Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ಯಾಟಲಿಸ್ಟ್ ಕೈಪಿಡಿ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್‌ ಖರ್ಗೆ: ದೇಶದ ಜಿಸಿಸಿಗಳಲ್ಲಿ ಶೇ.30ಕ್ಕಿಂತಲೂ ಹೆಚ್ಚು ಕರ್ನಾಟಕದಲ್ಲಿ ನೆಲೆ

09/09/2025 10:11 PM

ರಾತ್ರಿ ವೇಳೆ ಈ ಪಾನೀಯ ಒಂದು ಗ್ಲಾಸ್ ಕುಡಿದ್ರೂ, ಹೊಟ್ಟೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆ ದೂರ, ನೆಮ್ಮದಿ ನಿದ್ದೆ ನಿಮ್ಮದಾಗುತ್ತೆ!

09/09/2025 10:04 PM

CRIME NEWS: ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ವಿರುದ್ಧ FIR ದಾಖಲು

09/09/2025 10:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರದಿಂದ ‘ಬಸ್ ಖರೀದಿ’ ಅಲ್ಲ, ಖಾಸಗಿ ಸಂಸ್ಥೆಗಳ ಮೂಲಕ ‘ಬಸ್ ಬಾಡಿಗೆಗೆ’: ಕರ್ನಾಟಕ ಕಾಂಗ್ರೆಸ್ ಸ್ಪಷ್ಟನೆ
KARNATAKA

ಕೇಂದ್ರದಿಂದ ‘ಬಸ್ ಖರೀದಿ’ ಅಲ್ಲ, ಖಾಸಗಿ ಸಂಸ್ಥೆಗಳ ಮೂಲಕ ‘ಬಸ್ ಬಾಡಿಗೆಗೆ’: ಕರ್ನಾಟಕ ಕಾಂಗ್ರೆಸ್ ಸ್ಪಷ್ಟನೆ

By kannadanewsnow0909/09/2025 2:56 PM

ಬೆಂಗಳೂರು: ಕೇಂದ್ರದಿಂದ ಬಿಗ್ ಗಿಫ್ಟ್, ರಾಜ್ಯಕ್ಕೆ ಶೀಘ್ರ 5250 ಹೊಸ ಎಲೆಕ್ಟ್ರಿಕ್ ಬಸ್ ಎಂಬುದು ಸುಳ್ಳು. ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ, ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ. ಕೇಂದ್ರ ಸರ್ಕಾರದಿಂದ ಬಸ್ ಖರೀದಿ ಅಲ್ಲ, ಖಾಸಗಿ ಸಂಸ್ಥೆಗಳ ಮೂಲಕ ಬಸ್ ಬಾಡಿಗೆಗೆ ವ್ಯವಸ್ಥೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ತಿರುಗೇಟು ನೀಡಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು ‘ಬಿಜೆಪಿ ಕರ್ನಾಟಕ ಎಲೆಕ್ಟ್ರಿಕ್ ಬಸ್ಸುಗಳನ್ನು ಖಾಸಗಿಯವರಿಂದ ಬಾಡಿಗೆಗೆ ಪಡೆದು ಸಾರಿಗೆ ಸಂಸ್ಥೆಗಳಿಗೆ ನೀಡಿರುವುದನ್ನು ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ/ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ? ಒಂದಷ್ಟಾದರೂ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಿ, ನಿಮ್ಮ ಮಾಹಿತಿಗಾಗಿ ಓದಿಕೊಳ್ಳಿ ಎಂದಿದೆ.

PM e-Drive / PM e-Seva ಯೋಜನೆಗಳಡಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ 5250 ಎಲೆಕ್ಟ್ರಿಕ್ ಬಸ್ಸುಗಳನ್ನು‌ ಕೇಂದ್ರ ಸರ್ಕಾರ ಖರೀದಿಸಿ ನೀಡಿದೆ ಎಂಬ ಭ್ರಮೆಯಲ್ಲಿ‌ ತಪ್ಪು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ನೀವು ಹಂಚಿಕೊಂಡು ಸಂಭ್ರಮಿಸಿದ ವಾಸ್ತವ ಸತ್ಯ ಏನೆಂದರೆ..

