ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ರಚನೆ ಬಗ್ಗೆ ಮಾತನಾಡಿರುವಂತ ಸಾರಿಗೆ ಸಚಿವ ಬಿ.ಶ್ರೀರಾಮುಲು, ತನ್ನ ಪ್ರಾಣ ಸ್ನೇಹಿತನನ್ನು ಹಾಡಿ ಹೊಗಳಿಸಿದ್ದಾರೆ. ಅಲ್ಲದೇ ಅವರನ್ನು ಬಿಜೆಪಿ ಎಂದಿಗೂ ಬಿಟ್ಟಿಲ್ಲ ಎಂದಿದ್ದಾರೆ.

ಈ ಕುರಿತಂತೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಜನಾರ್ಧನ ರೆಡ್ಡಿ ಬುದ್ದಿವಂತ, ಎಲ್ಲವನ್ನು ತಿಳಿದವರು ಹಾಗೂ ಅನುಭವಿ ವ್ಯಕ್ತಿ ಎಂದರು.

ಪ್ರಾಣ ಸ್ನೇಹಿತನಾಗಿದ್ದ ಜನಾರ್ಧನ ರೆಡ್ಡಿ ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದರು. ಬಿಜೆಪಿ ಪಕ್ಷ ಕೂಡ ಅವರಿಗೆ ಶಕ್ತಿಯಾಗಿ ನಿಂತಿತ್ತು. ವೈಯಕ್ತಿಕವಾಗಿ ಅವರು ಹೊಸ ಪಕ್ಷ ಮಾಡಿದ್ದಾರೆ. ಬಿಜೆಪಿ ಜನಾರ್ಧನ ರೆಡ್ಡಿಯನ್ನು ಯಾವತ್ತೂ ಬಿಟ್ಟುಕೊಟ್ಟಿಲ್ಲ. ಅವರು ಕೂಡ ಪಕ್ಷವನ್ನು ಬಿಟ್ಟಿರಲಿಲ್ಲ ಎಂದು ಹೇಳಿದರು.

ನಾನು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದೇನೆ. ಮಾಜಿ ಸಚಿವ ಜನಾರ್ಧನ ರೆಡ್ಡಿ ಬಗ್ಗೆ ಈಗ ಏನೂ ಮಾತನಾಡುವುದಿಲ್ಲ. ಕಾಲ ಬಂದಾಗ ಉತ್ತರಿಸುವೆ ಎಂಬುದಾಗಿ ಹೇಳಿದರು.

BIGG NEWS : ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ : ಶಾಸಕ ಸಿ.ಟಿ. ರವಿ ಹೇಳಿದ್ದೇನು ಗೊತ್ತಾ?

BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

Share.
Exit mobile version