Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಭಾರತದ ಆರ್ಥಿಕತೆಗೆ ಭರ್ಜರಿ ವೇಗ: 2026ನೇ ಆರ್ಥಿಕ ವರ್ಷದಲ್ಲಿ ಶೇ. 7.7ರಷ್ಟು ಜಿಡಿಪಿ ದಾಖಲು!

ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

​ಸಿಂಧೂ ನದಿ ನೀರು ಒಪ್ಪಂದ: ಪಾಕಿಸ್ತಾನದ ಉಗ್ರ ಕೃತ್ಯಗಳ ವಿರುದ್ಧ ಭಾರತದ ಕಠಿಣ ನಿಲುವು, ಒಪ್ಪಂದ ಅಮಾನತು ಮುಂದುವರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?
KARNATAKA

ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನೂತನ ಖಾತೆಗಳ ಹಂಚಿಕೆಯಾಗುತ್ತಿದ್ದಂತೆಯೇ ಕೆಲವೆಡೆ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಹಿರಿಯ ನಾಯಕ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ತಾವೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂಬುದನ್ನು ಪುನರುಚ್ಚರಿಸಿದ್ದಾರೆ. ಅಲ್ಲದೇ ಸಚಿವ ಸ್ಥಾನಕ್ಕೆ ರಾಜೀನಾಮೆ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರಬುದ್ಧವಾಗಿ ಉತ್ತರಿಸಿದ ಅವರು, ಪಕ್ಷದ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದರು.

ನನಗೆ ಕಾಂಗ್ರೆಸ್ ಎಲ್ಲವನ್ನೂ ಕೊಟ್ಟಿದೆ

ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ತಮಗೆ ಯಾವುದೇ ಅಸಮಾಧಾನವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಸಚಿವ ಜಾರ್ಜ್, “ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ, ನಾನು ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ನನಗೆ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ ಮತ್ತು ಗೌರವಿಸಿದೆ. ಈಗಲೂ ಸಹ ಪಕ್ಷ ನನಗೆ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ” ಎಂದು ಹೇಳಿದರು.

ಹೈಕಮಾಂಡ್ ಹಾಗೂ ಸಿಎಂ-ಡಿಸಿಎಂಗೆ ಧನ್ಯವಾದ

ತಮಗೆ ನಿಯೋಜಿಸಲಾದ ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸಿರುವ ಅವರು ಪಕ್ಷದ ಎಲ್ಲಾ ವರಿಷ್ಠರಿಗೂ ಧನ್ಯವಾದ ಅರ್ಪಿಸಿದರು. “ನನಗೆ ಈ ಜವಾಬ್ದಾರಿ ನೀಡಿರುವುದಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಎಲ್ಲಾ ಮುಖಂಡರಿಗೂ ನಾನು ಧನ್ಯವಾದಗಳನ್ನು ಹೇಳುತ್ತೇ‌ನೆ” ಎಂದರು.

ಅತೃಪ್ತಿಯ ಪ್ರಶ್ನೆಯೇ ಇಲ್ಲ, ರಾಜೀನಾಮೆ ಮಾತು ಇಲ್ಲ

ಮುಂದುವರಿದು ಮಾತನಾಡಿದ ಅವರು, “ನಾನು ಯಾವುದೇ ರೀತಿಯ ಅಸಮಾಧಾನ ಅಥವಾ ಅತೃಪ್ತಿಯಲ್ಲಿ ಇಲ್ಲ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನನ್ನ ಮೇಲೆ ನಂಬಿಕೆ ಇಟ್ಟು ದೊಡ್ಡ ಜವಾಬ್ದಾರಿಯನ್ನು ನೀಡುತ್ತಾ ಬಂದಿದೆ. ಪಕ್ಷದ ತೀರ್ಮಾನಕ್ಕೆ ನಾನು ಯಾವಾಗಲೂ ಬದ್ಧನಾಗಿದ್ದು, ಸದಾ ಸಕ್ರಿಯವಾಗಿ ಕೆಲಸ ಮಾಡುತ್ತೇನೆ” ಎಂದು ಹೇಳುವ ಮೂಲಕ ತಮ್ಮ ವಿರುದ್ಧ ಹರಿದಾಡುತ್ತಿದ್ದ ರಾಜೀನಾಮೆ ವದಂತಿಗಳಿಗೆ ಪೂರ್ಣವಿರಾಮ ಇಟ್ಟಿದ್ದಾರೆ.

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Share. Facebook Twitter LinkedIn WhatsApp Email

Related Posts

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

3 Mins Read

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ

1 Min Read

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

2 Mins Read
Recent News

​ಭಾರತದ ಆರ್ಥಿಕತೆಗೆ ಭರ್ಜರಿ ವೇಗ: 2026ನೇ ಆರ್ಥಿಕ ವರ್ಷದಲ್ಲಿ ಶೇ. 7.7ರಷ್ಟು ಜಿಡಿಪಿ ದಾಖಲು!

ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

​ಸಿಂಧೂ ನದಿ ನೀರು ಒಪ್ಪಂದ: ಪಾಕಿಸ್ತಾನದ ಉಗ್ರ ಕೃತ್ಯಗಳ ವಿರುದ್ಧ ಭಾರತದ ಕಠಿಣ ನಿಲುವು, ಒಪ್ಪಂದ ಅಮಾನತು ಮುಂದುವರಿಕೆ

​ಲೆಬನಾನ್‌ನಲ್ಲಿ ಹೆಚ್ಚಿದ ಬಿಕ್ಕಟ್ಟು: ಹಿಜ್ಬುಲ್ಲಾಗೆ ಬೆಂಬಲ ಘೋಷಿಸಿದ ಇರಾನ್, ಶಾಂತಿ ಮಾತುಕತೆಗಳ ಭವಿಷ್ಯ ಅತಂತ್ರ

State News
KARNATAKA

ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನೂತನ ಖಾತೆಗಳ ಹಂಚಿಕೆಯಾಗುತ್ತಿದ್ದಂತೆಯೇ ಕೆಲವೆಡೆ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಹಿರಿಯ ನಾಯಕ ಹಾಗೂ ಇಂಧನ ಸಚಿವ…

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.