ನಿಮ್ಮ ಕೇಂದ್ರ‌ ಸರ್ಕಾರ ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸಲು ಖಾಸಗಿ ಕಂಪನಿಗಳಿಗೆ ಅಂದರೆ ಒಲೆಕ್ಟ್ರಾ, ಜೆ.ಬಿ.ಎಂ, ಟಾಟಾ, ಸ್ವಿಪ್ಟ್ ಮೊಬಿಲಿಟಿ ಅವರಿಗೆ ಅನುದಾನ ನೀಡಿ, ಖಾಸಗಿಯವರು ಸಾರಿಗೆ ಸಂಸ್ಥೆಗಳಿಗೆ ಆ ಬಸ್ಸುಗಳನ್ನು ಬಾಡಿಗೆಗೆ/ಲೀಸ್ ಆಧಾರದಲ್ಲಿ ಇಂತಿಷ್ಟು ವರ್ಷಗಳಿಗೆ ಎಂದು ನೀಡುತ್ತಿದ್ದಾರೆ ಎಂಬುದು ತಮಗೆ ತಿಳಿದಿದೆಯೇ?ಕೇಂದ್ರ ಸರ್ಕಾರವು ಅನುದಾನವನ್ನು ಖಾಸಗಿಯವರಿಗೆ ನೀಡಿ, ಸಾರಿಗೆ ಸಂಸ್ಥೆಗಳಿಗೆ ಶೂನ್ಯ ಅನುದಾನ ನೀಡುತ್ತಿರುವ ಬಗ್ಗೆ ಅರಿವಿದೆಯೇ ?

ಕೇಂದ್ರ ಸರ್ಕಾರವು ಅನುದಾನವನ್ನು ಖಾಸಗಿಯವರಿಗೆ ನೀಡಿ, ಸಾರಿಗೆ ಸಂಸ್ಥೆಗಳಿಗೆ ಶೂನ್ಯ ಅನುದಾನ ನೀಡುತ್ತಿರುವ ಬಗ್ಗೆ ಅರಿವಿದೆಯೇ ?

ಎಲೆಕ್ಟ್ರಿಕ್ ಬಸ್ಸುಗಳ ಚಾಲಕರು ಖಾಸಗಿಯವರು, ಬಸ್ಸುಗಳ ನಿರ್ವಹಣೆ ಖಾಸಗಿಯವರದ್ದು, ಸಾರಿಗೆ ಸಂಸ್ಥೆಗಳವರದ್ದಲ್ಲ ಎಂಬುದರ ಬಗ್ಗೆ ಏನಾದರೂ ಮಾಹಿತಿಯಿದೆಯೇ?

ಎಲೆಕ್ಟ್ರಿಕ್ ಬಸ್ ಘಟಕ‌ ಮತ್ತು ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲು ಯಾವುದೇ ಆರ್ಥಿಕ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂಬುದು ನಿಮಗೆ ಗೊತ್ತೇ?

ರಾಜ್ಯದಲ್ಲಿರುವ ಕೌಶಲ್ಯಪೂರ್ಣ ಮಾನವಶಕ್ತಿಯನ್ನು ಬಳಸಿಕೊಳ್ಳಲು, ಸಂಪನ್ಮೂಲಗಳನ್ನು ಅತ್ಯುತ್ತಮವಾಗಿಸಲು, ಸಾರಿಗೆ ಸಂಸ್ಥೆಗಳನ್ನು ಬಲಗೊಳಿಸಲು ಕೇಂದ್ರ ಸರ್ಕಾರ ಯೋಜನೆ‌ ರೂಪಿಸದೆ ಖಾಸಗೀಕರಣದೆಡೆಗೆ ಮುಖ ಮಾಡಿದೆ ಇದನ್ನು ನೀವು ಒಪ್ಪುತ್ತೀರಾ?

ದೇಶದ್ಯಾದಂತ ಎಲ್ಲ ನಗರಗಳಿಗೆ ಸೇರಿ PM e- Drive ನಲ್ಲಿ 10900 ಎಲೆಕ್ಟ್ರಿಕ್ ಬಸ್ಸುಗಳನ್ನು ಘೋಷಣೆ‌ ಮಾಡಲಾಗಿದೆ. ಅದರಲ್ಲಿ ನಮ್ಮ ರಾಜ್ಯಕ್ಕೆ 4500 ಬಸ್ಸುಗಳನ್ನು ನೀಡಿರುವುದು (PM e -Seva ಹೊರತುಪಡಿಸಿ) ನಮ್ಮ ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಆಸಕ್ತಿ ಮತ್ತು ನಿರಂತರ ಪ್ರಯತ್ನದ ಫಲ ಎಂಬ ಅರಿವಿದೆಯೇ?

