Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೂತ್ರಪಿಂಡಗಳಿಗೆ ಹಾನಿ ಮಾಡುವ 7 ದೈನಂದಿನ ಅಭ್ಯಾಸಗಳಿವು | Kidney damage

07/10/2025 1:59 PM

ಕುರುಬ ಸಮುದಾಯವನ್ನು ‘ST’ಗೆ ಸೇರ್ಪಡೆ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?

07/10/2025 1:54 PM

ನಿಮ್ಮ ‘ಫ್ಯಾಟಿ ಲಿವರ್ ಸಮಸ್ಯೆ’ಯಿಂದ ದೂರಾಗಲು ‘ಹಾರ್ವರ್ಡ್ ಯಕೃತ್ ತಜ್ಞ’ರ ಈ ಸಲಹೆ ಪಾಲಿಸಿ | fatty liver

07/10/2025 1:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುರುಬ ಸಮುದಾಯವನ್ನು ‘ST’ಗೆ ಸೇರ್ಪಡೆ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?
KARNATAKA

ಕುರುಬ ಸಮುದಾಯವನ್ನು ‘ST’ಗೆ ಸೇರ್ಪಡೆ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?

By kannadanewsnow0907/10/2025 1:54 PM

ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು. ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ST ಗೆ ಸೇರಿಸಿದರು. ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.

ಈಗ ಕುರುಬರನ್ನು ST ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸ್ಪಷ್ಟಪಡಿಸಿದರು.

ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸ್ಪಷ್ಟಪಡಿಸಿದರು.

ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ST ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಹೋಗಿದೆ. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದರು.‌

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು.‌ ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ನಿಮ್ಮ ‘ಫ್ಯಾಟಿ ಲಿವರ್ ಸಮಸ್ಯೆ’ಯಿಂದ ದೂರಾಗಲು ‘ಹಾರ್ವರ್ಡ್ ಯಕೃತ್ ತಜ್ಞ’ರ ಈ ಸಲಹೆ ಪಾಲಿಸಿ | fatty liver

Share. Facebook Twitter LinkedIn WhatsApp Email

Related Posts

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ

07/10/2025 1:27 PM1 Min Read

ಬುರುಡೆ ಗ್ಯಾಂಗ್ ಜೊತೆ ಸೇರಿಕೊಂಡು ತಪ್ಪು ಮಾಡಿದೆ : ಧರ್ಮಸ್ಥಳಕ್ಕೆ ಹೋಗಿ ಕ್ಷಮೆಯಾಚಿಸುತ್ತೇನೆ ಎಂದ ಸುಜಾತಾ ಭಟ್

07/10/2025 1:20 PM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ ಈ 8 `ಕಾರ್ಡ್’ಗಳಿದ್ರೆ ಉಚಿತ ಚಿಕಿತ್ಸೆಯಿಂದ ಶಿಕ್ಷಣದವರೆಗೆ ಸಿಗಲಿವೆ ಹಲವು ಸೌಲಭ್ಯಗಳು.!

07/10/2025 1:16 PM3 Mins Read
Recent News

ಮೂತ್ರಪಿಂಡಗಳಿಗೆ ಹಾನಿ ಮಾಡುವ 7 ದೈನಂದಿನ ಅಭ್ಯಾಸಗಳಿವು | Kidney damage

07/10/2025 1:59 PM

ಕುರುಬ ಸಮುದಾಯವನ್ನು ‘ST’ಗೆ ಸೇರ್ಪಡೆ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?

07/10/2025 1:54 PM

ನಿಮ್ಮ ‘ಫ್ಯಾಟಿ ಲಿವರ್ ಸಮಸ್ಯೆ’ಯಿಂದ ದೂರಾಗಲು ‘ಹಾರ್ವರ್ಡ್ ಯಕೃತ್ ತಜ್ಞ’ರ ಈ ಸಲಹೆ ಪಾಲಿಸಿ | fatty liver

07/10/2025 1:51 PM

ಒಮ್ಮೆಗೆ 1638 ಕ್ರೆಡಿಟ್ ಕಾರ್ಡ್ ಗಳನ್ನು ಬಳಸಿ `ಗಿನ್ನೆಸ್ ವಿಶ್ವ ದಾಖಲೆ’ ಬರೆದ ವ್ಯಕ್ತಿ.!

07/10/2025 1:46 PM
State News
KARNATAKA

ಕುರುಬ ಸಮುದಾಯವನ್ನು ‘ST’ಗೆ ಸೇರ್ಪಡೆ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?

By kannadanewsnow0907/10/2025 1:54 PM KARNATAKA 2 Mins Read

ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು…

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ ಸಿದ್ದರಾಮಯ್ಯ

07/10/2025 1:27 PM

ಬುರುಡೆ ಗ್ಯಾಂಗ್ ಜೊತೆ ಸೇರಿಕೊಂಡು ತಪ್ಪು ಮಾಡಿದೆ : ಧರ್ಮಸ್ಥಳಕ್ಕೆ ಹೋಗಿ ಕ್ಷಮೆಯಾಚಿಸುತ್ತೇನೆ ಎಂದ ಸುಜಾತಾ ಭಟ್

07/10/2025 1:20 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ ಈ 8 `ಕಾರ್ಡ್’ಗಳಿದ್ರೆ ಉಚಿತ ಚಿಕಿತ್ಸೆಯಿಂದ ಶಿಕ್ಷಣದವರೆಗೆ ಸಿಗಲಿವೆ ಹಲವು ಸೌಲಭ್ಯಗಳು.!

07/10/2025 1:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.