ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ನಡೆದ ಶಸ್ತ್ರ ಚಿಕಿತ್ಸೆ ನಂತ್ರ ಈ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಈ ಮೂರು ದಿನಗಳಲ್ಲಿ ನಡೆಸಿದ 34 ಸಿಸೇರಿಯನ್ ನಲ್ಲಿ 7 ಪ್ರಕರಣಗಳು ತೊಂದರೆಗೆ ಈಡಾಗಿರುತ್ತದೆ. ಮೂತ್ರಪಿಂಡದ ತೊಂದರೆಯಿಂದ ಮತ್ತು ಬಹು ಅಂಗಗಳ ವೈಫಲ್ಯತೆ ಕಾರಣದಿಂದ 7 ಪ್ರಕರಣಗಳಲ್ಲಿ ಐವರು ಬಾಣಂತಿಯರು ಸಾವಿಗೀಡಾಗಿದ್ದು, ಉಳಿದ 2 ಬಾಣಂತಿಯರು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ ಎಂದಿದ್ದಾರೆ.

ಈ ಪ್ರಕರಣಗಳ ಬಳಿಕ ಎಚ್ಚೆತ್ತುಕೊಳ್ಳಲಾಗಿದೆ. ಬಾಣಂತಿಯರ ಸಾವಿನ ನಿಯಂತ್ರಣದ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಬಾಣಂತಿಯರ ಸಾವಿನ ತಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಹೀಗಿದೆ ಕರ್ನಾಟಕದಲ್ಲಿ ಕಳೆದ 5 ವರ್ಷಗಳ ತಾಯಿ ಮರಣ ಹಾಗೂ ಪ್ರಮಾಣಗಳು

  • 2019-20ರಲ್ಲಿ 662 ತಾಯಿ ಮರಣ ಪ್ರಕರಣಗಳು ದಾಖಲಾಗಿದ್ದರೇ, ತಾಯಿ ಮರಣ ಪ್ರಮಾಣ 74 ಆಗಿರುತ್ತದೆ.
  • 2020-21ನೇ ಸಾಲಿನಲ್ಲಿ 714 ಬಾಣಂತಿಯರು ಸಾವನ್ನಪ್ಪಿದ್ದರೇ, ಒಟ್ಟಾರೆ ಶೇಕಡವಾರು ಪ್ರಮಾಣ 84%.
  • 2021-22ರಲ್ಲಿ 594 ತಾಯಿ ಮರಣ ಪ್ರಕರಣಗಳು ನಡೆದಿವೆ. ಇದರ ಪ್ರಮಾಣ ಶೇ.68.
  • 2022-23ರಲ್ಲಿ 527 ಬಾಣಂತಿಯರು ಸಾವನ್ನಪ್ಪಿದ್ದಾರೆ. ಶೇ.65 ಪ್ರಮಾಣವಾಗಿದೆ.
  • 2023-24ರಲ್ಲಿ 518 ತಾಯಿ ಮರಣ ಪ್ರಕರಣಗಳಾಗಿವೆ. ಇದರ ಶೇಕಡವಾರು ಪ್ರಮಾಣ 64%.
  • 2024-25ರ ನವೆಂಬರ್ ವರೆಗೆ 348 ಬಾಣಂತಿಯರು ಸಾವನ್ನಪ್ಪಿದ್ದಾರೆ. ಶೇಕಡವಾರು ಪ್ರಮಾಣ  64% ಆಗಿರುತ್ತದೆ.

ತಾಯಿ ಶಿಶು ಮರಣ ಪ್ರಮಾಣವನ್ನು ತಗ್ಗಿಲಸು ಇಲಾಖೆ ನಿರಂತರ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನಲೆಯಲ್ಲಿ ತಾಯಿ ಶಿಶು ಮರಣ ಪ್ರಮಾಣ ಇಳಾಖೆಯಾಗುತ್ತಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಒಟ್ಟಾರೆ ವರ್ಷದಿಂದ ವರ್ಷಕ್ಕೆ ಬಾಣಂತಿಯರ ಸಾವಿನ ಪ್ರಮಾಣ ಇಳಿಕೆಯಾಗಿದೆಯೇ ವಿನಹ ಏರಿಕೆಯಾಗಿಲ್ಲ. 2019-20ರಲ್ಲಿ ಶೇ.74ರಷ್ಟು ಇದ್ದಂತ ಪ್ರಮಾಣ, 2024-25ರ ವೇಳೆಗೆ ಶೇ.64ಕ್ಕೆ ಬಂದು ತಲುಪಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

GOOD NEWS: 2025ರಿಂದ ‘NCERT ಪಠ್ಯಪುಸ್ತಕ’ಗಳ ಬೆಲೆ ಇಳಿಕೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NCERT textbooks

BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi

Share. Facebook Twitter LinkedIn WhatsApp Email

Related Posts

RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿತ್ತು, ಈಗ ಯೂಟರ್ನ್: ಡಿಕೆಶಿ ಕಿಡಿ

09/06/2025 2:48 PM2 Mins Read

ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

09/06/2025 2:34 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

09/06/2025 2:28 PM1 Min Read
Recent News

RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿತ್ತು, ಈಗ ಯೂಟರ್ನ್: ಡಿಕೆಶಿ ಕಿಡಿ

09/06/2025 2:48 PM

ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

09/06/2025 2:34 PM

BREAKING: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

09/06/2025 2:28 PM

Watch Video: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ | Kerala coast

09/06/2025 2:23 PM
State News
KARNATAKA

RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿತ್ತು, ಈಗ ಯೂಟರ್ನ್: ಡಿಕೆಶಿ ಕಿಡಿ

By kannadanewsnow0909/06/2025 2:48 PM KARNATAKA 2 Mins Read

ಬೆಂಗಳೂರು: “ಆರ್ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ (ಟ್ವೀಟ್) ಮಾಡಿದ್ದರು.…

ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

09/06/2025 2:34 PM

BREAKING: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

09/06/2025 2:28 PM
vidhana soudha

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

09/06/2025 1:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.