ಇದರೊಂದಿಗೆ ಪ್ರಮುಖ‌‌ ಮಾಹಿತಿ‌ ಗಮನದಲ್ಲಿಟ್ಟುಕೊಳ್ಳಿ. ದೇಶದ ಬೇರೆ ಯಾವುದೇ ರಾಜ್ಯಗಳು ಎಲೆಕ್ಟ್ರಿಕ್ ಬಸ್ಸುಗಳ‌ ಕಾರ್ಯಾಚರಣೆ‌ ಬಗ್ಗೆ ಆಸಕ್ತಿ ತೋರದಿರುವುದರಿಂದ ಕರ್ನಾಟಕ‌ ರಾಜ್ಯಕ್ಕೆ ಹೆಚ್ಚಿನ‌‌ ಎಲೆಕ್ಟ್ರಿಕ್ ಬಸ್ಸುಗಳ ಘೋಷಣೆಯಾಗಿದೆ.

UPA ಸರ್ಕಾರದ ಹತ್ತು ವರ್ಷಗಳ ಆಡಳಿತದಲ್ಲಿ (2004-2014) ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದಾಗ ಸಾರಿಗೆ ಸಂಸ್ಥೆಗಳನ್ನು ಸದೃಢಗೊಳಿಸಲು ತೆಗೆದುಕೊಂಡ‌ ಕ್ರಮಗಳ ಬಗ್ಗೆ ಕೆಲವೊಂದು ವಿಷಯಗಳನ್ನು ನೆನಪಿಸುವುದು ಸಮಂಜಸ ಎನಿಸುತ್ತದೆ.

ಬೆಂಗಳೂರು ನಗರದಾದ್ಯಂತ 10 ಮತ್ತು ಮೈಸೂರು ನಗರದಲ್ಲಿ 7 ಟಿ.ಟಿ.ಎಂ.ಸಿ ಗಳನ್ನು ನಿರ್ಮಿಸಲು ಅನುದಾನವನ್ನು ನೀಡಿದ್ದರು. ಇಂದು ಅವುಗಳ ಮೌಲ್ಯ ರೂ. 10,000 ಸಾವಿರ ಕೋಟಿ ದಾಟುತ್ತದೆ.

ದೇಶದ್ಯಾಂತ ಸಣ್ಣ ಮತ್ತು ಮಧ್ಯಮ ನಗರಗಳಲ್ಲಿ ನಗರ ಸಾರಿಗೆ ಬಸ್ಸುಗಳ‌ ಕಾರ್ಯಾಚರಣೆ ಪ್ರಾರಂಭಗೊಂಡಿದ್ದೇ ಮನಮೋಹನ ಸಿಂಗ್ ರವರ ಸರ್ಕಾರದ ಅವಧಿಯಲ್ಲಿ ಎಂಬುದು ನೆನಪಿದೆಯೇ?

ಅಂದು ಕೆಎಸ್ ಆರ್ ಟಿ ಸಿ, ಬಿ.ಎಂ.ಟಿ.ಸಿ, ವಾಯವ್ಯ ಸಾರಿಗೆ ಹಾಗೂ ಕಲ್ಯಾಣ‌ ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ‌ ಒಟ್ಟು 2685 ನಗರ ಸಾರಿಗೆ ಬಸ್ಸುಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಶೇ.80ರ ವರೆಗೆ ಅನುದಾನ ನೀಡಿತ್ತು.

ಇದರ ಫಲವಾಗಿ ಇಂದು ರಾಜ್ಯದ 31 ಜಿಲ್ಲೆಗಳಲ್ಲೂ ಉದಾಹರಣೆಗೆ ಕಲಬುರಗಿ, ಕೊಪ್ಪಳ, ಹುಬ್ಬಳ್ಳಿ, ಧಾರವಾಡ, ಹಾಸನ,ಬೆಳಗಾವಿ, ತುಮಕೂರು, ದಾವಣಗೆರೆ, ಶಿವಮೊಗ್ಗ ‌ಹಾಗೂ ಇತರೆ ಪಟ್ಟಣಗಳಲ್ಲಿ ನೂರಾರು ಸಂಖ್ಯೆಯಲ್ಲಿ ನಗರ ಸಾರಿಗೆ ಬಸ್ಸುಗಳನ್ನು ನೋಡಬಹುದಾಗಿದೆ.

ಯಾವುದೇ ಮಾಹಿತಿಯನ್ನು ನಿಖರವಾಗಿ ತಿಳಿದುಕೊಳ್ಳದೇ, ವೃಥಾ ಪ್ರಚಾರ ಪಡೆಯುವ ಮನಸ್ಥಿತಿಯಿಂದ, ಅಪಪ್ರಚಾರದಲ್ಲಿ ತೊಡಗಿರುವ ನಿಮ್ಮ ದುರ್ಬುದ್ದಿಗೆ ಆದಷ್ಟು ಬೇಗ ಸರಿಯಾದ ಔಷಧ ಹುಡುಕಿಕೊಳ್ಳಿ!

'@BJP4Karnataka ಎಲೆಕ್ಟ್ರಿಕ್ ಬಸ್ಸುಗಳನ್ನು ಖಾಸಗಿಯವರಿಂದ ಬಾಡಿಗೆಗೆ ಪಡೆದು ಸಾರಿಗೆ ಸಂಸ್ಥೆಗಳಿಗೆ ನೀಡಿರುವುದನ್ನು ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ/ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ?
ಒಂದಷ್ಟಾದರೂ ಸಾಮಾನ್ಯ… pic.twitter.com/UMwqPGA1FJ

— Karnataka Congress (@INCKarnataka) September 8, 2025

Share. Facebook Twitter LinkedIn WhatsApp Email

Related Posts

ಕ್ಯಾಟಲಿಸ್ಟ್ ಕೈಪಿಡಿ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್‌ ಖರ್ಗೆ: ದೇಶದ ಜಿಸಿಸಿಗಳಲ್ಲಿ ಶೇ.30ಕ್ಕಿಂತಲೂ ಹೆಚ್ಚು ಕರ್ನಾಟಕದಲ್ಲಿ ನೆಲೆ

09/09/2025 10:11 PM2 Mins Read

CRIME NEWS: ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ವಿರುದ್ಧ FIR ದಾಖಲು

09/09/2025 10:00 PM1 Min Read

ನೇಪಾಳದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತೆ- ಸಿಎಂ ಸಿದ್ಧರಾಮಯ್ಯ

09/09/2025 9:38 PM1 Min Read
Recent News

ಕ್ಯಾಟಲಿಸ್ಟ್ ಕೈಪಿಡಿ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್‌ ಖರ್ಗೆ: ದೇಶದ ಜಿಸಿಸಿಗಳಲ್ಲಿ ಶೇ.30ಕ್ಕಿಂತಲೂ ಹೆಚ್ಚು ಕರ್ನಾಟಕದಲ್ಲಿ ನೆಲೆ

09/09/2025 10:11 PM

ರಾತ್ರಿ ವೇಳೆ ಈ ಪಾನೀಯ ಒಂದು ಗ್ಲಾಸ್ ಕುಡಿದ್ರೂ, ಹೊಟ್ಟೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆ ದೂರ, ನೆಮ್ಮದಿ ನಿದ್ದೆ ನಿಮ್ಮದಾಗುತ್ತೆ!

09/09/2025 10:04 PM

CRIME NEWS: ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ವಿರುದ್ಧ FIR ದಾಖಲು

09/09/2025 10:00 PM

ನೇಪಾಳದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತೆ- ಸಿಎಂ ಸಿದ್ಧರಾಮಯ್ಯ

09/09/2025 9:38 PM
State News
KARNATAKA

ಕ್ಯಾಟಲಿಸ್ಟ್ ಕೈಪಿಡಿ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್‌ ಖರ್ಗೆ: ದೇಶದ ಜಿಸಿಸಿಗಳಲ್ಲಿ ಶೇ.30ಕ್ಕಿಂತಲೂ ಹೆಚ್ಚು ಕರ್ನಾಟಕದಲ್ಲಿ ನೆಲೆ

By kannadanewsnow0909/09/2025 10:11 PM KARNATAKA 2 Mins Read

ಬೆಂಗಳೂರು: ಕರ್ನಾಟಕವು ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರದ (ಜಿಸಿಸಿ) ಭೂದೃಶ್ಯವನ್ನು ಸತತವಾಗಿ ಮುನ್ನಡೆಸುತ್ತಲೇ ಇದ್ದು, ಕರ್ನಾಟಕವು ದೇಶದ ಜಿಸಿಸಿಗಳಲ್ಲಿ ಶೇ.30ಕ್ಕಿಂತ ಹೆಚ್ಚು…

CRIME NEWS: ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ವಿರುದ್ಧ FIR ದಾಖಲು

09/09/2025 10:00 PM

ನೇಪಾಳದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತೆ- ಸಿಎಂ ಸಿದ್ಧರಾಮಯ್ಯ

09/09/2025 9:38 PM

ಸೆ.22ರಿಂದ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಜನತೆಗೆ ಈ ಮನವಿ ಮಾಡಿದ ಸಿಎಂ ಸಿದ್ಧರಾಮಯ್ಯ

09/09/2025 9:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.